Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಮಮಂದಿರದ ಶಿಲಾನ್ಯಾಸಕ್ಕೆ...

ರಾಮಮಂದಿರದ ಶಿಲಾನ್ಯಾಸಕ್ಕೆ ಆಹ್ವಾನಿಸಬೇಕೆಂಬ ಕಾಂಗ್ರೆಸ್ ಬೇಡಿಕೆ ಹಾಸ್ಯಾಸ್ಪದ: ಸದಾನಂದ ಗೌಡ

ವಾರ್ತಾಭಾರತಿವಾರ್ತಾಭಾರತಿ4 Aug 2020 9:18 PM IST
share
ರಾಮಮಂದಿರದ ಶಿಲಾನ್ಯಾಸಕ್ಕೆ ಆಹ್ವಾನಿಸಬೇಕೆಂಬ ಕಾಂಗ್ರೆಸ್ ಬೇಡಿಕೆ ಹಾಸ್ಯಾಸ್ಪದ: ಸದಾನಂದ ಗೌಡ

ಬೆಂಗಳೂರು, ಆ. 4: ರಾಮಮಂದಿರ ನಿರ್ಮಾಣದ ವಿರೋಧಿಗಳಾಗಿರುವ ಕಾಂಗ್ರೆಸಿಗರು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನ ನೀಡಬೇಕೆಂಬ ಅವರ ಬೇಡಿಕೆ ಹಾಸ್ಯಾಸ್ಪದವಾಗಿದೆ. ಮೊದಲನೆಯಯದಾಗಿ ಇದು ಸರಕಾರಿ ಕಾರ್ಯಕ್ರಮವಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮಂದಿರ ನಿರ್ಮಾಣಕ್ಕಾಗಿ ರಚಿಸಲಾಗಿರುವ ಟ್ರಸ್ಟ್ ಸಂಘಟಿಸುತ್ತಿರುವ ಕಾರ್ಯಕ್ರಮವಿದು. ಯಾರನ್ನು ಆಮಂತ್ರಿಸಬೇಕು, ಯಾರನ್ನು ಆಮಂತ್ರಿಸಬಾರದು ಎಂಬುದು ಸಂಘಟಕರಿಗೆ ಬಿಟ್ಟ ವಿಚಾರ. ಅಷ್ಟಕ್ಕೂ ಕಾಂಗ್ರೆಸ್ಸಿಗೂ ರಾಮಮಂದಿರ ನಿರ್ಮಾಣಕ್ಕೂ ಎತ್ತಣದಿಂದೆತ್ತಣ ಸಂಬಂಧ? ಮೊದಲಿನಿಂದಲೂ ಅಯೋಧ್ಯೆ ಚಳವಳಿಯನ್ನು ಹತ್ತಿಕ್ಕಲು ಪ್ರಯತ್ನಿಸಿದವರು ಕಾಂಗ್ರೆಸ್ಸಿಗರು. ಕರಸೇವಕರ ಮೇಲೆ ಗುಂಡುಹಾರಿಸಿದವರು. ಅಕ್ರಮ ಬಾಬರಿ ಕಟ್ಟಡ ನೆಲಸಮವಾದಾಗ ಉತ್ತರ ಪ್ರದೇಶದಲ್ಲಿನ ಬಿಜೆಪಿ ಸರಕಾರವನ್ನ ವಜಾ ಮಾಡಿದವರು ಕಾಂಗ್ರೆಸ್ಸಿಗರು.

ಮತ್ತೆ, ವಿವಾದಾತ್ಮಕ ಬಾಬರಿ ಕಟ್ಟಡವನ್ನು ಪುನರ್ ನಿರ್ಮಾಣ ಮಾಡಲು ಯೋಚಿಸಿದವರು ಕಾಂಗ್ರೆಸ್ಸಿಗರು. ರಾಮಜನ್ಮಭೂಮಿ ವಿವಾದವನ್ನು ಶೀಘ್ರ ಇತ್ಯರ್ಥಗೊಳಿಸಲು ಕೋಟ್ಯಂತರ ಶ್ರದ್ಧಾಳುಗಳು ಹಂಬಲಿಸುತ್ತಿದ್ದರೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪರವಾಗಿ ಹಾಜರಾಗುವ ಇದೇ ಕಾಂಗ್ರೆಸ್ಸಿನ ಘಟಾನುಘಟಿ ವಕೀಲರು ಚುನಾವಣೆ ನಂತರ ಪ್ರಕರಣದ ವಿಚಾರಣೆ ಮಾಡುವಂತೆ ಕೋರ್ಟಿನಲ್ಲಿ ವಾದಿಸುತ್ತಾರೆ. ಭಾರತ-ಶ್ರೀಲಂಕಾ ನಡುವೆ ಇರುವ ಪಾರಂಪರಿಕ ರಾಮಸೇತು ಅವಶೇಷಗಳನ್ನು ಸೇತುಸಮುದ್ರಮ್ ಯೋಜನೆ ಹೆಸರಲ್ಲಿ ನಾಶಮಾಡಲು ಮುಂದಾವರು ಕಾಂಗ್ರೆಸ್ಸಿಗರು.

ಹಾಗೆಯೇ ಶ್ರೀರಾಮ ಇದ್ದ ಅನ್ನುವುದಕ್ಕೆ ಯಾವುದೇ ಐತಿಹಾಸಿಕ ದಾಖಲೆ ಇಲ್ಲ ಎಂದು ಸುಪ್ರೀಂ ಕೋರ್ಟ್‍ನಲ್ಲಿ 2007ರಲ್ಲಿ ಅಫಿಡವಿಟ್ ಸಲ್ಲಿಸಿದವರು ಕಾಂಗ್ರೆಸ್ಸಿಗರು. ಮೊನ್ನೆಯಷ್ಟೆ ಶಿಲಾನ್ಯಾಸವನ್ನು ಮುಂದೂಡುವಂತೆ ತಮ್ಮ ಚೇಲಾಗಳ ಮೂಲಕ ಪಿಐಎಲ್ ದಾಖಲಿಸಲು ಹೋಗಿ ಕೋರ್ಟಿನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಇಂಥ ಕಾಂಗ್ರೆಸ್ಸಿಗರು ಇಂದು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನ ಬಯಸುತ್ತಿದ್ದಾರೆ. ಅತ್ತೂ ಕರೆದು ಈ ಐತಿಹಾಸಿಕ ಕ್ಷಣದ ಭಾಗವಾಗಲು ಪ್ರಯತ್ನಿಸುತ್ತಿದ್ದಾರೆ. ಅವರನ್ನ ಹತಾಶೆ ಎಷ್ಟರಮಟ್ಟಿಗೆ ಆವರಿಸಿದೆ ಎಂಬುದರ ದ್ಯೋತಕವಿದು. ಭಗವಾನ್ ರಾಮಚಂದ್ರ ಅವರಿಗೆ ಇನ್ನಾದರೂ ಸದ್ಬುದ್ಧಿ ಕರುಣಿಸಲಿ ಎಂದಷ್ಟೇ ಈ ಸಂದರ್ಭದಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X