Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈವಾನ್‌ಗೆ ಅಮೆರಿಕ ಆರೋಗ್ಯ ಕಾರ್ಯದರ್ಶಿ...

ತೈವಾನ್‌ಗೆ ಅಮೆರಿಕ ಆರೋಗ್ಯ ಕಾರ್ಯದರ್ಶಿ ಭೇಟಿ

40 ವರ್ಷಗಳಲ್ಲಿ ಇದೇ ಮೊದಲು; ಚೀನಾ ಖಂಡನೆ

ವಾರ್ತಾಭಾರತಿವಾರ್ತಾಭಾರತಿ10 Aug 2020 9:42 PM IST
share
ತೈವಾನ್‌ಗೆ ಅಮೆರಿಕ ಆರೋಗ್ಯ ಕಾರ್ಯದರ್ಶಿ ಭೇಟಿ

ತೈಪೆ (ತೈವಾನ್), ಆ. 10: ಅಮೆರಿಕ ಸಚಿವ ಸಂಪುಟದ ಸದಸ್ಯರೊಬ್ಬರು ಸೋಮವಾರ ತೈವಾನ್ ಅಧ್ಯಕ್ಷೆ ಸೈ ಇಂಗ್-ವೆನ್‌ರನ್ನು ರಾಜಧಾನಿ ತೈಪೆಯಲ್ಲಿ ಭೇಟಿಯಾಗಿದ್ದಾರೆ. 1979ರಲ್ಲಿ ಅಮೆರಿಕವು ತೈವಾನ್‌ಗೆ ನೀಡುತ್ತಿದ್ದ ಮಾನ್ಯತೆಯನ್ನು ಚೀನಾಕ್ಕೆ ವರ್ಗಾಯಿಸಿದ ಬಳಿಕ, ಅಮೆರಿಕದ ಉನ್ನತ ಮಟ್ಟದ ರಾಜತಾಂತ್ರಿಕರೊಬ್ಬರು ತೈವಾನ್ ಮುಖ್ಯಸ್ಥರನ್ನು ಭೇಟಿಯಾಗುವುದು ಇದೇ ಮೊದಲ ಬಾರಿಯಾಗಿದೆ.

ಉಭಯ ದೇಶಗಳು ಹೊಂದಿರುವ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಉತ್ತೇಜನ ನೀಡಲು ಹಾಗೂ ಕೊರೋನ ವೈರಸ್ ಸಾಂಕ್ರಾಮಿಕವನ್ನು ಹತೋಟಿಗೆ ತರುವಲ್ಲಿ ತೈವಾನ್ ಗಳಿಸಿದ ಯಶಸ್ಸನ್ನು ಅಭಿನಂದಿಸುವುದಕ್ಕಾಗಿ ಅಮೆರಿಕದ ಆರೋಗ್ಯ ಕಾರ್ಯದರ್ಶಿ ಅಲೆಕ್ಸ್ ಆ್ಯಝರ್ ತೈವಾನ್‌ಗೆ ಮೂರು ದಿನಗಳ ಭೇಟಿ ನೀಡಿದ್ದಾರೆ.

ಅಮೆರಿಕ ಮತ್ತು ಚೀನಾಗಳ ನಡುವಿನ ಸಂಬಂಧವು ಸಾರ್ವಕಾಲಿಕ ಕನಿಷ್ಠ ಮಟ್ಟದಲ್ಲಿರುವ ಸಮಯದಲ್ಲಿ ಅಮೆರಿಕದ ಉನ್ನತ ರಾಜತಾಂತ್ರಿಕರೊಬ್ಬರು ತೈವಾನ್‌ಗೆ ಭೇಟಿ ನೀಡಿರುವುದು ಗಮನಾರ್ಹವಾಗಿದೆ. ಇತ್ತೀಚಿನ ತಿಂಗಳುಗಳಲ್ಲಿ ವ್ಯಾಪಾರ, ಸೇನೆ ಮತ್ತು ಭದ್ರತಾ ವಿಷಯಗಳು ಹಾಗೂ ಕೊರೋನ ವೈರಸ್ ಸಾಂಕ್ರಾಮಿಕಗಳ ವಿಷಯಗಳಲ್ಲಿ ಅಮೆರಿಕ ಮತ್ತು ಚೀನಾಗಳ ನಡುವಿನ ಸಂಬಂಧ ತೀರಾ ಹಳಸಿದೆ.

ತೈವಾನ್ ತನಗೆ ಸೇರಿದ ಭೂಭಾಗವಾಗಿದೆ ಎಂದು ಚೀನಾ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದೆ ಹಾಗೂ ಒಂದಲ್ಲ ಒಂದು ದಿನ ಅದನ್ನು ಮಾತೃಭೂಮಿ ಚೀನಾಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿದೆ.

ಸೋಮವಾರ ಬೆಳಗ್ಗೆ ಆ್ಯಝರ್ ತೈವಾನ್ ಅಧ್ಯಕ್ಷೆಯನ್ನು ಭೇಟಿಯಾದರು. ‘‘ಕೊರೋನ ವೈರಸ್ ಸಾಂಕ್ರಾಮಿಕವನ್ನು ನಿಭಾಯಿಸಲು ತೈವಾನ್ ತೆಗೆದುಕೊಂಡಿರುವ ಕ್ರಮಗಳು ತೈವಾನ್ ಸಮಾಜದ ಮುಕ್ತ, ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕ ಗುಣಲಕ್ಷಣಗಳನ್ನು ಬಿಂಬಿಸಿದೆ ಹಾಗೂ ಸಾಂಕ್ರಾಮಿಕವನ್ನು ನಿಬಾಯಿಸುವಲ್ಲಿ ಅದು ತೆಗೆದುಕೊಂಡಿರುವ ಕ್ರಮಗಳು ಜಗತ್ತಿನ ಯಶಸ್ವಿ ಪ್ರಯತ್ನಗಳ ಪೈಕಿ ಒಂದಾಗಿದೆ’’ ಎಂದು ಆ್ಯಝರ್ ಈ ಸಂದರ್ಭದಲ್ಲಿ ಹೇಳಿದರು.

ಅದೇ ವೇಳೆ, ಅಮೆರಿಕದ ಉನ್ನತ ರಾಜತಾಂತ್ರಿಕರ ತೈವಾನ್ ಭೇಟಿಯನ್ನು ಚೀನಾ ಖಂಡಿಸಿದೆ. ಅಮೆರಿಕವು ಈ ವಲಯದ ಶಾಂತಿ ಮತ್ತು ಸ್ಥಿರತೆಯನ್ನು ಅಪಾಯಕ್ಕೆ ಗುರಿಪಡಿಸುತ್ತಿದೆ ಎಂದು ಚೀನಾ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X