Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೈರೂತ್ ಸ್ಫೋಟ: ಮೃತರ ಸಂಖ್ಯೆ 137ಕ್ಕೆ...

ಬೈರೂತ್ ಸ್ಫೋಟ: ಮೃತರ ಸಂಖ್ಯೆ 137ಕ್ಕೆ ಏರಿಕೆ

ಕನಿಷ್ಠ 5,000 ಮಂದಿಗೆ ಗಾಯ; ನೂರಾರು ಮಂದಿ ನಾಪತ್ತೆ; ಅರ್ಧ ನಗರವೇ ನಿರ್ನಾಮ

ವಾರ್ತಾಭಾರತಿವಾರ್ತಾಭಾರತಿ6 Aug 2020 9:53 PM IST
share
ಬೈರೂತ್ ಸ್ಫೋಟ: ಮೃತರ ಸಂಖ್ಯೆ 137ಕ್ಕೆ ಏರಿಕೆ

ಬೈರೂತ್ (ಲೆಬನಾನ್), ಆ. 6: ಲೆಬನಾನ್ ರಾಜಧಾನಿ ಬೈರೂತ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 137ಕ್ಕೇರಿದೆ. ಅದೇ ವೇಳೆ, ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಹಾಗೂ ಕನಿಷ್ಠ 5,000 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯದ ವಕ್ತಾರರೊಬ್ಬರು ಗುರುವಾರ ತಿಳಿಸಿದರು.

ಈ ಸ್ಫೋಟವು ಬೈರೂತ್ ಬಂದರಿನ ಒಂದು ಭಾಗವನ್ನು ನಾಮಾವಶೇಷಗೊಳಿಸಿದೆ ಹಾಗೂ ನಗರದ ಹೃದಯ ಭಾಗದ ಬೃಹತ್ ಪ್ರದೇಶಕ್ಕೆ ಹಾನಿ ಮಾಡಿದೆ. ಒಟ್ಟಾರೆಯಾಗಿ, ಒಂದು ಕಾಲದಲ್ಲಿ ಮಧ್ಯಪ್ರಾಚ್ಯದ ಪ್ಯಾರಿಸ್ ಎಂಬುದಾಗಿ ಕರೆಯಲ್ಪಡುತ್ತಿದ್ದ ಬೈರೂತ್ ನಗರದ ಅರ್ಧ ಭಾಗವೇ ನಿರ್ನಾಮವಾಗಿದೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಭೀತಿಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

2,750 ಟನ್ ಅಮೋನಿಯಂ ನೈಟ್ರೇಟ್ ರಾಸಾಯನಿಕವನ್ನು ಸಂಗ್ರಹಿಸಿಡಲಾಗಿದ್ದ ಬೈರೂತ್‌ನ ಬಂದರು ಪ್ರದೇಶದಲ್ಲಿರುವ ಉಗ್ರಾಣವೊಂದರಲ್ಲಿ ಮಂಗಳವಾರ ರಾತ್ರಿ ಭೀಕರ ಸ್ಫೋಟ ಸಂಭವಿಸಿತ್ತು. ಈ ರಾಸಾಯನಿಕವನ್ನು ಯಾರು ಮತ್ತು ಯಾಕೆ ಸಂಗ್ರಹಿಸಿಟ್ಟಿದ್ದಾರೆ ಎಂಬ ಬಗ್ಗೆ ಪ್ರಶ್ನೆಗಳು ಈಗ ಎದ್ದಿವೆ. ಅದು ಹೇಗೆ ಸ್ಫೋಟಿಸಿತು ಎಂಬ ಬಗ್ಗೆಯೂ ಜನರು ಪ್ರಶ್ನಿಸುತ್ತಿದ್ದಾರೆ.

ಪುನರ್ನಿರ್ಮಾಣಕ್ಕೆ 15 ಬಿಲಿಯ ಡಾಲರ್ ಅಗತ್ಯ: ಬೈರೂತ್ ಗವರ್ನರ್

ಭೀಕರ ಸ್ಫೋಟದಿಂದಾಗಿ ನಗರಕ್ಕೆ ವ್ಯಾಪಕ ಹಾನಿಯಾಗಿದ್ದು, ಬೈರೂತ್ ಮತ್ತು ಅಲ್ಲಿನ ಜನರನ್ನು ಮರಳಿ ಹಳಿಗೆ ತರಲು 10 ಬಿಲಿಯ (ಸುಮಾರು 75,000 ಕೋಟಿ ರೂಪಾಯಿ)ದಿಂದ 15 ಬಿಲಿಯ ಡಾಲರ್ (ಸುಮಾರು 1.12 ಲಕ್ಷ ಕೋಟಿ ರೂಪಾಯಿ) ಹಣ ಬೇಕಾಗಬಹುದು ಎಂದು ಬೈರೂತ್ ನಗರದ ಗವರ್ನರ್ ಮರ್ವನ್ ಅಬ್ಬೂದ್ ಹೇಳಿದ್ದಾರೆ.

‘‘ನಗರದ ಬಂದರು ಪ್ರದೇಶದಲ್ಲಿ ಸಂಭವಿಸಿರುವ ಹಾನಿಯ ಅಂದಾಜನ್ನು ಮುಂದಿನ ದಿನಗಳಲ್ಲಿ ಇಂಜಿನಿಯರ್‌ಗಳು ಮತ್ತು ಪರಿಣತರ ತಂಡವೊಂದು ನಡೆಸಲಿದೆ’’ ಎಂದು ಅವರು ತಿಳಿಸಿದರು.

ಉತ್ತರದಾಯಿತ್ವ ನಿಗದಿಗೆ 4 ದಿನಗವಳ ಕಾಲಾವಕಾಶ: ವಿದೇಶ ಸಚಿವ

ಬೈರೂತ್ ಬಂದರು ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ವಿನಾಶಕಾರಿ ಸ್ಫೋಟಕ್ಕೆ ಉತ್ತರದಾಯಿತ್ವವನ್ನು ನಿಗದಿಪಡಿಸಲು ಲೆಬನಾನ್ ಸರಕಾರವು ತನಿಖಾ ಸಮಿತಿಯೊಂದಕ್ಕೆ ನಾಲ್ಕು ದಿನಗಳ ಕಾಲಾವಕಾಶವನ್ನು ನೀಡಿದೆ ಎಂದು ವಿದೇಶ ಸಚಿವ ಚಾರ್ಬೆಲ್ ವಹಾಬಿ ಗುರುವಾರ ಫ್ರೆಂಚ್ ರೇಡಿಯೊಗೆ ತಿಳಿಸಿದ್ದಾರೆ.

‘‘ಸ್ಫೋಟದ ಬಗ್ಗೆ ತನಿಖೆ ನಡೆಸುವುದಕ್ಕಾಗಿ ತನಿಖಾ ಸಮಿತಿಯೊಂದನ್ನು ರಚಿಸುವ ನಿರ್ಧಾರವೊಂದನ್ನು ಇಂದು ಬೆಳಗ್ಗೆ ತೆಗೆದುಕೊಳ್ಳಲಾಗಿದೆ. ಅದು ಗರಿಷ್ಠ ನಾಲ್ಕು ದಿನಗಳ ಕಾಲಾವಧಿಯಲ್ಲಿ- ಹೇಗೆ, ಯಾರು, ಏನು, ಎಲ್ಲಿ ಎಂಬ ಉತ್ತರದಾಯಿತ್ವ ನಿಗದಿಪಡಿಸುವ ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿದೆ. ಬಳಿಕ ಈ ಕುರಿತು ನ್ಯಾಯಾಂಗವು ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ’’ ಎಂದು ಅವರು ‘ಯುರೋಪ್ 1’ ರೇಡಿಯೊಗೆ ಹೇಳಿದರು.

‘‘ಇದು ಗಂಭೀರ ವಿಷಯವಾಗಿದೆ ಹಾಗೂ ಈ ಭಯಾನಕ ಕ್ರಿಮಿನಲ್ ನಿರ್ಲಕ್ಷ್ಯದ ಜವಾಬ್ದಾರಿ ಹೊತ್ತವರನ್ನು ನ್ಯಾಯಾಧೀಶರ ಸಮಿತಿಯೊಂದು ಶಿಕ್ಷಿಸುವುದು’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X