ಹೊಗೆಬೈಲ್ : ಯುವಕ ಆತ್ಮಹತ್ಯೆ
ಮಂಗಳೂರು, ಆ.7: ನಗರದ ಹೊಗೆಬೈಲ್ನಲ್ಲಿ ನಾಗರಾಜ (39) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ.
ಗುರುವಾರ ರಾತ್ರಿ ಊಟ ಮುಗಿಸಿ, ಮಲಗಲೆಂದು ರೂಂಗೆ ತೆರಳಿದವರು ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗ್ಗೆ ಸುಮಾರು ಹೊತ್ತಾದರೂ ಏಳದೇ ಇದ್ದುದನ್ನು ಗಮನಿಸಿ ಅವರ ತಂದೆ ಬಾಗಿಲು ಬಡಿದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಇಲ್ದೇ ಇದ್ದುದರಿಂದ ಬಾಗಿಲು ಒಡೆದು ನೋಡಿದಾಗ ಫ್ಯಾನ್ಗೆ ನೇಣು ಬಿಗಿದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಉರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story