Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆ :...

ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆ : ನದಿಪಾತ್ರದಲ್ಲಿ ಪ್ರವಾಹ ಭೀತಿ

ವಾರ್ತಾಭಾರತಿವಾರ್ತಾಭಾರತಿ5 Aug 2020 10:32 PM IST
share
ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆ : ನದಿಪಾತ್ರದಲ್ಲಿ ಪ್ರವಾಹ ಭೀತಿ

ಮಂಗಳೂರು, ಆ. 5: ಕರಾವಳಿ ಪ್ರದೇಶವಾದ ದ.ಕ. ಜಿಲ್ಲೆಯಲ್ಲಿ ಬುಧವಾರವೂ ತನ್ನ ವರ್ಷಧಾರೆಯನ್ನು ಮುಂದುವರಿಸಿದೆ. ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ-ಮಳೆಯಿಂದಾಗಿ ಗಿಡ-ಮರ, ವಿದ್ಯುತ್ ಕಂಬಗಳು ಧರಾಶಾಹಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತು.

ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಬುಧವಾರ ‘ರೆಡ್ ಅಲರ್ಟ್’ ಘೋಷಿಸಲಾಗಿತ್ತು. ಇದರ ಹೊರತಾಗಿಯೂ, ಜಿಲ್ಲೆಯಲ್ಲಿ ಅಧಿಕ ಪ್ರಮಾಣದ ಮಳೆ ಬಿದ್ದಿದೆ. ನದಿಗಳು ಅಪಾಯಕಾರಿ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಇದರಿಂದ ಸಹಜವಾಗಿಯೇ ನದಿಪಾತ್ರದ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಮಂಗಳೂರು ನಗರದ ಹೊರವಲಯದ ಗುರುಪುರ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಗುರುಪುರ ಫಲ್ಗುಣಿ ನದಿ ತುಂಬಿ ಹರಿಯುತ್ತಿದೆ. ವಿವಿಧ ಪ್ರದೇಶಗಳಲ್ಲಿ ಗಿಡ-ಮರಗಳು ಹಾಗೂ ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ಪರಿಣಾಮ, ವಿದ್ಯುತ್ ಕಣ್ಣಾಮುಚ್ಚಾಲೆ ಮುಂದುವರಿದಿದೆ.

ಗುರುಪುರ-ಕೈಕಂಬದ ಗ್ಯಾರೇಜ್ ಬಳಿ ಬೃಹತ್ ಮರದ ಕೊಂಬೆ ಬಿದ್ದು ಕೆಲವು ವಿದ್ಯುತ್ ಕಂಬಗಳು ಮುರಿದಿವೆ. ಬುಧವಾರ ಸಂಜೆಯವರೆಗೂ ವಿದ್ಯುತ್ ಕೈಕೊಟ್ಟಿದೆ. ಅಲ್ಲಲ್ಲಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಎಡಪದವಿನಲ್ಲಿ ಟ್ರಾನ್ಸ್‌ಫಾರ್ಮರ್‌ಗೆ ಹಾನಿ ಉಂಟಾಗಿದೆ. ಇದರಿಂದ ಮೆಸ್ಕಾಂಗೆ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಗುರುಪುರ ಸಮೀಪದ ವಿಕಾಸ್‌ನಗರ, ಗುರುಪುರ ದೋಣಿಂಜೆಯಲ್ಲೂ ಮರ ಉರುಳಿದೆ. ಮಳಲಿಯ ಜೈನ ಬಸದಿಯ ಕಂಪೌಂಡ್ ಮೇಲೆ ಮರ ಬಿದ್ದು, ರಸ್ತೆ ಬಂದ್ ಆಗಿದೆ. ವಿದ್ಯುತ್ ಪುನರ್ ಸಂಪರ್ಕಕ್ಕಾಗಿ ಮೆಸ್ಕಾಂ ಸಿಬ್ಬಂದಿ ಸಮರೋಪಾದಿಯಲ್ಲಿ ಕಾರ್ಯನಿರತರಾಗಿದ್ದಾರೆ.

ಬೈಕಂಪಾಡಿಯಲ್ಲಿ ಅಪಾರ ಹಾನಿ: ಬೈಕಂಪಾಡಿ ಪ್ರದೇಶದಲ್ಲಿ ಮಂಗಳವಾರ ರಾತ್ರಿಯಿಡೀ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಅಪಾರ ಹಾನಿಯಾಗಿದೆ. ಮರ ಬಿದ್ದು, ಹಲವು ಮನೆಗಳು ಜಖಂಗೊಂಡಿದೆ. ಬೈಕಂಪಾಡಿ ಎಪಿಎಂಸಿ ಆವರಣದಲ್ಲಿ ಅಪಾಯಕಾರಿ ಮರ ತೆರವಿಗೆ ಸಾರ್ವಜನಿಕರು ನಿರಂತರವಾಗಿ ಮನವಿ ಮಾಡಿದ್ದರೂ ಎಪಿಎಂಸಿ ಆಡಳಿತವು ನಿರ್ಲಕ್ಷ ವಹಿಸಿದೆ ಎನ್ನುವ ಆರೋಪ ಕೇಳಿಬಂದಿದೆ.

ಈ ಪ್ರದೇಶದಲ್ಲಿ ಸಣ್ಣ-ಪುಟ್ಟ ಮರಗಳನ್ನು ತೆರವುಗೊಳಿಸಲಾಗಿದ್ದರೂ ದೊಡ್ಡ ಮರಗಳನ್ನು ಹಾಗೆಯೇ ಉಳಿಸಲಾಗಿತ್ತು. ಮಂಗಳವಾರ ರಾತ್ರಿ ಬೀಸಿದ ತೀವ್ರ ಬಿರುಗಾಳಿಗೆ ಇಲ್ಲಿನ ಬೃಹತ್ ಮರವೊಂದು ಉರುಳಿ, ಪಕ್ಕದಲ್ಲೇ ಇರುವ ಮನೆಗಳ ಮೇಲೆ ಬಿದ್ದಿದೆ. ಇದರಿಂದ ಹಸನಬ್ಬ ಎಂಬವರ ಮನೆ ತೀವ್ರ ಜಖಂ ಆಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಜೀವಹಾನಿಯಾಗಿಲ್ಲ.

ಎಪಿಎಂಸಿಯ ತಡೆಗೋಡೆ ಪಕ್ಕದಲ್ಲಿ ಅಂಗರಗುಂಡಿಯ ಹಲವು ಮನೆಗಳಿವೆ. ಇಲ್ಲಿ ರಾಜಕಾಲುವೆಯೂ ಪಕ್ಕದಲ್ಲೇ ಹರಿಯುತ್ತಿದ್ದು, ಪ್ರತೀವರ್ಷ ಇಲ್ಲಿ ಮರ ಬೀಳುವುದು, ಕಂಪೌಂಡ್ ಕುಸಿಯುವುದು, ಮಳೆನೀರು ಮನೆಗೆ ನುಗ್ಗುವ ಘಟನೆಗಳು ನಡೆಯುತ್ತಿವೆ. ಮಳೆಗಾಲದಲ್ಲಿ ಸ್ಥಳೀಯರು ಆತಂಕದಲ್ಲೇ ಬದುಕುವಂತಾಗಿದೆ ಎಂದು ಸ್ಥಳೀಯ ನಿವಾಸಿ ಅಜರುದ್ದೀನ್ ಆತಂಕ ವ್ಯಕ್ತಪಡಿಸಿದ್ದಾರೆ.

ತುಂಬಿಹರಿದ ನದಿಗಳು: ನೇತ್ರಾವತಿ ಹಾಗೂ ಕುಮಾರಧಾರ ನದಿಗಳ ಹರಿವಿನಲ್ಲೂ ಅಗಾಧ ಏರಿಕೆ ಕಂಡುಬಂದಿದೆ. ಮಂಗಳವಾರ 5.9 ಮೀಟರ್ ಇದ್ದ ನೇತ್ರಾವತಿ ನದಿಯ ಮಟ್ಟವು ಬುಧವಾರ 7.4 ಮೀಟರ್‌ಗೆ ಏರಿಕೆಯಾಗಿದೆ. ಅದರಂತೆ, 16 ಮೀಟರ್ ಇದ್ದ ಕುಮಾರಧಾರ ನದಿಯು 22 ಮೀಟರ್‌ಗೆ ಹೆಚ್ಚಳವಾಗಿದೆ. ಗುರುಪುರ ಸಮೀಪದ ಫಲ್ಗುಣಿ ನದಿಯಲ್ಲೂ ಮಳೆನೀರಿನ ಭಾರೀ ಹರಿವು ಇದೆ. ನೆರೆಯ ಭೀತಿ ಯಿಂದಾಗಿ ನದಿ ಸುತ್ತಮುತ್ತಲಿನ ಗ್ರಾಮಗಳ ಜನತೆಯು ಆತಂಕದಲ್ಲಿ ಹಗಲು-ರಾತ್ರಿ ದೂಡುವಂತಾಗಿದೆ.

1077 ಕರೆ ಮಾಡಿ: ದ.ಕ. ಜಿಲ್ಲೆಯಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಇದ್ದಲ್ಲಿ ತುರ್ತು ಸೇವೆಗಾಗಿ ಟಾಲ್‌ಫ್ರೀ ನಂಬರ್ 1077ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಕಡಲು ಪ್ರಕ್ಷುಬ್ಧ

ಅರಬಿ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆಯಲ್ಲಿ ಭಾರೀ ಗಾತ್ರದ ಅಲೆಗಳು ಕಡಲತೀರಕ್ಕೆ ಬಂದು ಅಪ್ಪಳಿಸುತ್ತಿವೆ. ಪಣಂಬೂರು ಕೂರಿಕಟ್ಟದಲ್ಲಿ ಮನೆ ಉಳಿಸಿಕೊಳ್ಳಲು ಮರಳಿನ ಚೀಲವನ್ನು ಅಳವಡಿಸಿ ತಮಿಳುನಾಡು ಮೂಲದ ಕುಟುಂಬವೊಂದು ಹರಸಾಹಸ ಪಡುತ್ತಿದ್ದ ಬುಧವಾರ ಘಟನೆ ನಡೆದಿದೆ. ಸಮುದ್ರದ ಅಬ್ಬರ ಹೆಚ್ಚಳದಿಂದಾಗಿ ತೀರದಲ್ಲಿನ ಕಲ್ಲಿನ ತಡೆಗೋಡೆ ದಾಟಿ ಅಲೆಗಳು ಧಾವಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X