Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಎಸ್‍ಸಿ : ರೈತನ ಪುತ್ರ ದೇಶಕ್ಕೆ...

ಯುಪಿಎಸ್‍ಸಿ : ರೈತನ ಪುತ್ರ ದೇಶಕ್ಕೆ ಟಾಪರ್

ತಂದೆಯೇ ಸ್ಫೂರ್ತಿಯ ಸೆಲೆ ಎಂದ ಪ್ರದೀಪ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ5 Aug 2020 10:36 AM IST
share
ಯುಪಿಎಸ್‍ಸಿ : ರೈತನ ಪುತ್ರ ದೇಶಕ್ಕೆ ಟಾಪರ್

ಹೊಸದಿಲ್ಲಿ :  ಮಂಗಳವಾರ ಯುಪಿಎಸ್‍ಸಿ 2019ನೇ ಸಾಲಿನ ಫಲಿತಾಂಶ ಹೊರಬಿದ್ದಾಗ ಸೋನಿಪತ್‍ನ ರೈತ ಕುಟುಂಬವೊಂದರ ಸಂತಸಕ್ಕೆ ಪಾರವೇ ಇರಲಿಲ್ಲ. ಈ ಮನೆಯ ಮಗ, 29 ವರ್ಷದ  ಪ್ರದೀಪ್ ಸಿಂಗ್ ದೇಶಕ್ಕೇ ಟಾಪರ್ ಆಗಿದ್ದುದೇ ಈ ಕುಟುಂಬವನ್ನು ಆನಂದ ಸಾಗರದಲ್ಲಿ ತೇಲಾಡಿಸಿತ್ತು. ಪರೀಕ್ಷೆಯಲ್ಲಿ ತೇರ್ಗಡೆಯಾದ ಒಟ್ಟು 829 ಅಭ್ಯರ್ಥಿಗಳ ಪೈಕಿ ಪ್ರದೀಪ್ ದೇಶಕ್ಕೇ ಮೊದಲನೇ ಸ್ಥಾನ ಪಡೆದಿದ್ದಾರೆ.

ಕಳೆದ ವರ್ಷದ ಫಲಿತಾಂಶದಲ್ಲಿ 260ನೇ ರ್ಯಾಂಕ್ ಗಳಿಸಿದ್ದ ಸಿಂಗ್ ಐಆರ್‍ಎಸ್ ಅಧಿಕಾರಿಗಳಿಗಾಗಿನ ತರಬೇತಿ ಪಡೆಯುತ್ತಿದ್ದರು. ತನ್ನ ಸಾಧನೆಗೆ ತಂದೆಯೇ ಪ್ರೇರಣೆ, ಅವರೇ ನನ್ನ ಸ್ಫೂರ್ತಿಯ ಸೆಲೆ ಎನ್ನುತ್ತಾರೆ ಪ್ರದೀಪ್.

ಅವರ ತಂದೆ ಸುಖಬೀರ್ ಸಿಂಗ್ ಸೋನಿಪತ್‍ನ ತೇವ್ರಿ ಗ್ರಾಮದಲ್ಲಿ ಎಂಟು ಎಕರೆ ಜಮೀನು ಹೊಂದಿದ್ದಾರೆ. ಪ್ರದೀಪ್ ಅವರ ಸಾಧನೆಗೆ ಅವರ ಅವಿರತ ಶ್ರಮವೇ ಕಾರಣ ಎಂದು ತಂದೆ, ತಾಯಿ, ಹಿರಿಯ ಸೋದರ ಹಾಗೂ ಕಿರಿಯ ಸೋದರಿಯಿರುವ ಪ್ರದೀಪ್ ಅವರ ಕುಟುಂಬ ಹೇಳುತ್ತಿದೆ. ಅವರ ಹಿರಿಯ ಸೋದರ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದರೆ ಸೋದರಿ ಗಣಿತಶಾಸ್ತ್ರದಲ್ಲಿ ಎಂಎಸ್ಸಿ ಪದವೀಧರೆ.

ಪ್ರದೀಪ್ ಪ್ರಾಥಮಿಕ ಶಿಕ್ಷಣವನ್ನು ತಮ್ಮ ಗ್ರಾಮದಲ್ಲಿಯೇ ಪಡೆದಿದ್ದರೆ ಮುಂದೆ ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಸುಖಬೀರ್ ಕುಟುಂಬ ಸೋನಿಪತ್‍ಗೆ ಸ್ಥಳಾಂತರಗೊಂಡಿತ್ತು. ಪ್ರದೀಪ್ ಅವರು 12ನೇ ತರಗತಿ ಪರೀಕ್ಷೆಯಲ್ಲೂ ತಮ್ಮ ತರಗತಿಯಲ್ಲಿ ಟಾಪರ್ ಆಗಿದ್ದರು. ನಂತರ ಅವರು ಬಿಟೆಕ್ ಮಾಡಿ  ಅಬಕಾರಿ ಮತ್ತು ತೆರಿಗೆ ಇಲಾಖೆಯಲ್ಲಿ ಇನ್‍ಸ್ಪೆಕ್ಟರ್ ಆಗಿ ನೇಮಕಗೊಂಡಿದ್ದರು. ಆರಂಭದಲ್ಲಿ ಐಎಎಸ್ ಪರೀಕ್ಷೆಗಾಗಿ ಅವರು ಕೋಚಿಂಗ್ ಪಡೆಯುತ್ತಿದ್ದರೂ ನಂತರ ತಾವಾಗಿಯೇ ಕಲಿಯಲು ಆರಂಭಿಸಿದ್ದರು.

ಓರ್ವ ಐಎಎಸ್ ಅಧಿಕಾರಿಯಾಗಿ ಬಡವರಿಗಾಗಿ ಸೇವೆ ಸಲ್ಲಿಸುತ್ತೇನೆ ಹಾಗೂ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಸಿಂಗ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X