Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೈರೂತ್ ಸ್ಫೋಟದ ನಂತದ ಜನಾಕ್ರೋಶ:...

ಬೈರೂತ್ ಸ್ಫೋಟದ ನಂತದ ಜನಾಕ್ರೋಶ: ರಾಜೀನಾಮೆ ಘೋಷಿಸಿದ ಲೆಬನಾನ್ ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ11 Aug 2020 4:27 PM IST
share
ಬೈರೂತ್ ಸ್ಫೋಟದ ನಂತದ ಜನಾಕ್ರೋಶ: ರಾಜೀನಾಮೆ ಘೋಷಿಸಿದ ಲೆಬನಾನ್ ಪ್ರಧಾನಿ

ಬೈರೂತ್: ಲೆಬನಾನ್ ರಾಜಧಾನಿ ಬೈರೂತ್ ನ ಬಂದರು ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಭಾರೀ ಸ್ಫೋಟದಲ್ಲಿ ಅಪಾರ ಸಾವು-ನೋವು ಸಂಭವಿಸಿದ ನಂತರ ದೇಶದಲ್ಲಿ ಸರಕಾರದ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಅಲ್ಲಿನ ಪ್ರಧಾನಿ ಹಸನ್ ದಿಯಾಬ್ ತಮ್ಮ ಸರಕಾರದ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಈಗಾಗಲೇ ಹಲವಾರು ಸಚಿವರು ಸರಕಾರಕ್ಕೆ ರಾಜೀನಾಮೆ ನೀಡಿದ್ದರೆ ಸೋಮವಾರದ ಸಚಿವ ಸಂಪುಟ ಸಭೆಯಲ್ಲಿ ಇನ್ನೂ ಹಲವಾರು ಸಚಿವರು ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದರಿಂದ ಸರಕಾರದ ಪತನ ಅನಿವಾರ್ಯ ಎಂದು ಮನಗಂಡು ಪ್ರಧಾನಿ ಸರಕಾರದ ರಾಜೀನಾಮೆ ಘೋಷಿಸಿದ್ದಾರೆ.

ದೇಶದ ಭ್ರಷ್ಟ ರಾಜಕೀಯ ವ್ಯವಸ್ಥೆಗೆ ಅಂತ್ಯ ಹಾಡುವಂತೆ ಆಗ್ರಹಿಸಿ ಅಲ್ಲಿನ ಉದ್ರಿಕ್ತ ನಾಗರಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ ವೇಳೆ ಅವರ ಹಾಗೂ ಭದ್ರತಾ ಪಡೆಗಳ ನಡುವೆ ಹಲವು ಬಾರಿ ಸಂಘರ್ಷಗಳು ನಡೆದಿವೆ.

ದಿಯಾಬ್ ಸರಕಾರ ರಾಜೀನಾಮೆ ಘೋಷಿಸುತ್ತಿದ್ದಂತೆಯೇ ಜನರು ನಗರದ ರಸ್ತೆಗಳಲ್ಲಿ ತಮ್ಮ ಕಾರುಗಳ ಹಾರ್ನ್ ಬಾರಿಸಿ ಸಂತಸ ವ್ಯಕ್ತ ಪಡಿಸಿದರಲ್ಲದೆ, ತ್ರಿಪೋಲಿ ನಗರದಲ್ಲಿ ಕೆಲವರು ಸಂಭ್ರಮಾಚರಣೆಯ ಭಾಗವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಕಳೆದ ತಿಂಗಳು ಸ್ಫೋಟಕಗಳ ಬಗ್ಗೆ ಎಚ್ಚರಿಸಿದ್ದ ಭದ್ರತಾ ಅಧಿಕಾರಿಗಳು

ಬೈರೂತ್‌ನ ಬಂದರಿನಲ್ಲಿ ಶೇಖರಿಸಿಡಲಾಗಿರುವ 2,750 ಟನ್ ಅಮೋನಿಯಂ ನೈಟ್ರೇಟ್ ರಾಸಾಯನಿಕವು ಭದ್ರತಾ ಬೆದರಿಕೆಯಾಗಿದೆ ಹಾಗೂ ಅದು ಒಂದು ವೇಳೆ ಸ್ಫೋಟಗೊಂಡರೆ ರಾಜಧಾನಿಯನ್ನು ನಾಶಗೊಳಿಸಬಹುದಾಗಿದೆ ಎಂಬುದಾಗಿ ಲೆಬನಾನ್‌ನ ಭದ್ರತಾ ಅಧಿಕಾರಿಗಳು ಕಳೆದ ತಿಂಗಳು ಪ್ರಧಾನಿ ಮತ್ತು ಅಧ್ಯಕ್ಷರನ್ನು ಎಚ್ಚರಿಸಿದ್ದರು ಎಂದು ‘ರಾಯ್ಟರ್ಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅವರು ಎಚ್ಚರಿಸಿದ ಎರಡೇ ವಾರಗಳಲ್ಲಿ ಕೈಗಾರಿಕೆಯಲ್ಲಿ ಬಳಸಲಾಗುವ ರಾಸಾಯನಿಕವು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸಿದೆ. ಸ್ಫೋಟದಿಂದಾಗಿ ಬಂದರಿನ ಹೆಚ್ಚಿನ ಭಾಗ ನಾಮಾವಶೇಷವಾಗಿದೆ ಹಾಗೂ ರಾಜಧಾನಿಯ ಹಲವು ಭಾಗಗಳು ಧ್ವಂಸಗೊಂಡಿವೆ.

ಸ್ಫೋಟದಲ್ಲಿ ಕನಿಷ್ಠ 163 ಮಂದಿ ಮೃತಪಟ್ಟಿದ್ದಾರೆ ಹಾಗೂ 6,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 6,000 ಕಟ್ಟಡಗಳು ಧ್ವಂಸಗೊಂಡಿವೆ ಎಂದು ಮುನಿಸಿಪಲ್ ಅಧಿಕಾರಿಗಳು ಹೇಳಿದ್ದಾರೆ.

ಸ್ಫೋಟಕ್ಕೆ ಕಾರಣವಾದ ಅಂಶಗಳ ಬಗ್ಗೆ ಸರಕಾರಿ ಭದ್ರತಾ ಮಹಾನಿರ್ದೇಶನಾಲಯವು ವರದಿಯೊಂದನ್ನು ಸಿದ್ಧಪಡಿಸಿದೆ ಹಾಗೂ ಈ ವರದಿಯಲ್ಲಿ, ಭಾರೀ ಪ್ರಮಾಣದ ಸ್ಫೋಟಕಗಳ ಸಂಗ್ರಹವು ಒಡ್ಡಿರುವ ಅಪಾಯದ ಬಗ್ಗೆ ಅಧ್ಯಕ್ಷ ಮೈಕಲ್ ಅವೌನ್ ಮತ್ತು ಪ್ರಧಾನಿ ಹಸನ್ ದಿಯಾಬ್‌ಗೆ ಜುಲೈ 20ರಂದು ಬರೆಯಲಾದ ಖಾಸಗಿ ಪತ್ರವೊಂದನ್ನು ಪ್ರಸ್ತಾಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X