Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪರೀಕ್ಷೆ ಮುಂದೂಡಿ

ಪರೀಕ್ಷೆ ಮುಂದೂಡಿ

-ಲಕ್ಷ್ಮೀಕಾಂತ್, ತುಮಕೂರು-ಲಕ್ಷ್ಮೀಕಾಂತ್, ತುಮಕೂರು10 Aug 2020 11:32 PM IST
share

ಮಾನ್ಯರೇ,

 ಕರ್ನಾಟಕ ಲೋಕಸೇವಾ ಆಯೋಗದವರು ಈ ಬಾರಿ 106 ಕೆಎಎಸ್ ಪ್ರೊಬೆಷನರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಗೆಜೆಟೆಡ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 24, 2020ರಂದು ನಡೆಸಲು ತೀರ್ಮಾನಿಸಿದ್ದಾರೆ. ಈ ಪರೀಕ್ಷೆಗೆ ಪ್ರತಿ ಎರಡು ಅಥವಾ ಮೂರು ವರ್ಷಗಳಿಗೆ ಒಮ್ಮೆ ಮಾತ್ರ ಅರ್ಜಿ ಕರೆಯಲಾಗುತ್ತದೆ. ಪ್ರತಿ ಬಾರಿಯೂ ಮೂರೂವರೆ ಲಕ್ಷಕ್ಕೂ ಹೆಚ್ಚು ಮಂದಿ ಪರೀಕ್ಷೆಯಲ್ಲಿ ಹಾಜರಾಗುತ್ತಾರೆ. ಆದರೆ ಸರಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾಕ್ಟರ್, ನರ್ಸ್, ಪ್ರಥಮ ದರ್ಜೆ ಸಹಾಯಕರು, ಪಿಡಿಒಗಳು, ಆರೋಗ್ಯ ಅಧಿಕಾರಿಗಳು, ಲೆಕ್ಕಾಧಿಕಾರಿಗಳು ಹೀಗೆ ಹಲವಾರು ನೌಕರರು ಈಗ ಕೊರೋನ ಯೋಧರಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದು ಅವರಿಗೆ ಪ್ರತಿ ಶನಿವಾರ ಹಾಗೂ ರವಿವಾರಗಳಲ್ಲಿ ಕೂಡಾ ರಜೆ ಇರುವುದಿಲ್ಲ. ಇಂತಹ ಶೇ. 20 ನೌಕರರು ಈ ಬಾರಿ ಕೆಎಎಸ್ ಬರೆಯುವ ಆಕಾಂಕ್ಷಿಗಳಾಗಿದ್ದು ಅವರಿಗೆ ಪರೀಕ್ಷೆ ಬರೆಯಲು ಸಾಕಷ್ಟು ಸಮಸ್ಯೆಗಳು ಉಂಟಾಗುತ್ತಿವೆ. ಅಲ್ಲದೆ ಕೆಪಿಎಸ್‌ಸಿ ಕೇವಲ 6 -7 ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಿದ್ದು, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಸುಮಾರು 200 ಕಿಲೋಮೀಟರು ಅಂತರವಿರುವುದರಿಂದ ಸಮಯಕ್ಕೆ ಸರಿಯಾಗಿ ಗ್ರಾಮೀಣ ಭಾಗದ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲು ಸಾಧ್ಯವಾಗುವುದಿಲ್ಲ ಹಾಗೂ ಜಿಲ್ಲಾ ಕೇಂದ್ರದಿಂದ ಕುಗ್ರಾಮದಲ್ಲಿ ಇರುವಂತಹ ಹಲವಾರು ಅಭ್ಯರ್ಥಿಗಳಿಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕೂಡ ಸಮಯಕ್ಕೆ ಸರಿಯಾಗಿ ಇರುವುದಿಲ್ಲ. ಹಾಗಾಗಿ ಪರೀಕ್ಷೆ ಬರೆಯುವುದು ಅಸಾಧ್ಯದ ಮಾತಾಗಿದೆ. ಅಲ್ಲದೆ ಕೆಲವು ಅಭ್ಯರ್ಥಿಗಳು ಬೆಂಗಳೂರಿನಲ್ಲಿ ತರಬೇತಿಯನ್ನು ಪಡೆಯುವಾಗ ಬೆಂಗಳೂರನ್ನು ಪರೀಕ್ಷಾ ಕೇಂದ್ರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈಗ ಬೆಂಗಳೂರಿನಲ್ಲಿ ಕೊರೋನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಅವರು ತಮ್ಮ ಗ್ರಾಮಗಳಿಗೆ ತೆರಳಿದ್ದಾರೆ. ಈಗ ಅವರೂ ಬೆಂಗಳೂರಿಗೆ ಬಂದು ನಿಗದಿತ ವೇಳೆಯಲ್ಲಿ ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಅಲ್ಲದೆ ಯುಪಿಎಸ್‌ಸಿ ಮಾದರಿಯಲ್ಲಿ ಪರೀಕ್ಷಾ ಕೇಂದ್ರಗಳ ಬದಲಾವಣೆಗೆ ಕೆಪಿಎಸ್‌ಸಿ ಅವಕಾಶ ನೀಡಿಲ್ಲ. ಇದರಿಂದ ಮಳೆ, ಪ್ರವಾಹ ಇರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದವರಿಗೆ ಸಾಕಷ್ಟು ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ಈ ಮೇಲಿನ ಎಲ್ಲಾ ಸಮಸ್ಯೆಗಳನ್ನು ಪರಿಗಣಿಸಿ ಲೋಕಸೇವಾ ಆಯೋಗ ಈ ತಿಂಗಳ 24ರಂದು ನಡೆಸಲು ಉದ್ದೇಶಿಸಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಕನಿಷ್ಠ ಒಂದು ಅಥವಾ ಎರಡು ತಿಂಗಳು ಮುಂದೂಡುವುದು ಸಮಯೋಚಿತ ನಿರ್ಧಾರವಾಗಲಿದೆೆ.

share
-ಲಕ್ಷ್ಮೀಕಾಂತ್, ತುಮಕೂರು
-ಲಕ್ಷ್ಮೀಕಾಂತ್, ತುಮಕೂರು
Next Story
X