ಬೆಳಗಾವಿ-ಧಾರವಾಡ, ಶಿವಮೊಗ್ಗ-ರಾಣೆಬೆನ್ನೂರ ರೈಲು ಮಾರ್ಗ ನಿರ್ಮಾಣ ಯೋಜನೆ: ಬಜೆಟ್ನಲ್ಲಿ ಅಳವಡಿಕೆ
ಸುರೇಶ್ ಅಂಗಡಿ
ಬೆಳಗಾವಿ, ಆ.8: ಮುಂದಿನ ರೈಲ್ವೆ ಬಜೆಟ್ನಲ್ಲಿ ಬೆಳಗಾವಿ-ಧಾರವಾಡ ಮತ್ತು ಶಿವಮೊಗ್ಗ-ರಾಣೆಬೆನ್ನೂರ ರೈಲು ಮಾರ್ಗ ನಿರ್ಮಾಣ ಯೋಜನೆಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.
ಶನಿವಾರ ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್, ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ ಹಾಗೂ ವಿಸ್ತರಣೆಗೊಂಡ ರೈಲ್ವೆ ಫ್ಲಾಟ್ ಫಾರ್ಮ್ ಇವುಗಳನ್ನು ವರ್ಚುವಲ್ ವೇದಿಕೆಯ ಮೂಲಕ ತಮ್ಮ ಬೆಳಗಾವಿ ಕಚೇರಿಯಿಂದಲೇ ಉದ್ಘಾಟಿಸಿ ಅವರು ಮಾತನಾಡಿದರು.
ಬಜೆಟ್ನಲ್ಲಿ ಈ ಎರಡು ಯೋಜನೆಗಳನ್ನು ಸೇರಿಸಿಕೊಂಡ ನಂತರ ಶೀಘ್ರವಾಗಿ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಶಿವಮೊಗ್ಗ ಜಿಲ್ಲೆಯ ರೈಲ್ವೆ ಜಾಲ ವಿಸ್ತರಣೆ, ರೈಲುಗಳ ಸಂಖ್ಯೆ ಹೆಚ್ಚಳ ಹಾಗೂ ನಿಲ್ದಾಣಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸಬೇಕೆಂದು ಕೋರಿದರು.
Next Story