Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಮುಂದುವರಿದೆ ಮಳೆ :...

ಉಡುಪಿ ಜಿಲ್ಲೆಯಲ್ಲಿ ಮುಂದುವರಿದೆ ಮಳೆ : ನಾವುಂದ, ಚಿತ್ರಪಾಡಿಗಳಲ್ಲಿ ನೆರೆ

ಹಲವು ಮನೆಗಳು ಜಲಾವೃತ

ವಾರ್ತಾಭಾರತಿವಾರ್ತಾಭಾರತಿ10 Aug 2020 8:29 PM IST
share
ಉಡುಪಿ ಜಿಲ್ಲೆಯಲ್ಲಿ ಮುಂದುವರಿದೆ ಮಳೆ : ನಾವುಂದ, ಚಿತ್ರಪಾಡಿಗಳಲ್ಲಿ ನೆರೆ

ಉಡುಪಿ, ಆ.10: ಕಳೆದ ರಾತ್ರಿಯಿಂದ ಸುರಿದ ಭಾರೀ ಮಳೆಯಿಂದಾಗಿ ಇಂದು ಬೆಳಗಿನ ಜಾವ ಬೈಂದೂರು ಹಾಗೂ ಬ್ರಹ್ಮಾವರ ತಾಲೂಕಿನ ಹಲವೆಡೆ ನೆರೆ ಉಂಟಾಗಿ, ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿ ಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 127.0 ಮಿ.ಮೀ. ಮಳೆಯಾಗಿದೆ. ಉಡುಪಿ- 119.0ಮಿ.ಮೀ., ಕುಂದಾಪುರ- 151.0ಮಿ.ಮೀ.,ಕಾರ್ಕಳ- 98.5 ಮಿ.ಮೀ. ಮಳೆಯಾಗಿದೆ.

ಕೊಲ್ಲೂರು ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯಾದ ಪರಿಣಾಮ ಸೌರ್ಪಣಿಕ ನದಿ ತುಂಬಿ ಹರಿದ ಪರಿಣಾಮ ನಾವುಂದ, ನಾಡಾ, ಬಡಾಕೆರೆಗಳಲ್ಲಿ ತಗ್ಗಿದ ನೆರೆ ಮತ್ತೆ ಕಂಡುಬಂದಿದೆ. ಇದರಿಂದ ಆ ಪ್ರದೇಶಗಳಲ್ಲಿರುವ ಹಲವು ಮನೆ ಗಳು ಜಲಾವೃತಗೊಂಡಿವೆ. ಆದರೆ ಎಲ್ಲೂ ಯಾವುದೇ ಅಪಾಯ ಅಥವಾ ಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಪ್ರದೇಶಗಳಲ್ಲಿ ಬೆಳಗಿನ ಜಾವ ಕಾಣಿಸಿಕೊಂಡ ನೆರೆ ಮಧ್ಯಾಹ್ನ ವೇಳೆ ತಗ್ಗಿವೆ. ಇಲ್ಲಿಯ ಜನತೆಗೆ ಅನುಕೂಲವಾಗಲು ಗ್ರಾಪಂ ವತಿಯಿಂದ ದೋಣಿ ವ್ಯವಸ್ಥೆ ಕಲ್ಪಿಸಲಾಗಿದೆ. ಸದ್ಯ ಬೈಂದೂರು ತಾಲೂಕಿನ ಎಲ್ಲೂ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರ್ ತಿಳಿಸಿದ್ದಾರೆ.

ಚಿತ್ರಪಾಡಿ ಪರಿಸರದಲ್ಲಿ ನೆರೆ: ಸಾಲಿಗ್ರಾಮ ಚಿತ್ರಪಾಡಿ ಗ್ರಾಮದ ಬೆಟ್ಲಕ್ಕಿ, ಮಂಡಾಜೆಡ್ಡು, ಹೊಳೆಕೆರೆ ಎಂಬಲ್ಲಿ ನೆರೆ ಉಂಟಾಗಿದ್ದು, ಸುಮಾರು ಏಳೆಂಟು ಮನೆಗಳು ಜಲಾವೃತಗೊಂಡಿವೆ.

ಇಲ್ಲಿನ ಸುಮಾರು ಏಳು ಮನೆಗಳ ಅಂಗಳಕ್ಕೆ ನೆರೆ ನೀರು ನುಗ್ಗಿದು, ಮೊಣ ಕಾಲಿನವರೆಗೂ ನೀರು ಏರಿಕೆ ಕಂಡಿದೆ. ಮುಂದೆ ನೀರು ಏರಿಕೆ ಯಾದರೆ ಇಲ್ಲಿನ ಮನೆಯವರನ್ನು ಸ್ಥಳಾಂತರಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅದೇ ರೀತಿ ಬೆಟ್ಲಕ್ಕಿ, ಹೊಳೆಕೆರೆ, ಮಂಡಾಜೆಡ್ಡು ಭಾಗದಲ್ಲಿ ಸುಮಾರು 15 ಎಕರೆ ಭತ್ತದ ಬೆಳೆಯು ಸಂಪೂರ್ಣ ನೆರೆ ನೀರಿನಿಂದ ಆವೃತವಾಗಿದೆ.

ನೆರೆ ಪೀಡಿತ ಪ್ರದೇಶಗಳಿಗೆ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಪರಿಸರದಲ್ಲಿ ದೋಣಿಯ ವ್ಯವಸ್ಥೆ ಮಾಡಲಾಗಿದ್ದು, ದೋಣಿ ಮಾಲಿಕರಿಗೆ ತುರ್ತು ಸಹಕರಿಸುವಂತೆ ಸೂಚಿಸ ಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಹಲವು ಮನೆಗಳಿಗೆ ಹಾನಿ:  ಕುಂದಾಪುರ ತಾಲೂಕಿನ ಜಪ್ತಿ ಗ್ರಾಮದ ಹರೀಶ ಶೆಟ್ಟಿ ಎಂಬವರ ಮನೆಗೆ ಹಾನಿಯಾಗಿ40ಸಾವಿರ ರೂ., ವಡೇರ ಹೋಬಳಿ ಗ್ರಾಮದ ಗಿರಿಜಮ್ಮ ಪೂಜಾರ್ತಿ ಮನೆ ಭಾಗಶಃ ಹಾನಿಯಾಗಿ 35,000ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಕಾಪು ತಾಲೂಕಿನ ಬೆಳಪು ಗ್ರಾಮದ ಶಂಕರ ಶೆಟ್ಟಿ ಮನೆಯ ಅಡುಗೆ ಕೋಣೆ ಸಂಪೂರ್ಣ ಹಾನಿಯಾಗಿ 80,000ರೂ., ಕಳತ್ತೂರು ಗ್ರಾಮದ ಪ್ರಮೀಳ ಎಂಬವರ ಮನೆ ಗಾಳಿ-ಮಳೆಯಿಂದ ಭಾಗಶಃ ಹಾನಿಯಾಗಿ 30,000ರೂ. ನಷ್ಟವಾಗಿದೆ. ಬ್ರಹ್ಮಾವರ ತಾಲೂಕಿನ ಹೇರಾಡಿ ಗ್ರಾಮದ ಪ್ರೇಮಾ ಶೆಡ್ತಿ ಮನೆಗೆ 30000ರೂ., ಐರೋಡಿ ಗ್ರಾಮದ ಬೇಬಿ ಮಡಿವಾಳ್ತಿ ಮನೆಗೆ 10ಸಾವಿರ ರೂ., ಗುಂಡ್ಮಿಯ ಗೋವಿಂದ ಮನೆಗೆ 30,000ರೂ., ನಡೂರು ಗ್ರಾಮದ ಕಾವೇರಿ ಮನೆಗೆ 10000ರೂ., ವಾರಂಬಳ್ಳಿ ಗ್ರಾಮದ ವಾರಿಜ ಮನೆ ಸಂಪೂರ್ಣ ಹಾನಿಯಾಗಿ 1,00,000ರೂ., ಕಾರ್ಕಡ ಗ್ರಾಮದ ಮಂಜಿ ಪೂಜಾರ್ತಿ ಮನೆಗೆ 40000ರೂ., ಚಾಂತಾರು ಗ್ರಾಮದ ರಸ ಬಾಯಿ ಮನೆ ಸಂಪೂರ್ಣ ಹಾನಿಯಾಗಿ 1,50,000ರೂ. ನಷ್ಟ ಉಂಟಾಗಿದೆ ಎಂದು ತಾಲೂಕು ಕಚೇರಿ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X