Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಸಗಿ ಮೇಳಗಳಿಂದ ಸಂಪೂರ್ಣ ವೇತನ ನೀಡದೆ...

ಖಾಸಗಿ ಮೇಳಗಳಿಂದ ಸಂಪೂರ್ಣ ವೇತನ ನೀಡದೆ ಅನ್ಯಾಯ : ಉಡುಪಿಯ ಯಕ್ಷಗಾನ ಕಲಾವಿದರುಗಳ ಆರೋಪ

ವಾರ್ತಾಭಾರತಿವಾರ್ತಾಭಾರತಿ10 Aug 2020 10:33 PM IST
share
ಖಾಸಗಿ ಮೇಳಗಳಿಂದ ಸಂಪೂರ್ಣ ವೇತನ ನೀಡದೆ ಅನ್ಯಾಯ : ಉಡುಪಿಯ ಯಕ್ಷಗಾನ ಕಲಾವಿದರುಗಳ ಆರೋಪ

ಉಡುಪಿ, ಆ.10: ಕೊರೋನ ಲಾಕ್‌ಡೌನ್ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಯಕ್ಷಗಾನ ಮೇಳಗಳ ಕಲಾವಿದರಿಗೆ ಸಂಪೂರ್ಣ ವೇತನವನ್ನು ನೀಡಲಾಗಿದೆ. ಆದರೆ ಜಿಲ್ಲೆಯ ಒಟ್ಟು 12 ಖಾಸಗಿ ಮೇಳಗಳ ಸಾವಿರಾರು ಕಲಾವಿದರಿಗೆ ಇನ್ನು ಕೂಡ ವೇತನ ನೀಡದೆ ಅನ್ಯಾಯ ಎಸಗಲಾಗಿದೆ ಎಂದು ವಿವಿಧ ಮೇಳಗಳ ನೊಂದ ಯಕ್ಷಗಾನ ಕಲಾವಿದರುಗಳು ಆರೋಪಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೌಕೂರು ಮೇಳದ ಯಕ್ಷಗಾನ ಕಲಾವಿದ ಕೋಡಿ ವಿಶ್ವನಾಥ ಗಾಣಿಗ, ಪ್ರತಿವರ್ಷ ಕಲಾವಿದರು 180ದಿನಕ್ಕೆ ಒಪ್ಪಂದ ಮಾಡಿಕೊಂಡರೂ 200 ದಿನ ಕೆಲಸ ಮಾಡು ತ್ತಾರೆ. ಆದರೆ ಯಜಮಾನರು ಅದಕ್ಕೆ ಹೆಚ್ಚುವರಿ ಸಂಬಳ ನೀಡು ವುದಿಲ್ಲ. ಅದೇ ರೀತಿ ಈ ಬಾರಿ ಕೂಡ 180 ದಿನಕ್ಕೆ ಒಪ್ಪಂದ ಮಾಡಿದರೂ ಕೊರೋನ ಹಿನ್ನೆಲೆಯಲ್ಲಿ 120 ದಿನಗಳ ವೇತನವನ್ನು ಮಾತ್ರ ನೀಡಿದ್ದಾರೆ. ಉಳಿದ ದಿನದ ವೇತನವನ್ನು ನೀಡಿಲ್ಲ ಎಂದು ದೂರಿದರು.

ಇಲಾಖೆಯ ಅಧೀನದಲ್ಲಿ ನಡೆಯುವ ಮಂದರ್ತಿ, ಮಾರಣಕಟ್ಟೆ, ಕಮಲ ಶಿಲೆ, ಕೋಟ ಅಮೃತೇಶ್ವರಿ ಮೇಳಗಳ ಕಲಾವಿದರಿಗೆ ಈಗಾಗಲೇ ಪೂರ್ಣ ಮೊತ್ತವನ್ನು ನೀಡಲಾಗಿದೆ. ಆದರೆ ಖಾಸಗಿ ಮೇಳಗಳಾದ ಸೌಕೂರು, ಹಿರಿ ಯಡ್ಕ, ನೀಲಾವರ, ಪೆರ್ಡೂರು, ಹಟ್ಟಿಯಂಗಡಿ, ಗೋಳಿಗರಡಿ, ಹಾಲಾಡಿ, ಮಡಾಮಕ್ಕಿ, ಮಾರಣಕಟ್ಟೆ, ಆರ್ಜಿ, ಸಿಗಂದೂರು, ಸಿತೂರು ಮೇಳಗಳ ಕಲಾವಿದರಿಗೆ ಪೂರ್ಣ ವೇತನ ನೀಡಿಲ್ಲ. ಈ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೀಡಿರುವ ಭರವಸೆ ಈವರೆಗೆ ಈಡೇರಿಲ್ಲ ಎಂದರು.

ಧಾರ್ಮಿಕ ದತ್ತಿ ಇಲಾಖೆಯಿಂದ, ಮೇಳಗಳ ದೇವಸ್ಥಾನದಿಂದ ಅಥವಾ ಮೇಳಗಳ ಯಜಮಾನರಿಂದಲೂ ನಮಗೆ ಯಾವುದೇ ಸಹಾಯ ದೊರೆತಿಲ್ಲ. ಈ ಬಗ್ಗೆ ಈ ವಿಚಾರವನ್ನು ಸಂಬಂಧಪಟ್ಟವರ ಗಮನಕ್ಕೆ ತಂದರೂ ಸರಕಾರದ ನಿರ್ಲಕ್ಷ ತೀವ್ರ ನೋವು ಉಂಟು ಮಾಡಿದೆ. ಪ್ರತಿ ಮೇಳಗಳು ದೇವಸ್ಥಾನದ ವತಿಯಿಂದ ನಡೆಯುತ್ತಿದ್ದು, ಇದರಿಂದ ದೇವಸ್ಥಾನಕ್ಕೆ ಪ್ರಚಾರ, ಲಾಭವೂ ಇದೆ. ಆದುದರಿಂದ ದೇವಸ್ಥಾನಗಳು ಕಲಾವಿದರ ನೆರವಿಗೆ ಆಗಮಿಸಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಾಲಿಗ್ರಾಮ ಮೇಳದ ಶಶಿಕಾಂತ್ ಶೆಟ್ಟಿ ಕಾರ್ಕಳ, ನೀಲಾವರ ಮೇಳದ ರಾಘವೇಂದ್ರ ಶೆಟ್ಟಿ, ಹಾಲಾಡಿ ಮೇಳದ ಗಣೇಶ್ ಬಳೆ ಗಾರ, ಗೋಪಾಲ ಪೂಜಾರಿ ಬ್ರಹ್ಮಾವರ, ನಾರಾಯಣ ಉಳ್ಳೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X