Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೃಹಪ್ರವೇಶದ ದಿನ ಮನೆಯಲ್ಲಿ ಪ್ರೀತಿಯ...

ಗೃಹಪ್ರವೇಶದ ದಿನ ಮನೆಯಲ್ಲಿ ಪ್ರೀತಿಯ ಪತ್ನಿಯ ಪ್ರತಿಮೆಯನ್ನಿಟ್ಟ ಉದ್ಯಮಿ

ಎಲ್ಲರ ಗಮನಸೆಳೆದ ಜೀವಂತವಿರುವಂತೆ ಕಾಣುವ ಪ್ರತಿಮೆ

ವಾರ್ತಾಭಾರತಿವಾರ್ತಾಭಾರತಿ11 Aug 2020 1:50 PM IST
share
ಗೃಹಪ್ರವೇಶದ ದಿನ ಮನೆಯಲ್ಲಿ ಪ್ರೀತಿಯ ಪತ್ನಿಯ ಪ್ರತಿಮೆಯನ್ನಿಟ್ಟ ಉದ್ಯಮಿ

ಕೊಪ್ಪಳ, ಆ.11: ಕೊನೆಯುಸಿರೆಳೆಯುವುದಕ್ಕೂ ಮೊದಲು ಪತ್ನಿ ಇಚ್ಛಿಸಿದಂತೆ ಮನೆ ನಿರ್ಮಿಸಿದ ಉದ್ಯಮಿಯೊಬ್ಬರು ಗೃಹಪ್ರವೇಶದ ದಿನ ಮೃತ ಪತ್ನಿಯ ಪ್ರತಿಮೆಯನ್ನು ಮನೆಯಲ್ಲಿಟ್ಟಿದ್ದು, ಜೀವಂತವಿರುವಂತೆ ಕಾಣುವ ಈ ಪ್ರತಿಮೆ ಎಲ್ಲರ ಗಮನಸೆಳೆಯುತ್ತಿದೆ. ಇದು ಕೊಪ್ಪಳದ ಸಮೀಪದ ಭಾಗ್ಯ ನಗರದ ಉದ್ಯಮಿ ಶ್ರೀನಿವಾಸ್ ಗುಪ್ತಾ ಎಂಬವರು ತನ್ನ ಪತ್ನಿಯ ಕನಸಿನ ಮನೆಯಲ್ಲಿ ಅವರನ್ನು ‘ಜೀವಂತ’ವನ್ನಾಗಿಸಿದ ಕತೆ.

ಶ್ರೀನಿವಾಸ್ ಗುಪ್ತಾರ ಪತ್ನಿ ಕೆವಿಎನ್ ಮಾಧವಿ ಹೀಗೆಯೇ ಮನೆಯೊಂದನ್ನು ಕಟ್ಟಬೇಕೆಂದು ಕನಸು ಹೊಂದಿದ್ದರು. ಅದರಂತೆ ಈ ದಂಪತಿ ಮನೆ ನಿರ್ಮಾಣವನ್ನೂ ಆರಂಭಿಸಿದ್ದರು. ಈ ನಡುವೆ 2017ರ ಜುಲೈ 5ರಂದು ತಿರುಪತಿಗೆ ತೆರಳುತ್ತಿದ್ದ ವೇಳೆ ಕೋಲಾರದ ಬಳಿ ಕಾರು ಅಪಘಾತಕ್ಕೀಡಾಗಿ ಮಾಧವಿ ಸ್ಥಳದಲ್ಲೇ ಮೃತಪಟ್ಟಿದ್ದರು. ಇದರಿಂದ ತೀವ್ರ ದುಃಖತಪ್ತರಾಗಿದ್ದ ಶ್ರೀನಿವಾಸ್ ಗುಪ್ತಾ ಆ ಬಳಿಕ ಮನೆ ನಿರ್ಮಾಣ ಕಾರ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದರು. ಬಳಿಕ ಮಕ್ಕಳ ಒತ್ತಾಯದ ಮೆರೆಗೆ ಮನೆ ನಿರ್ಮಾಣವನ್ನು ಮುಂದುವರಿಸಿದರು. ಮನೆಯೂ ಸಿದ್ಧಗೊಂಡಿತ್ತು. ಆದರೆ ಪತ್ನಿಯ ಕನಸಿನ ಮನೆಯಲ್ಲಿ ಆಕೆಯೇ ಇಲ್ಲವೆಂಬ ಕೊರಗು ಶ್ರೀನಿವಾಸ್‌ರನ್ನು ಕಾಡತೊಡಗಿತು. ಹೊಸಮನೆಯಲ್ಲಿ ಪತ್ನಿಯ ನೆನಪಿಗೆ ಏನಾದರೂ ಮಾಡಬೇಕೆಂದು ಅವರು ನಿರ್ಧರಿಸಿದರು.

ಈ ವೇಳೆ ಮನೆಯ ಆರ್ಕಿಟೆಕ್ಟ್ ರಂಘಣ್ಣನವರ್ ಮೇಣದ ಪ್ರತಿಮೆ ಮಾಡಿಸಲು ಸಲಹೆ ನೀಡಿದರು. ಅದರಂತೆ ಬೆಂಗಳೂರಿನ ಶ್ರೀಧರಮೂರ್ತಿ ಎಂಬವರ ಗೊಂಬೆ ಮನೆಗೆ ಹೋದಾಗ, ಅಲ್ಲಿ ಅವರು ಮೇಣದ ಪ್ರತಿಮೆ ಬದಲಾಗಿ ಸಿಲಿಕಾನ್ ಪ್ರತಿಮೆ ಮಾಡಿಸಲು ಸಲಹೆ ನೀಡಿದರು. ಅದರಂತೆ ಶ್ರೀಧರಮೂರ್ತಿ ಸಿಲಿಕಾನ್ ಮೆಟೀರಿಯಲ್‌ನಲ್ಲಿ ಮಾಧವಿಯವರ ನೈಜರೂಪದ ಪ್ರತಿಮೆ ಸಿದ್ಧಪಡಿಸಿದರು. ಆಗಸ್ಟ್ 8ರಂದು ಶ್ರೀನಿವಾಸ್ ಅವರ ನೂತನ ಮನೆಯ ಗೃಹಪ್ರವೇಶ ನಡೆಯಿತು. ಈ ವೇಳೆ ಸೋಫಾದಲ್ಲಿ ಕುಳಿತ ಭಂಗಿಯಲ್ಲಿರುವ ಮಾಧವಿಯವರ ಸಿಲಿಕಾನ್ ಪ್ರತಿಮೆಯನ್ನು ಮನೆಯ ಹಾಲ್‌ನಲ್ಲಿ ಇಟ್ಟಿದ್ದಾರೆ. ನಗುಮುಖದ ಮಾಧವಿಯವರ ಪ್ರತಿಮೆ ಅದೆಷ್ಟು ನೈಜವಾಗಿ ಮೂಡಿಬಂದಿದೆಯೆಂದರೆ ಯಾರಾದರೂ ಮನೆಗೆ ಬಂದರೆ ಇವರನ್ನು ಮಾತನಾಡಿಸದೆ ಇರಲಾರರು.!

ಈ ಸಿಲಿಕಾನ್ ಪ್ರತಿಮೆಯನ್ನು ಮಾಡಲು ಶ್ರೀಧರ ಮೂರ್ತಿ ಒಂದು ವರ್ಷಕ್ಕೂ ಹೆಚ್ಚು ಕಾಲ ಸಮಯ ತೆಗೆದುಕೊಂಡಿದ್ದಾರೆ. ಈ ಸಿಲಿಕಾನ್ ಪ್ರತಿಮೆಗೆ ಜೀವ ಇಲ್ಲ ಎನ್ನುವುದನ್ನು ಒಂದು ಬಿಟ್ಟರೆ ಥೇಟ್ ಮಾಧವಿ ಅವರ ತರಹನೇ ಇದೆ. ಈ ಪ್ರತಿಮೆಗೆ ಮಾಧವಿ ಉಡುತ್ತಿದ್ದ ಸೀರೆಯನ್ನೇ ಉಡಿಸಲಾಗಿದ್ದು, ಅವರು ತೊಡುತ್ತಿದ್ದ ಚಿನ್ನಾಭರಣಗಳನ್ನು ಮೈಮೇಲೆ ಹಾಕಲಾಗಿದೆ. ಜೊತೆಗೆ ಅವರಂತೆಯೇ ಹೇರ್ ಸ್ಟೈಲ್ ಸಹ ಮಾಡಲಾಗಿದೆ.

ಮಾಧವಿ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರು ಈ ಪ್ರತಿಮೆ ಬಂದಾಗಿನಿಂದ ತಮ್ಮ ತಾಯಿ ಎಲ್ಲಿಗೂ ಹೋಗಿಲ್ಲ, ತಮ್ಮ ಜೊತೆಗೇನೆ ಇದ್ದಾರೆ ಎನ್ನುವ ಭಾವದಲ್ಲಿದ್ದಾರೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X