Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ತಗ್ಗಿದ ಮಳೆಯ ಪ್ರಮಾಣ, ಜನಜೀವನ...

ಉಡುಪಿ: ತಗ್ಗಿದ ಮಳೆಯ ಪ್ರಮಾಣ, ಜನಜೀವನ ಸಾಮಾನ್ಯಕ್ಕೆ

ವಾರ್ತಾಭಾರತಿವಾರ್ತಾಭಾರತಿ5 Aug 2020 9:43 PM IST
share
ಉಡುಪಿ: ತಗ್ಗಿದ ಮಳೆಯ ಪ್ರಮಾಣ, ಜನಜೀವನ ಸಾಮಾನ್ಯಕ್ಕೆ

ಬೈಂದೂರಿನಿಂದ ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು

ಉಡುಪಿ, ಆ.5: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಬೈಂದೂರು ಮತ್ತು ಕುಂದಾಪುರ ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪ್ರಮಾಣ ಇಂದು ಸ್ವಲ್ಪ ತಗ್ಗಿದ್ದು, ಇದರಿಂದ ಹಲವು ಗ್ರಾಮಗಳಲ್ಲಿ ನಿನ್ನೆಯಿಂದ ಕಾಣಿಸಿಕೊಂಡ ನೆರೆ ಇಳಿದು ಸಂಜೆಯ ವೇಳೆಗೆ ಜನಜೀವನ ಮತ್ತೆ ಸಾಮಾನ್ಯಕ್ಕೆ ಮರಳುತ್ತಿದೆ.

ಈ ಎರಡು ತಾಲೂಕಿನ ಅನೇಕ ಕಡೆಗಳಲ್ಲಿ ನದಿ ತುಂಬಿ ಹರಿದು ತಗ್ಗು ಪ್ರದೇಶಗಳು, ಕುದ್ರು ಪ್ರದೇಶಗಳಲ್ಲಿ ನೆರೆ ಕಾಣಿಸಿಕೊಂಡಿತ್ತು. ನಾವುಂದ, ಬಡಾಕೆರೆ, ಮರವಂತೆ, ನಾಡ, ಹಡವು, ಪಡುಕೋಣೆ, ಅರೆಹೊಳೆ, ಸೇನಾಪುರಗಳಲ್ಲಿ ನೆರೆ ಕಾಣಿಸಿಕೊಂಡಿದ್ದು, ಜನರು ತುರ್ತು ಸಂದರ್ಭ ದೋಣಿ ಯನ್ನು ಸಂಚಾರಕ್ಕೆ ಬಳಸಬೇಕಾಯಿತು.

ಇದರೊಂದಿಗೆ ಹಲವು ಕಡೆಗಳಲ್ಲಿ ಕೃತಕ ನೆರೆಯೂ ಉಂಟಾಗಿದ್ದು, ಸಂಪರ್ಕ ರಸ್ತೆಗಳೆಲ್ಲವೂ ನೀರಿನಲ್ಲಿ ಮುಳುಗಿ ಹೋದವು. ಹಲವು ಹಳ್ಳಿಗಳು ಜಲಾವೃತ ಗೊಂಡಿವೆ. ಅದರಲ್ಲೂ ಮುಖ್ಯವಾಗಿ ಕುಂದಾಪುರ ತಾಲೂಕಿನ ನಾವುಂದ ಗ್ರಾಮದ ಸಾಲ್ಬುಡ, ಹಡವು ಮುಂತಾದೆಡೆಗಳಲ್ಲಿ ಕಾಣಿಸಿ ಕೊಂಡ ಕೃತಕ ನೆರೆಗೆ ಗ್ರಾಮಸ್ಥರು ಪರದಾಡುವಂತಾಗಿದೆ.ಜನರಿಗೆ ಮಾತ್ರವಲ್ಲದೆ ಜಾನುವಾರುಗಳಿಗೂ ಇದರಿಂದ ತೊಂದರೆಯಾಗಿದೆ.

ಜಿಲ್ಲಾಧಿಕಾರಿ ಭೇಟಿ: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಇಂದು ಬೈಂದೂರು ಹಾಗೂ ಕುಂದಾಪುರ ತಾಲೂಕುಗಳ ನೆರೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ಮಾಡಿದರು. ಇನ್ನು ಮಳೆ ಬರುವ ಸಾಧ್ಯತೆ ಇರುವುದಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ, ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಈ ಭಾಗದ ಕುದ್ರು ಎಂದು ಕರೆಯಲ್ಪಡುವ ನಡುಗಡ್ಡೆಗಳಲ್ಲಿ ಜನರು ಅಕ್ಷರಶಃ ಬಂಧಿಯಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ರೆಡ್‌ಅಲರ್ಟ್ ಘೋಷಿಸಲಾಗಿದ್ದು ನದೀಪಾತ್ರಗಳ ಜನರು ಜಾಗರೂಕರಾಗಿರುವಂತೆ ಸೂಚನೆ ನೀಡಲಾಗಿದೆ. ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ಮನೆಗಳಿಗೆ ಹಾನಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯೊಂದಿಗೆ ಆಗಾಗ ಬಲವಾದ ಗಾಳಿಯೂ ಬೀಸುತ್ತಿರುವುದರಿಂದ ಜಿಲ್ಲೆಯಾದ್ಯಂತ ಭಾರಿ ಹಾನಿ ಸಂಭವಿಸಿದ ವರದಿಗಳು ಬರುತ್ತಿವೆ.

ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಸಂಜೀ ಎಂಬವರ ಮನೆಯ ಹೆಂಚು . ತಗಡು, ರೀಪು ಪಕ್ಕಾಸಿಗಳು ಕಳೆದ ರಾತ್ರಿ ಬೀಸಿದ ಗಾಳಿಗೆ ಹಾರಿಹೋಗಿದ್ದು ಒಂದು ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ. ಉಡುಪಿ ತಾಲೂಕಿನ ಉದ್ಯಾವರದಲ್ಲಿ ಲೀಲಾ ಪೂಜಾರ್ತಿ ಎಂಬವರ ಮನೆ ಮೇಲೆ ಹಲಸಿನ ಮರ ಬಿದ್ದು ಭಾಗಶ: ಹಾನಿಯಾಗಿದ್ದು 12 ಸಾವಿರ ರೂ.ನಷ್ಟವಾಗಿದೆ.

ಬೈಂದೂರು ತಾಲೂಕು: ಬೈಂದೂರು ತಾಲೂಕಿನಲ್ಲಿ ಇಂದು 15ಕ್ಕೂ ಅಧಿಕ ಮನೆಗಳಿಗೆ ವಿವಿಧ ಕಾರಣಗಳಿಂದ ಹಾನಿಯಾದ ವರದಿ ಬಂದಿವೆ. 7 ಮನೆಗಳು ಬಿದ್ದುಹೋಗಿದ್ದರೆ, ಕೊಲ್ಲೂರಿನಲ್ಲಿ 2, ಕಿರಿಮಂಜೇಶ್ವರದಲ್ಲಿ 10, ಯಡ್ತರೆ ಮತ್ತು ನಾವುಂದಗಳಲ್ಲಿ ಒಂದು ಮನೆಗಳಿಗೆ ಭಾಗಶ: ಹಾನಿಯಾಗಿದ್ದು ಒಟ್ಟು ಸುಮಾರು ಎರಡು ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ ಎಂದು ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರ್ ತಿಳಿಸಿದ್ದಾರೆ.

ಬ್ರಹ್ಮಾವರ ತಾಲೂಕು: ಬ್ರಹ್ಮಾವರ ತಾಲೂಕಿನ ಕಾಡೂರು ಗ್ರಾಮದ ನಿರ್ಮಕ್ಕಿ ಎಂಬಲ್ಲಿ ಗೋವಿಂದ ನಾಯ್ಕಿ ಹಾಗೂ ಹೊಸಾಳ ಗ್ರಾಮದ ಕೃಷ್ಣ ಬಂಗೇರ ಎಂಬವರ ಮನೆ ಹಾಗೂ ಹಟ್ಟಿಗೆ ಹಾನಿಯಾಗಿದ್ದು, ತಲಾ 30 ಸಾವಿರ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ.

ಕುಂದಾಪುರ ತಾಲೂಕು: ತಾಲೂಕಿನ ಗೋಪಾಡಿ, ಅಸೋಡು, ಕೋಟೇಶ್ವರ, ಕಂದಾವರ, ವಡೇರಹೋಬಳಿ, ಕೊರ್ಗಿ, ಕುಂಭಾಶಿ, ಯಡ್ಯಾಡಿ ಮತ್ಯಾಡಿ, ಮೊಳಹಳ್ಳಿ, ಹಕ್ಲಾಡಿ, ಕುಂದಬಾರಂದಾಡಿ ಗ್ರಾಮಗಳಲ್ಲಿ 16ಕ್ಕೂ ಅಧಿಕ ಮನೆಗಳಿಗೆ ನಿನ್ನೆ ಮತ್ತು ಇಂದು ಮಳೆ-ಗಾಳಿಯಿಂದ ಭಾಗಶ: ಹಾಗೂ ಪೂರ್ಣ ಹಾನಿಯಾಗಿದ್ದು, ನಾಲ್ಕು ಲಕ್ಷ ರೂ.ಗಳಿಗೂ ಅಧಿಕ ಹಾನಿಯ ಅಂದಾಜು ಮಾಡಲಾಗಿದೆ. ಅಲ್ಲದೇ ಹೊಸಂಗಡಿ ಗ್ರಾಮದ ರಾಮ ನಾಯ್ಕ ಹಾಗೂ ಕುಳಂಜೆ ಗ್ರಾಮದ ಮಂಜಯ್ಯ ಶೆಟ್ಟಿ ಇವರ ತೋಟಗಾರಿಕಾ ಬೆಳೆಗಳಿಗೆ ಗಾಳಿಯಿಂದ ಅಪಾರ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಇಂದು ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಿಯಂತ್ರಣ ಕೊಠಡಿ ನೀಡಿರುವ ಮಾಹಿತಿಯಂತೆ ಇಂದು ಮುಂಜಾನೆಯವರೆಗೆ ಜಿಲ್ಲೆಯ ವಿವಿದೆಡೆಗಳಲ್ಲಿ ಮಳೆಯಿಂದ ಹಾನಿಯ ಒಟ್ಟು 25 ಪ್ರಕರಣಗಳು ವರದಿಯಾಗಿದ್ದು, ಇವುಗಳಿಂದ ಒಟ್ಟು ಎಂಟು ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ನಷ್ಟ ಸಂಭವಿಸಿದೆ.

ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಕಲೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 49ಮಿ.ಮೀ. ಮಳೆಯಾಗಿದೆ. ಉಡುಪಿಯಲ್ಲಿ 32, ಕುಂದಾ ಪುರದಲ್ಲಿ 64 ಹಾಗೂ ಕಾರ್ಕಳದಲ್ಲಿ 52ಮಿ.ಮೀ. ಮಳೆಯಾದ ವರದಿ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X