Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಂಕಣ ರೈಲ್ವೆ: ಎಂಟು ರೈಲುಗಳ ಸಂಚಾರ...

ಕೊಂಕಣ ರೈಲ್ವೆ: ಎಂಟು ರೈಲುಗಳ ಸಂಚಾರ ಮಾರ್ಗ ಬದಲು

ವಾರ್ತಾಭಾರತಿವಾರ್ತಾಭಾರತಿ7 Aug 2020 5:56 PM IST
share
ಕೊಂಕಣ ರೈಲ್ವೆ: ಎಂಟು ರೈಲುಗಳ ಸಂಚಾರ ಮಾರ್ಗ ಬದಲು

ಉಡುಪಿ, ಆ.7: ಕಳೆದ ಐದಾರು ದಿನಗಳಿಂದ ಗೋವಾ ಆಸುಪಾಸು ಸುರಿಯುತ್ತಿರುವ ಭಾರೀ ಮಳೆಯ ಕಾರಣ ಕೊಂಕಣ ರೈಲ್ವೆ ವ್ಯಾಪ್ತಿಯ ಕಾರವಾರ ವಲಯದ ಪೆರ್ನೆಂ ಬಳಿಯ ಸುರಂಗದ ಒಳಭಾಗದ ತಡೆಗೋಡೆಯ ಒಂದು ಭಾಗ ಕುಸಿದಿದ್ದು, ಇದರಿಂದ ಕರ್ನಾಟಕ ಕರಾವಳಿ ಮೂಲಕ ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸಬೇಕಿದ್ದ ಎಂಟು ರೈಲುಗಳ ಮಾರ್ಗವನ್ನು ಬದಲಿಸಿ ಲೋಂಡಾ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಬೆಳಗಿನ ಜಾವ 2:50ರ ಸುಮಾರಿಗೆ ಮದುರೆ ಮತ್ತು ಪೆರ್ನೆಂ ಮಧ್ಯೆ ಈ ಘಟನೆ ನಡೆದಿದೆ. ಸುಮಾರು ಐದು ಮೀ.ನಷ್ಟು ಎತ್ತರದ ಗೋಡೆ ಕುಸಿದಿದೆ. ಯಾವುದೇ ಜೀವಹಾನಿ ಅಥವಾ ಅಪಾಯ ಸಂಭವಿಸಿಲ್ಲ. ಗೋಡೆ ಕುಸಿದು ಮಣ್ಣು ಹಳಿಗಳ ಮೇಲೆ ಜರಿದಿರುವುದರಿಂದ ಮಣ್ಣನ್ನು ತೆರವು ಗೊಳಿಸುವ ಕಾರ್ಯ ಭರದಿಂದ ಸಾಗಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಹೀಗಾಗಿ ಮುಂದಿನ ಸೂಚನೆ ನೀಡುವವರೆಗೆ ಕೊಂಕಣ ರೈಲು ಮಾರ್ಗದಲ್ಲಿ ರೈಲುಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸ್ಥಳಕ್ಕೆ ಧಾವಿಸಿ ರುವ ಕೊಂಕಣ ರೈಲ್ವೆ ಅಧಿಕಾರಿಗಳು ಹಾಗೂ ತಂತ್ರಜ್ಞರು ದುರಸ್ತಿ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದಾರೆ ಎಂದು ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಲ್.ಕೆ. ವರ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದುದರಿಂದ ಈ ಮಾರ್ಗದಲ್ಲಿ ಸಂಚರಿಸುವ ಎಂಟು ರೈಲುಗಳ ಮಾರ್ಗವನ್ನು ಬದಲಿಸಲಾಗಿದ್ದು, ಅವುಗಳು ಲೋಂಡಾ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಪ್ರಯಾಣಿಕರು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:022-27587939, 10722ನ್ನು ಸಂಪರ್ಕಿಸುವಂತೆ ಕೊಂಕಣ ರೈಲ್ವೆ ಮಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಧಾ ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಚಾರ ಮಾರ್ಗ ಬದಲಾದ ರೈಲುಗಳ ವಿವರ ಹೀಗಿದೆ

1.ರೈಲು ನಂ.02617 ಎರ್ನಾಕುಲಂ-ನಿಝಾಮುದ್ದೀನ್ ಸೂಪರ್‌ಫಾಸ್ಟ್ ಸ್ಪೆಷನ್ ಏಕ್ಸ್‌ಪ್ರೆಸ್ ಆ.6ರಿಂದ 20ರವರೆಗೆ ಮಡಗಾಂವ್-ಲೋಂಡಾ- ಮೀರಜ್- ಪೂಣೆ-ಪನ್ವೇಲ್- ಕಲ್ಯಾಣ ಮೂಲಕ (15 ಟ್ರಿಪ್) ಸಂಚರಿಸಲಿದೆ.

2.ರೈಲು ನಂ.02618 ನಿಝಾಮುದ್ದೀನ್- ಎರ್ನಾಕುಲಂ ಸೂಪರ್‌ಫಾಸ್ಟ್ ಸ್ಪೆಷಲ್ ಎಕ್ಸ್‌ಪ್ರೆಸ್ ಆ.6ರಿಂದ 20ವರೆಗೆ ಪನ್ವೇಲ್-ಪುಣೆ-ಮೀರಜ್- ಲೋಂಡಾ- ಮಡಗಾಂವ್ ಮೂಲಕ (15 ಟ್ರಿಪ್) ಸಂಚರಿಸಲಿದೆ.

3.ರೈಲು ನಂ.06346 ತಿರುವನಂತಪುರಂ ಸೆಂಟ್ರಲ್-ಲೋಕಮಾನ್ಯ ತಿಲಕ್ ಸ್ಪೆಷಲ್ ಏಕ್ಸ್‌ಪ್ರೆಸ್ ಆ.6ರಿಂದ 20ರವರೆಗೆ ಮಡಗಾಂವ್- ಲೋಂಡಾ- ಮೀರಜ್- ಪುಣೆ- ಪನ್ವೇಲ್ ಮೂಲಕ (15 ಟ್ರಿಪ್) ಸಂಚರಿಸಲಿದೆ.

4.ರೈಲು ನಂ.06345 ಲೋಕಮಾನ್ಯ ತಿಲಕ್-ತಿರುವನಂತಪುರಂ ಸೆಂಟ್ರಲ್ ಆ.7ರಿಂದ 20ರವರೆಗೆ (14 ಟ್ರಿಪ್) ಪನ್ವೇಲ್- ಪುಣೆ- ಮೀರಜ್- ಲೋಂಡಾ- ಮಡಗಾಂವ್ ಮೂಲಕ ಸಂಚರಿಸಲಿದೆ.

5.ರೈಲು ನಂ.02432 ಹೊಸದಿಲ್ಲಿ- ತಿರುವನಂತಪುರಂ ಸೆಂಟ್ರಲ್ ರಾಜಧಾನಿ ಸ್ಪೆಷಲ್ ಎಕ್ಸ್‌ಪ್ರೆಸ್ ಆ.9ರಿಂದ 18ರವರೆಗೆ (6ಟ್ರಿಪ್) ಪನ್ವೇಲ್- ಪುಣೆ- ಮೀರಜ್- ಲೋಂಡಾ- ಮಡಗಾಂವ್ ಮೂಲಕ ಸಂಚರಿಸಲಿದೆ.

6.ರೈಲು ನಂ.02431 ತಿರುವನಂತಪುರಂ ಸೆಂಟ್ರಲ್- ಹೊಸದಿಲ್ಲಿ ರಾಜಧಾನಿ ಸ್ಪೆಷಲ್ ಎಕ್ಸ್‌ಪ್ರೆಸ್ ಆ.6ರಿಂದ 20ರವರೆಗೆ (7 ಟ್ರಿಪ್) ಮಡಗಾಂವ್- ಲೋಂಡಾ- ಮೀರಜ್- ಪುಣೆ-ಪನ್ವೇಲ್ ಮೂಲಕ ಸಂಚರಿಸಲಿದೆ.

7.ರೈಲು ನಂ.02284 ನಿಝಾಮುದ್ದೀನ್-ಎರ್ನಾಕುಲಂ ಡುರಾಂಟೊ ಸ್ಪೆಷಲ್ ಎಕ್ಸ್‌ಪ್ರೆಸ್ ಆ.8ರಿಂದ 15ರವರೆಗೆ(2ಟ್ರಿಪ್) ಪನ್ವೇಲ್- ಪುಣೆ-ಮೀರಜ್- ಲೋಂಡಾ- ಮಡಗಾಂವ್ ಮೂಲಕ ಸಂಚರಿಸಲಿದೆ.

8.ರೈಲು ನಂ.02283 ಎರ್ನಾಕುಲಂ- ನಿಝಾಮುದ್ದೀನ್ ಡುರಾಂಟೊ ಸ್ಪೆಷಲ್ ಎಕ್ಸ್‌ಪ್ರೆಸ್ ಆ.11ರಿಂದ 18ರವರೆಗೆ (2ಟ್ರಿಪ್) ಮಡಗಾಂವ್- ಲೋಂಡಾ- ಮೀರಜ್- ಪುಣೆ- ಪನ್ವೇಲ್ ಮೂಲಕ ಸಂಚರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X