Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಸಿಯೂಟ ನೌಕರರಿಂದ ಪ್ರತಿಭಟನೆ

ಬಿಸಿಯೂಟ ನೌಕರರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Aug 2020 5:57 PM IST
share

ಮಂಗಳೂರು, ಆ.7: ಸ್ಕೀಂ ಕಾರ್ಮಿಕರಾದಂತಹ ಬಿಸಿಯೂಟ, ಆಶಾ ಮತ್ತು ಅಂಗನವಾಡಿ ಕಾರ್ಮಿಕರ ಬೇಡಿಕೆಗಳ ಜಾರಿಗಾಗಿ ಒತ್ತಾಯಿಸಿ ಅಖಿಲ ಭಾರತ ಪ್ರತಿಭಟನೆಗೆ ಕಾರ್ಮಿಕರ ಸಂಘಟನೆಗಳು ಕರೆ ನೀಡಿದ್ದು, ಇಂದು ಮಂಗಳೂರು ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಪ್ರದರ್ಶನ ನಡೆಯಿತು.

ಸಿಐಟಿಯು ನೇತೃತ್ವದ ಅಕ್ಷರದಾಸೋಹ ನೌಕರರ ಸಂಘದ ಮುಂದಾಳತ್ವದಲ್ಲಿ ನಡೆದ ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಸಂಘದ ಅಧ್ಯಕ್ಷರಾದ ಪದಾ್ಮವತಿ ಶೆಟ್ಟಿಯವರು ಮಾತನಾಡಿದರು.

ಕೊರೋನ ವೈರಸ್‌ನಿಂದಾಗಿ ಸ್ಕೀಂ ಕಾರ್ಮಿಕರಲ್ಲಿ ಒಂದು ವಿಭಾಗವಾದ ಅಕ್ಷರ ದಾಸೋಹ ನೌಕರರಿಗೆ ಕೆಲಸ ಹಾಗೂ ವೇತನವಿಲ್ಲವಾಗಿದೆ. ಕೊರೋನಾ ವೈರಸ್ ಲಾಕ್‌ಡೌನ್ ಅವಧಿಯ ಹಾಗೂ ಬೇಸಿಗೆ ರಜೆಯ ಪರಿಹಾರವನ್ನು ನೀಡಬೇಕೆಂದು ವಿನಂತಿಸಿದರೂ ಲಕ್ಷಾಂತರ ಕಾರ್ಮಿಕರಿಗೆ ಪರಿಹಾರವನ್ನು ನೀಡಿಲ್ಲ. ಬಿಸಿಯೂಟ ನೌಕರರಿಗೆ ಮುಂದಿನ 6 ತಿಂಗಳ ತನಕ ಕನಿಷ್ಟ 7,500 ರೂ. ರಷ್ಟು ಪರಿಹಾರವನ್ನು ನೇರ ನಗದು ಮಾಡಬೇಕು. ಹಾಗೆನೇ ಮುಂದಿನ 6 ತಿಂಗಳ ತನಕ 10 ಕೆ.ಜಿ.ಆಹಾರ ಧಾನ್ಯವನ್ನು ಉಚಿತವಾಗಿ ರೇಶನ್ ಮೂಲಕ ನೀಡಬೇಕೆಂದು ಅವರು ಒತ್ತಾಯಿಸಿದರು.

ಭಾರತ ಕಾರ್ಮಿಕ ಸಮ್ಮೇಳನದ ನಿರ್ಣಯದಂತೆ ಸ್ಕೀಂ ಕಾರ್ಮಿಕರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಟ ವೇತನ ಕಾಯಿದೆಯ ಅನ್ವಯ ಮಾಸಿಕವಾಗಿ 21,000 ರೂ. ಕನಿಷ್ಟ ಕೂಲಿ ನೀಡಬೇಕಾದಂತಹ ಸರಕಾರ ಎಲ್ಲಾ ರಂಗವನ್ನು ಖಾಸಗೀಕರಣ ಮಾಡಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಕೊರೋನ ವಾರಿಯರ್ಸ್‌ ಆಗಿ ಆಶಾ, ಅಂಗನವಾಡಿ ಮತ್ತು ಬಿಸಿಯೂಟ ನೌಕರರನ್ನೂ ಉಪಯೋಗ ಮಾಡಿದ್ದರೂ ಅವರ ಜೀವಕ್ಕೆ ರಕ್ಷಣೆ ಇಲ್ಲದಂತಾಗಿದೆ. ಅವರಿಗೆ ಈ ಅವಧಿಯಲ್ಲಿ ಕೆಲಸ ಮಾಡಿರುವುದಕ್ಕೆ ವೇತನವನ್ನು ಕೂಡಾ ನೀಡಿಲ್ಲ. ಕೊರೋನಾ ವಾರಿಯರ್ಸ್‌ ಕೆಲಸ ಮಾಡುವ ಸಂದರ್ಭ ಮರಣ ಅಪ್ಪಿದಲ್ಲಿ ಅವರಿಗೆ ಯಾವುದೇ ಪರಿಹಾರದ ಖಾತರಿಯಿಲ್ಲ. ಆದ್ದರಿಂದ ಕನಿಷ್ಟ 10 ಲಕ್ಷದವರೆಗೆ ವಿಮೆಯನ್ನು ಜಾರಿಗೊಳಿಸಬೇಕು. ಹಾಗೆನೇ ಅಕ್ಷರದಾಸೋಹ ಕಾರ್ಮಿಕರಿಗೆ ಕನಿಷ್ಟ ಮಾಸಿಕ ವೇತನವನ್ನು ಕೂಡಲೇ ರಾಜ್ಯ ಸರಕಾರ ನೀಡಬೇಕು ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ವಸಂತ ಆಚಾರಿಯವರು ಸರಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯ ಮನವಿಯನ್ನು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಕಳುಹಿಸಲಾಯಿತು. ಪ್ರತಿಭಟನಾ ಪ್ರದರ್ಶನದ ನೇತೃತ್ವವನ್ನು ಮುಖಂಡರಾದ ರೇಖಲತಾ, ರತ್ನಮಾಲಾ, ರೆಮೆಜಾ, ಉಮಾವತಿ, ಅಂಜಲಿ, ಭವಾನಿ, ಪಾರ್ವತನಿ ಅನುರಾಧ, ಭವ್ಯಾ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X