Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಭಾರತ-ಯುಎಇ ಪ್ರಯಾಣ ಕಾರಿಡಾರ್...

ಭಾರತ-ಯುಎಇ ಪ್ರಯಾಣ ಕಾರಿಡಾರ್ ಆ.31ರವರೆಗೆ ವಿಸ್ತರಣೆ: ಯುಎಇಗೆ ಭಾರತದ ರಾಯಭಾರಿ

ವಾರ್ತಾಭಾರತಿವಾರ್ತಾಭಾರತಿ4 Aug 2020 10:32 PM IST
share
ಭಾರತ-ಯುಎಇ ಪ್ರಯಾಣ ಕಾರಿಡಾರ್ ಆ.31ರವರೆಗೆ ವಿಸ್ತರಣೆ: ಯುಎಇಗೆ ಭಾರತದ ರಾಯಭಾರಿ

ಅಬುಧಾಬಿ (ಯುಎಇ), ಆ. 4: ಭಾರತ ಮತ್ತು ಯುಎಇ ನಡುವಿನ ತಾತ್ಕಾಲಿಕ ಪ್ರಯಾಣ ಕಾರಿಡಾರ್ (ಎರಡು ದೇಶಗಳ ನಡುವಿನ ವಿಮಾನಯಾನ) ಆಗಸ್ಟ್ 31ರವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಯುಎಇಗೆ ಭಾರತದ ರಾಯಭಾರಿಯಾಗಿರುವ ಪವನ್ ಕಪೂರ್ ಹೇಳಿದ್ದಾರೆ.

ಯುಎಇಗೆ ಬರುವ ಮತ್ತು ಯುಎಇಯಿಂದ ಹೊರಹೋಗುವ ಎಲ್ಲ ವಿಮಾನಗಳ ಟಿಕೆಟ್‌ಗಳು ಆಗಸ್ಟ್ 5ರಿಂದ ಖರೀದಿಗೆ ಲಭ್ಯವಿರುತ್ತವೆ ಎಂದು ಸೋಮವಾರ ‘ಖಲೀಜ್ ಟೈಮ್ಸ್’ಗೆ ನೀಡಿದ ಸಂದರ್ಶನವೊಂದರಲ್ಲಿ ಅವರು ಹೇಳಿದ್ದಾರೆ.

‘‘ವಿಧಿವಿಧಾನಗಳನ್ನು ನಾವು ಸುಲಭಗೊಳಿಸುತ್ತಿದ್ದೇವೆ. ಈ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಯುಎಇ ಮತ್ತು ಭಾರತದ ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಎರಡೂ ಮಾರ್ಗಗಳಿಗಾಗಿ ತಮ್ಮ ಪ್ರಯಾಣಿಕರನ್ನು ಆನ್‌ಲೈನ್ ಅಥವಾ ತಮ್ಮ ಏಜಂಟ್‌ಗಳ ಮೂಲಕ ಅಥವಾ ಟಿಕೆಟ್ ಮಾರಾಟದ ಕಚೇರಿಗಳ ಮೂಲಕ ನೋಂದಾಯಿಸಲು ಸಾಧ್ಯವಾಗುತ್ತದೆ’’ ಎಂದು ಅವರು ನುಡಿದರು.

ಭಾರತವು ತನ್ನ ವಾಣಿಜ್ಯ ವಿಮಾನ ಯಾನವನ್ನು ಆಗಸ್ಟ್ ಕೊನೆಯವರೆಗೆ ಸ್ಥಗಿತಗೊಳಿಸಿದೆ. ಆದರೂ, ಜುಲೈ 12ರಿಂದ 26ವರೆಗೆ ಎರಡು ವಾರಗಳ ಪ್ರಯಾಣ ಕಾರಿಡಾರನ್ನು ತೆರೆಯಲು ಭಾರತ ಮತ್ತು ಯುಎಇಗಳು ಒಪ್ಪಿಕೊಂಡಿವೆ. ಈಗ ಅದನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗುತ್ತಿದೆ.

ಎರಡು ವಾರಗಳ ಅವಧಿಯಲ್ಲಿ ಭಾರತದಿಂದ ಯುಎಇಗೆ ಸುಮಾರು 23,000ದಿಂದ 25,000 ಭಾರತೀಯರು ಪ್ರಯಾಣಿಸಿದ್ದಾರೆ ಹಾಗೂ ಇದಕ್ಕಿಂತಲೂ ಹೆಚ್ಚಿನ ಮಂದಿ ಪ್ರಯಾಣಕ್ಕಾಗಿ ಯುಎಇ ಸರಕಾರದ ಅನುಮೋದನೆಯನ್ನು ಎದುರು ನೋಡುತ್ತಿದ್ದಾರೆ ಎಂದು ಕಪೂರ್ ತಿಳಿಸಿದರು.

ಒಂದು ತಿಂಗಳ ಪ್ರಯಾಣ ಅವಧಿಯಲ್ಲಿ 600ರಿಂದ 700 ವಿಮಾನಗಳು ಹಾರಾಟ ನಡೆಸಲಿವೆ ಎಂದು ಅವರು ನುಡಿದರು. ‘‘ಆದರೆ, ಇದೇನೂ ಅಂತಿಮವಲ್ಲ. ಬೇಡಿಕೆ ಹೆಚ್ಚಿದೆ ಎಂದು ನಮಗೆ ಅನಿಸಿದರೆ, ವಿಮಾನಗಳ ಸಂಖ್ಯೆಯನ್ನು ನಾವು ಹೆಚ್ಚಿಸಬಹುದಾಗಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X