Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ...

ಕೊಡಗಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ 585ಕ್ಕೆ ಏರಿಕೆ: ಪತ್ರಕರ್ತರಿಗೂ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ5 Aug 2020 7:00 PM IST
share

ಮಡಿಕೇರಿ ಆ.5: ಕೊಡಗು ಜಿಲ್ಲೆಯಲ್ಲ್ಲಿ ಬುಧವಾರ 25 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 585ಕ್ಕೆ ಏರಿಕೆಯಾಗಿದೆ. ಇವರಲ್ಲಿ 342 ಮಂದಿ ಗುಣಮುಖರಾಗಿದ್ದು, 233 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 10 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ಮೆಂಟ್ ವಲಯಗಳ ಸಂಖ್ಯೆ 157 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ 4 ಹೊಸ ಕೊರೊನ ಪ್ರಕರಣಗಳು ಪತ್ತೆಯಾಗಿದ್ದು, ಮಡಿಕೇರಿಯ ಆಜಾದ್ ನಗರದ 75 ಮತ್ತು 33 ವರ್ಷದ ಪುರುಷ, 27 ವರ್ಷದ ಮಹಿಳೆ ಹಾಗೂ ವಿರಾಜಪೇಟೆಯ ಬೆಕ್ಕೆಸೊಡ್ಲೂರುವಿನ 45 ವರ್ಷದ ಪುರುಷನಲ್ಲಿ  ಸೋಂಕು ದೃಢಪಟ್ಟಿದೆ. 

ಮಧ್ಯಾಹ್ನ 2 ಗಂಟೆ ವೇಳೆಗೆ 21 ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.  ಕುಶಾಲನಗರದ ವಾಸವಿ ಮಹಲ್ ಬಳಿಯ 47 ವರ್ಷದ ಮಹಿಳೆ,  ಎಚ್.ಆರ್.ಪಿ ಕಾಲೋನಿಯ 45 ವರ್ಷದ ಪುರುಷ, ಮುಳ್ಳುಸೋಗೆಯ ಕುವೆಂಪು ಬಡಾವಣೆಯ 80 ವರ್ಷದ ಪುರುಷನಲ್ಲಿ ಸೋಂಕು ಕಾಣಿಸಿಕೊಂಡಿದೆ.         

ಸೋಮವಾರಪೇಟೆಯ ಗೌಡಳ್ಳಿಯ ದೊಡ್ಡಮಳ್ತೆಯ 23 ವರ್ಷದ ಪುರುಷ, ಸೋಮವಾರಪೇಟೆಯ ರೇಂಜರ್ ಬ್ಲಾಕಿನ 26 ಮತ್ತು 24 ವರ್ಷದ ಪುರುಷ, ನಗರದ ಪೊಲೀಸ್ ವಸತಿ ಗೃಹದ 27 ವರ್ಷದ ಪುರುಷ, ಚೆಟ್ಟಳ್ಳಿ ಫಾರಂನ 24 ವರ್ಷದ ಮಹಿಳೆ, 2 ಮತ್ತು 3 ವರ್ಷದ ಬಾಲಕಿಯರು, ನೆಲ್ಲಿಹುದಿಕೇರಿಯ 28 ವರ್ಷದ ಪುರುಷ ಮತ್ತು 49 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕಿರುವುದು ದೃಢವಾಗಿದೆ. 

ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯ ಹುಲುಸೆ ಮೂಡರಹಳ್ಳಿಯ 49 ವರ್ಷದ ಪುರುಷ, ನಗರೂರು ಗ್ರಾಮದ 55 ವರ್ಷದ ಪುರುಷ, ತೊರೆನೂರುವಿನ 24 ವರ್ಷದ ಪುರುಷ,  ಹೆಬ್ಬಾಲೆಯ ಬಾರ್ ರಸ್ತೆಯ 17 ವರ್ಷದ ಮಹಿಳೆ, ಮಡಿಕೇರಿ ತಾಲ್ಲೂಕಿನ ಸಂಪಾಜೆಯ 41 ವರ್ಷದ ಪುರುಷ, ಮಡಿಕೇರಿ ಮಹದೇವಪೇಟೆಯ 36 ವರ್ಷದ ಪುರುಷ, ದಾಸವಾಳ ರಸ್ತೆಯ 51 ವರ್ಷದ ಮಹಿಳೆ, ಮಹದೇವಪೇಟೆಯ ಮಖಾನ್ ರಸ್ತೆಯ 48 ಮತ್ತು 21 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ 15 ಹೊಸದಾಗಿ ಕಂಟೈನ್‍ಮೆಂಟ್ ವಲಯಗಳನ್ನು ತೆರೆಯಲಾಗಿದೆ. ಆಜಾದ್ ನಗರ ಮಡಿಕೇರಿ ಮತ್ತು ಬೆಕ್ಕೆಸೊಡ್ಲೂರು ಕ್ಲಬ್ ಹತ್ತಿರ, ವಿರಾಜಪೇಟೆ. ವಾಸವು ಮಹಲ್ ಎದುರು ಪೊಲೀಸ್ ಮೈದಾನ, ಕುಶಾಲನಗರ. ಎಚ್‍ಆರ್‍ಪಿ ಕಾಲೋನಿ, ಕುಶಾಲನಗರ. ಕುವೆಂಪು ಬಡಾವಣೆ, ಮುಳ್ಳುಸೋಗೆ, ಕುಶಾಲನಗರ. ದೊಡ್ಡಮಳ್ತೆ ಗೌಡಳ್ಳಿ, ಸೋಮವಾರಪೇಟೆ. ಪೊಲೀಸ್ ಕ್ವಾರ್ಟಸ್, ಸೋಮವಾರಪೇಟೆ. ಚೆಟ್ಟಳ್ಳಿ ಫಾರ್ಮ್ ಚೆಟ್ಟಳ್ಳಿ ಸೋಮವಾರಪೇಟೆ. ಮೂದರವಳ್ಳಿ ಅಂಚೆ, ಹುಲುಸೆ, ಶನಿವಾರಸಂತೆ, ಸೋಮವಾರಪೇಟೆ. ನರೂರು ಗ್ರಾಮ, ಚಂಗದಹಳ್ಳಿ ಅಂಚೆ, ಸೋಮವಾರಪೇಟೆ. ಗ್ರಾಮ ಪಂಚಾಯಿತಿ ಎದುರು, ತೊರೆನೂರು, ಸೋಮವಾರಪೇಟೆ. ಬಾರ್ ರಸ್ತೆ ಹೆಬ್ಬಾಲೆ, ಕುಶಾಲನಗರ. ಮುಖ್ಯರಸ್ತೆ ಸಂಪಾಜೆ, ಮಡಿಕೇರಿ. ಕಾಫಿ ಬೋರ್ಡ್ ಹತ್ತಿರ ದಾಸವಾಳ ರಸ್ತೆ, ಮಡಿಕೇರಿ. ಯಮಹ ಶೋ ರೂಂ ಹತ್ತಿರ ಮಕ್ಕನ್ ಸ್ಟ್ರೀಟ್, ಮಹದೇವಪೇಟೆ ಬಡಾವಣೆಗಳ ಮೇಲೆ ಆರೋಗ್ಯ ಅಧಿಕಾರಿಗಳು ನಿಗಾ ಇರಿಸಿದ್ದಾರೆ.    

ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ
ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದಲ್ಲಿ ಪತ್ರಕರ್ತರಿಗೆ ಬುಧವಾರ ಕೊರೋನ ಸೋಂಕು ಪರೀಕ್ಷೆ ಮಾಡಲಾಗಿದೆ.
ಡಾ.ಗೋಪಿನಾಥ್ ಉಸ್ತುವಾರಿಯಲ್ಲಿ ಮಡಿಕೇರಿಯ ಪತ್ರಿಕಾ ಭವನದಲ್ಲಿ ಗಂಟಲು ಮತ್ತು ಮೂಗಿನ ದ್ರವ ಸಂಗ್ರಹಿಸಲಾಯಿತು. 40 ಪತ್ರಕರ್ತರು ಹೆಸರು ನೋಂದಾಯಿಸಿಕೊಂಡಿದ್ದು, 29 ಮಂದಿ ಮಾದರಿ ನೀಡಿದರು. ಕೊರೋನ ವೈದ್ಯಕೀಯ ಪರೀಕ್ಷೆ ನಡೆದ ಹಿನ್ನೆಲೆಯಲ್ಲಿ ಪತ್ರಿಕಾ ಭವನ ಸಂಪೂರ್ಣ ಸ್ಯಾನಿಟೈಸರ್ ಮಾಡಲಾಯಿತು. 

ಗುರುವಾರ ಸಂಜೆ ಅಥವಾ ಶುಕ್ರವಾರ ಪತ್ರಕರ್ತರ ವೈದ್ಯಕೀಯ ಪರೀಕ್ಷಾ ವರದಿ ಸಿಗಲಿದೆ. ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಇಬ್ಬರು ಸದಸ್ಯರಿಗೆ ಈ ಹಿಂದೆಯೇ ಪಾಸಿಟಿವ್ ಬಂದಿದ್ದು, ಒಬ್ಬರು ಕೋವಿಡ್ ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರು ಹೋಂ ಐಸೋಲೇಷನ್ ನಲ್ಲಿದ್ದಾರೆ. ಪತ್ರಕರ್ತರೊಬ್ಬರ ಪತ್ನಿಗೂ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X