Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಅಮೆರಿಕಾ, ಪಾಕ್, ಚೀನಾ ಗಮನಿಸಬಹುದೆಂದು...

‘ಅಮೆರಿಕಾ, ಪಾಕ್, ಚೀನಾ ಗಮನಿಸಬಹುದೆಂದು ರಕ್ಷಣಾ ಆಡಿಟ್ ವರದಿಗಳನ್ನು ಅಪ್‍ಲೋಡ್ ಮಾಡಿಲ್ಲ’

ನಿರ್ಗಮನ ಸಿಎಜಿ ರಾಜೀವ್ ಮೆಹ್ರಿಶಿ

ವಾರ್ತಾಭಾರತಿವಾರ್ತಾಭಾರತಿ11 Aug 2020 2:59 PM IST
share
‘ಅಮೆರಿಕಾ, ಪಾಕ್, ಚೀನಾ ಗಮನಿಸಬಹುದೆಂದು ರಕ್ಷಣಾ ಆಡಿಟ್ ವರದಿಗಳನ್ನು ಅಪ್‍ಲೋಡ್ ಮಾಡಿಲ್ಲ’

ಹೊಸದಿಲ್ಲಿ: “ವಾಷಿಂಗ್ಟನ್‍ ನಲ್ಲಿ , ಬೀಜಿಂಗ್‍ ನಲ್ಲಿ  ಹಾಗೂ ಇಸ್ಲಾಮಾಬಾದ್‍ ನಲ್ಲಿ ಯಾರಾದರೂ ಗಮನಿಸುತ್ತಿರಬಹುದು'' ಎಂಬ ಕಾರಣಕ್ಕೆ ದೇಶದ ರಕ್ಷಣಾ ಆಡಿಟ್ ವರದಿಗಳನ್ನು ಆನ್ ಲೈನ್ ನಲ್ಲಿ ಲಭ್ಯವಾಗಿಸಿಲ್ಲ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಹುದ್ದೆಯಿಂದ ನಿವೃತ್ತರಾದ  ರಾಜೀವ್ ಮೆಹ್ರಿಶಿ ಅವರು ವಿವರಣೆ ನೀಡಿದ್ದಾರೆ.

“ಈ ವರದಿಗಳು ಸುಲಭವಾಗಿ ಲಭ್ಯವಾಗದಂತೆ ನೋಡಿಕೊಳ್ಳುವುದೇ ಉದ್ದೇಶವಾಗಿತ್ತು. ಅದು ಅಗತ್ಯವೂ ಇಲ್ಲ, ಇದು ಸರಕಾರದ ನಿರ್ಧಾರವಲ್ಲ ಬದಲು ನನ್ನ ನಿರ್ಧಾರವಾಗಿತ್ತು'' ಎಂದೂ ಅವರು ಹೇಳಿದರು.

“ನಾವು ಈ ವರದಿಯನ್ನು ಸಂಸತ್ತಿಗೆ, ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ನೀಡುತ್ತಿದ್ದೇವೆ. ನಿಜವಾಗಿಯೂ ಅದೊಂದು ರಹಸ್ಯವಿಲ್ಲ.  ಆದರೆ ಕೇವಲ ಒಂದು ಟ್ಯಾಪ್ ಮಾಡಿದರೆ ಲಭ್ಯವಾಗುವಂತೆ ನಾವು ಮಾಡಿಲ್ಲ'' ಎಂದು ಅವರು ಹೇಳಿದರು.

“ಲೋಪದೋಷಗಳನ್ನು ನಮ್ಮ ವರದಿಯಲ್ಲಿ ಉಲ್ಲೇಖಿಸುತ್ತೇವೆ. ಆದರೆ ರಕ್ಷಣಾ ವರದಿಗಳನ್ನು ವೆಬ್‍ ಸೈಟ್‍ ನಲ್ಲಿ ಅಪ್‍ ಲೋಡ್ ಮಾಡುವ ಅಗತ್ಯವಿಲ್ಲ. ಅದು ಜಗತ್ತಿನಲ್ಲಿ ಎಲ್ಲರಿಗೂ ಸುಲಭವಾಗಿ ಏಕೆ ಲಭ್ಯವಾಗಬೇಕು?'' ಎಂದು ಅವರು ಪ್ರಶ್ನಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, “ನಾನು ಗೃಹ ಸಚಿವಾಲಯದಲ್ಲಿದ್ದಾಗ ಪಾಕಿಸ್ತಾನದ ಜತೆಗೆ ಭಾರೀ ಉದ್ವಿಗ್ನ ಸ್ಥಿತಿಯಿತ್ತು.  ಆಗ ಸಿಎಜಿ ವರದಿಯಲ್ಲಿ ಶಸ್ತ್ರಾಸ್ತ್ರ ಕೊರತೆ ಕುರಿತು ವಿವರಗಳಿದ್ದವು. ವಾಸ್ತವವಾಗಿ ಅಲ್ಲಿ ಕೊರತೆಯಿದ್ದರೂ  ಶತ್ರುಗಳು ಅದರ ಬಗ್ಗೆ ತಿಳಿಯಬಾರದು'' ಎಂದರು.

ಮಾಜಿ ಗೃಹ ಕಾರ್ಯದರ್ಶಿಯಾಗಿದ್ದ ಮೆಹ್ರಿಶಿ ಅವರನ್ನು ಸಿಎಜಿ ಆಗಿ ಸೆಪ್ಟೆಂಬರ್ 2017ರಲ್ಲಿ ನೇಮಕ ಮಾಡಿದ್ದರು. ಅವರ ಅವಧಿಯಲ್ಲಿ ಎಂಟು ರಕ್ಷಣಾ ಆಡಿಟ್ ವರದಿಗಳನ್ನು ಸಂಸತ್ತಿಗೆ ಸಲ್ಲಿಸಲಾಗಿತ್ತಾದರೂ ಅವುಗಳನ್ನು ಸಿಎಜಿ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X