Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆ.7, 8 ರಂದು ಫೇಸ್‍ಬುಕ್ ಲೈವ್ ಮೂಲಕ...

ಆ.7, 8 ರಂದು ಫೇಸ್‍ಬುಕ್ ಲೈವ್ ಮೂಲಕ ಅಹೋರಾತ್ರಿ ‘ಕಾಡುವ ಕಿರಂ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 Aug 2020 12:07 AM IST
share

ಬೆಂಗಳೂರು, ಆ.4: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಹಾಗೂ ಹಿರಿಯ ಕವಿ ಕಿರಂ ಅವರ ನೆನಪಿನಾರ್ಥವಾಗಿ ಆ.7 ಮತ್ತು 8 ರಂದು ಫೇಸ್‍ಬುಕ್ ಲೈವ್ ಮೂಲಕ ಅಹೋರಾತ್ರಿ ಕಾಡುವ ಕಿರಂ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜನಸಂಸ್ಕೃತಿ ಪ್ರತಿಷ್ಠಾನ, ಕಾವ್ಯಮಂಡಲ, ಬೆಂಗಳೂರು ಆರ್ಟ್ ಫೌಂಡೇಷನ್, ಅವಿರತ ಸಂಸ್ಥೆಗಳ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಪತ್ರಕರ್ತ ಹಾಗೂ ಕವಿ ಜಿ.ಪಿ.ಬಸವರಾಜು ಮಾಡಲಿದ್ದಾರೆ.

ಅನಂತರ 10:45 ರಿಂದ 11:30 ರವರೆಗೆ ವಿಶೇಷ ಉಪನ್ಯಾಸಗಳು ನಡೆಯಲಿದ್ದು, ಮುಖ್ಯವಾಗಿ ಸೃಜನಶೀಲ ಕುಮಾರವ್ಯಾಸ ಕುರಿತು ಕಾಳೇಗೌಡ ನಾಗವಾರ ಹಾಗೂ ಹೊಸ ಶಿಕ್ಷಣ ನೀತಿ ಮತ್ತು ಭಾರತೀಯ ಭಾಷೆಗಳ ಸವಾಲುಗಳು ವಿಷಯದ ಕುರಿತು ರಂಗನಾಥ ಕಂಟನಕುಂಟೆ ವಿಷಯ ಮಂಡನೆ ಮಾಡಲಿದ್ದಾರೆ.

ಕಾವ್ಯ ನಮನ ನಡೆಯಲಿದ್ದು, ಆರ್.ಕೆ.ನಲ್ಲೂರು ಪ್ರಸಾದ್, ಎಲ್.ಹನುಮಂತಯ್ಯ, ನಾಗತಿಹಳ್ಳಿ ಚಂದ್ರಶೇಖರ್, ಬಸು ಸೂಳಿಭಾವಿ, ರಂಗನಾಥ ಕಂಟನಕುಂಟೆ, ಶೃತಿ ಬಿ.ಆರ್ ಹಾಗೂ ಮಂಗಳಾ ಸೇರಿದಂತೆ ಅನೇಕರು ಪಾಲ್ಗೊಳ್ಳುವರು. ಇದೇ ವೇಳೆ ಕಿ.ರಂ. ಪ್ರಶಸ್ತಿ ಪ್ರದಾನ ನಡೆಯಲಿದ್ದು, ಹಿರಿಯ ವಿಮರ್ಶಕ ಜಿ.ರಾಜಶೇಖರ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ವಿಶೇಷ ಉಪನ್ಯಾಸ ನಡೆಯಲಿದ್ದು ಮಹಾದೇವಿ ಅಕ್ಕನ ಕಾವ್ಯ ಕುರಿತು ವಿಶೇಷ ಉಪನ್ಯಾಸ: ಡಾ.ಎಂ ಉಷಾ ಮಾತನಾಡಲಿದ್ದಾರೆ. ಬಳಿಕ ಕಾವ್ಯ ನಮನ ನಡೆಯಲಿದ್ದು, ಕಾದಂಬಿನಿ ರಾವಿ, ಕೆ.ಷರೀಫಾ, ಮಮತಾ ಜಿ ಸಾಗರ, ಎಂ.ಆರ್.ಕಮಲ, ಪ್ರತಿಭಾ ನಂದಕುಮಾರ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3ಕ್ಕೆ ಕಾವ್ಯ ಮತ್ತು ಸಮಕಾಲೀನ ಸಮಾಜ ವಿಷಯದ ಬಗ್ಗೆ ಪ್ರೋ. ಪುರುಷೋತ್ತಮ ಬಿಳಿಮಲೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ನಂತರ ನುಡಿನಮನ ನಡೆಯಲಿದೆ ಹಾಗೂ ಸವಿತಾ ನಾಗಭೂಷಣ ಅವರಿಗೆ ಕಿ.ರಂ. ಪ್ರಶಸ್ತಿ ಪ್ರದಾನ ನಡೆಯಲಿದೆ. ಬಳಿಕ ಕಾವ್ಯ ನಮನ ನಡೆಯಲಿದೆ.

ಸಂಜೆ 6 ಗಂಟೆಗೆ ಎಚ್.ಎಸ್. ಶಿವಪ್ರಕಾಶರ ಕಾವ್ಯ ಬಗ್ಗೆ ಪ್ರಕಾಶ್ ಬಡವನಹಳ್ಳಿ ಅವರಿಂದ ವಿಶೇಷ ಉಪನ್ಯಾಸ ನಡೆಯಲಿದೆ. ಅನಂತರ ಎಸ್.ಎಸ್.ಗುಬ್ಬಿ ಅವರಿಗೆ ಕಿ.ರಂ. ಪ್ರಶಸ್ತಿ ಪ್ರದಾನ ನಡೆಯಲಿದೆ. ಇದಾದ ಬಳಿಕ ನುಡಿನಮನ ನಡೆಯಲಿದ್ದು, ಪ್ರಾಧ್ಯಾಪಕ ಹುಲಿಕುಂಟೆ ಮೂರ್ತಿ ಉಪಸ್ಥಿತರಲಿದ್ದಾರೆ. ಬಳಿಕ ಕಾವ್ಯ ನಮನ ಹಾಗೂ ರಂಗ ನಮನ ನಡೆಯಲಿದೆ.

ರಾತ್ರಿ 8 ಗಂಟೆಗೆ ಕಿ.ರಂ. ನುಡಿನಮನ ನಡೆಯಲಿದ್ದು, ವಡ್ಡಗೆರೆ ನಾಗರಾಜಯ್ಯ ಉಪಸ್ಥಿತರಿರುವರು. ಇದೇ ವೇಳೆ ಬಿ.ಸುಜ್ಞಾನಮೂರ್ತಿ ಅವರಿಗೆ ಕಿ.ರಂ. ಪ್ರಶಸ್ತಿ ಪ್ರದಾನ ನಡೆಯಲಿದೆ ಹಾಗೂ ಈ ವೇಳೆ ಕಾವ್ಯ ನಮನ ಹಾಗೂ ರಂಗ ನಮನ ನಡೆಯಲಿದೆ.

ರಾತ್ರಿ 9 ಕ್ಕೆ ನವಚಾರಿತ್ರಿಕ ವಾದ ಮತ್ತು ಕ್ರಿ.ರಂ. ಪ್ರೇರಣೆಗಳು ವಿಷಯದ ಬಗ್ಗೆ ಸಿ.ಆರ್.ಗೋವಿಂದರಾಜ್‍ರಿಂದ ವಿಶೇಷ ಉಪನ್ಯಾಸ ನಡೆಯಲಿದೆ. ಈ ವೇಳೆ ಕಾವ್ಯ ನಮನ ನಡೆಯಲಿದೆ. ನಂತರ ಕಿ.ರಂ. ನುಡಿನಮನ ಆಯೋಜಿಸಿದ್ದು, ಮುಗಿದ ಬಳಿಕ ಕಾವ್ಯ ನಮನ ನಡೆಯಲಿದೆ. ರಾತ್ರಿ: 12ಕ್ಕೆ ನುಡಿನಮನ ಹಾಗೂ ಕಾವ್ಯ ನಮನ ನಡೆಯುತ್ತದೆ. ಮಧ್ಯರಾತ್ರಿ 2ಕ್ಕೆ ಕಾವ್ಯ ಮತ್ತು ಬದುಕು ಕುರಿತು ಎಂ.ಎಸ್.ಮೂರ್ತಿರಿಂದ ವಿಶೇಷ ಉಪನ್ಯಾಸ ಹಾಗೂ ಕಾವ್ಯ ನಮನ ನಡೆಯಲಿದೆ.

ಮುಂಜಾನೆ 4 ಕ್ಕೆ ಹಾಗೂ 6 ಕ್ಕೆ ಎರಡು ಬಾರಿ ನುಡಿ ನಮನ ನಡೆಯಲಿದೆ. ಬಳಿಕ ಕಾವ್ಯ ನಮನ ನಡೆಯಲಿದ್ದು, ಬೆಳಗ್ಗೆ 8 ಕ್ಕೆ ಮತ್ತೊಮ್ಮೆ ನುಡಿ ನಮನ ನಡೆಯಲಿದೆ. ಬಳಿಕ ಕವಿನಮನ ನಡೆಯಲಿದೆ.

ಬೆಳಗ್ಗೆ 9 ಕ್ಕೆ ನುಡಿನಮನ ಆಯೋಜಿಸಿದ್ದು ಶೂದ್ರ ಶ್ರೀನಿವಾಸ್ ಪಾಲ್ಗೊಳ್ಳುವರು. ಬಳಿಕ ಕವಿ ನಮನ ನಡೆಯಲಿದೆ. ಬೆಳಗ್ಗೆ 10 ಕ್ಕೆ ಮತ್ತೊಮ್ಮೆ ಕವಿನಮನ ನಡೆದು, ಬೆಳಗ್ಗೆ 10.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಅದರಲ್ಲಿ ಸಿ.ಎಸ್. ದ್ವಾರಕಾನಾಥ್ ಪಾಲ್ಗೊಳ್ಳುವರು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X