Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆ ಹೆಚ್ಚಾಗಿ ಡ್ಯಾಂ ತುಂಬಿರುವುದರಿಂದ...

ಮಳೆ ಹೆಚ್ಚಾಗಿ ಡ್ಯಾಂ ತುಂಬಿರುವುದರಿಂದ ನಾಲೆಗಳಿಗೆ ನೀರು ಹರಿಸಿ : ಹಾಸನ ಜಿಲ್ಲಾ ಮಂತ್ರಿ ಗೋಪಾಲಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Aug 2020 10:42 PM IST
share
ಮಳೆ ಹೆಚ್ಚಾಗಿ ಡ್ಯಾಂ ತುಂಬಿರುವುದರಿಂದ ನಾಲೆಗಳಿಗೆ ನೀರು ಹರಿಸಿ : ಹಾಸನ ಜಿಲ್ಲಾ ಮಂತ್ರಿ ಗೋಪಾಲಯ್ಯ ಸೂಚನೆ

ಹಾಸನ: ದಿನೆ ದಿನೆ ಮಳೆಯು ಹೆಚ್ಚಾಗಿ ಬರುತ್ತಿದ್ದು, ಈಗಾಗಲೇ ಅಣೆಕಟ್ಟುಗಳು ತುಂಬುವ ಹಂತ ತಲುಪಿರುವುದರಿಂದ ನಾಲೆಗಳಿಗೆ ನೀರು ಬಿಡುವ ಕೆಲಸ ಮಾಡುವಂತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯನವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಳೆಯಿಂದ ಆಗಿರುವ ಹಾನಿ, ಕೊರೋನಾ ಬಗ್ಗೆ ಚರ್ಚಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಕೂಡಲೇ ಹೇಮಾವತಿ ಅಣೆಕಟ್ಟೆಯಿಂದ ನಾಲೆಗೆ ನೀರು ಹರಿಸಬೇಕು. ನದಿಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದೆ. ಹಲವಾರು ಜಿಲ್ಲೆಯ ರೈತರು ಭೂಮಿಗೆ ನೀರು ಬಿಡುವಂತೆ ಒತ್ತಾಯ ಮಾಡುತ್ತಿರುವುದರಿಂದ ನೀರು ಬಿಡಲು ಆದೇಶ ನೀಡುತ್ತಿರುವುದಾಗಿ ತಿಳಿಸಿದರು.

ಗುಡ್ಡ ಕುಸಿಯುವ ಕಡೆ ಹಾಗೂ ನೀರು ಹೆಚ್ಚು ಹರಿಯುವ ಸ್ಥಳಗಳಲ್ಲಿ ಇರುವ ಜನರನ್ನು ತಕ್ಷಣದಲ್ಲಿ ಸ್ಥಳಾಂತರ ಮಾಡಲು ಸೂಚಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಯಾವ ಭಾಗಗಳಲ್ಲಿ ಬೆಳೆ ನಷ್ಟ, ಜೀವಹಾನಿ, ಮನೆ ಬಿದ್ದು ಹೋಗಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ಅಧಿಕಾರಿ ಗಳಿಂದ ಅಂಕಿ-ಅಂಶ ಕೇಳಲಾಗಿದೆ. ಮನೆಯಲ್ಲಿರುವ ಊಟದ ಪಾತ್ರ ಇತರೆ ಪೀಠೋಪಕರಣ ನಷ್ಟವಾದ ಭಾಗದಲ್ಲಿ ತಕ್ಷಣ 10 ಸಾವಿರ ರೂ ಪರಿಹಾರವನ್ನು ನೀಡಲು ಜಿಲ್ಲಾಡಳಿತ ಸಿದ್ಧವಿದೆ. ವರದಿ ಬಂದ ನಂತರ ಮತ್ತಷ್ಟು ಪರಿಹಾರ ನೀಡಲಾಗುವುದು ಎಂದು ಭರವಸೆ ನುಡಿದರು.

ಹಾನಿಯಾಗಿರುವ ಕೆಲ ಸ್ಥಳಗಳಿಗೆ ನಾನೇ ಖುದ್ದು ಭೇಟಿ ನೀಡಿ ಅಂಕಿ-ಅಂಶ ಪಡೆಯಲಾಗುವುದು. ಜಿಲ್ಲೆಯ ಜನರ ಕಷ್ಟಗಳಿಗೆ ಸರಕಾರ ಸ್ಪಂದಿಸಲಿದೆ. ಜಿಲ್ಲೆಯಲ್ಲಿ ಇದುವರೆಗೂ ಇಡೀ ಹಾಸನ ಜಿಲ್ಲೆಯಲ್ಲಿ 196 ಕ್ಕೂ ಹೆಚ್ವು ಮನೆ ಕುಸಿದಿದೆ. ಮಳೆಯಿಂದ ಓರ್ವ ಸಾವನ್ನಪ್ಪಿದ್ದಾರೆ. 2 ಹಸುಗಳು ಮೃತಪಟ್ಟಿದೆ. ಸಕಲೇಶಪುರದ ಯಸಳೂರು ಪೊಲೀಸ್ ಠಾಣೆ ಜಖಂಗೊಂಡಿದೆ. ರೈತನು 2100 ಹೆಕ್ಟೇರ್‍ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಮುಸುಕಿನ ಜೋಳ ನಷ್ಟವಾಗಿದೆ. 779 ಹೆಕ್ಟೇರ್ ಪ್ರದೇಶದಲ್ಲಿ ಮಳೆ ನೀರಿನಿಂದ ಭತ್ತನಾಶವಾಗಿದೆ ಎಂದರು. ರಾಮನಾಥ ಪುರದಲ್ಲಿ 18 ಮನೆಗಳನ್ನು ಸ್ಥಳಾಂತರ ಮಾಡಿರುವುದಾಗಿ ಇದೆ ವೇಳೆ ಹೇಳಿದರು.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ವಿರೋಧ ಪಕ್ಷದ ನಾಯಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸಿದರು. ಇದೆ ವೇಳೆ ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X