Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸೆಸೆಲ್ಸಿ ಪರೀಕ್ಷೆಯ ಯಶಸ್ವಿಗೆ...

ಎಸೆಸೆಲ್ಸಿ ಪರೀಕ್ಷೆಯ ಯಶಸ್ವಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ11 Aug 2020 5:04 PM IST
share
ಎಸೆಸೆಲ್ಸಿ ಪರೀಕ್ಷೆಯ ಯಶಸ್ವಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಆ.11: ಕೊರೋನದ ಸವಾಲುಗಳ ನಡುವೆ ಯಶಸ್ವಿಯಾಗಿ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.

ಕೊರೋನ ಸವಾಲುಗಳ ನಡುವೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗಬಾರದು ಎಂದು ರಾಜ್ಯ ಸರಕಾರ ಟೊಂಕಕಟ್ಟಿ ನಿಂತು, ಈ ವರ್ಷದ ಜೂನ್ 25 ರಿಂದ ಜುಲೈ 3 ರವರೆಗೆ, ಅತ್ಯಂತ ಯಶಸ್ವಿಯಾಗಿ ನಡೆಸಿದ ಎಸೆಸೆಲ್ಸಿ ಪರೀಕ್ಷೆಗಳ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಶೇಕಡಾ 71.80 ರಷ್ಟು ಮಕ್ಕಳು ತೇರ್ಗಡೆಯಾಗಿದ್ದಾರೆ. ಆತಂಕಗಳನ್ನು ಮೀರಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನನ್ನ ಶುಭ ಕಾಮನೆಗಳು. ತಮ್ಮ ಮುಂದಿನ ವಿದ್ಯಾಭ್ಯಾಸವು ಸುಗಮವಾಗಿ ನಡೆಯಲಿ. ತಮಗೆ ಉಜ್ವಲ ಭವಿಷ್ಯ ಲಭಿಸಲಿ. ಫಲಿತಾಂಶದಲ್ಲಿ ಹಿನ್ನಡೆ ಕಂಡ ಮಕ್ಕಳು ಧೈರ್ಯ ದೃತಿಗೆಡದೆ ಮತ್ತಷ್ಟು ಪರಿಶ್ರಮ, ಆತ್ಮವಿಶ್ವಾಸದಿಂದ ಸಿದ್ಧತೆ ನಡೆಸಿ, ಪೂರಕ ಪರೀಕ್ಷೆಗಳನ್ನು ಎದುರಿಸಿ ಉತ್ತೀರ್ಣರಾಗಲಿ.

ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳ ಪೋಷಕರಿಗೆ, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದ ಶಿಕ್ಷಕ ವೃಂದಕ್ಕೆ ನಾನು ಅಭಾರಿ. ಹಿಂದೆಂದೂ ಕಾಣದ, ಕೇಳರಿಯದಂತಹ ಕೊರೋನ ಸವಾಲಿನ ಪರಿಸ್ಥಿತಿಗಳಲ್ಲಿ ಪರೀಕ್ಷೆ ಬರೆಯಲು ಮಕ್ಕಳನ್ನು ಸಿದ್ಧಗೊಳಿಸಿದ ತಮ್ಮೆಲ್ಲರ  ಕೊಡುಗೆಗೆ ಹಾಗೂ ರಾಜ್ಯ ಸರಕಾರದ ಮೇಲಿನ ತಮ್ಮ ವಿಶ್ವಾಸಕ್ಕೆ ನಾನು ಋಣಿ.

ಸುರಕ್ಷಿತವಾಗಿ ಮತ್ತು ಯಶಸ್ವಿಯಾಗಿ ಪರೀಕ್ಷೆಗಳು ನಡೆಯಲು ಕಾರಣಕರ್ತರಾದ ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಒಳಗೊಂಡಂತೆ ಎಲ್ಲಾ ಸಚಿವರಿಗೆ, ಅಧಿಕಾರಿ ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು ಎಂದು ಸಿಎಂ ಹೇಳಿದ್ದಾರೆ.

ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಅವಿರತ ಪ್ರಯತ್ನ ನಡೆಸಿ, ಇಡೀ ದೇಶ ಕರ್ನಾಟಕದತ್ತ ನೋಡುವಂತೆ ಮಾಡಿದೆ. ಕೊರೋನ ಸಾಂಕ್ರಾಮಿಕ ಇಡೀ ಜಗತ್ತನ್ನೇ ಬಾಧಿಸುತ್ತಿದ್ದು, ವಿಶ್ವದ ಬಹುತೇಕ ದೇಶಗಳು ಇದರಿಂದ ಬಾಧೆಗೆ ಒಳಗಾಗಿವೆ. ಭಾರತವೂ ಕೂಡ ಕಳೆದ ಕೆಲವು ತಿಂಗಳುಗಳಿಂದ ಕೊರೋನ ವಿರುದ್ಧ ಸಮರವನ್ನು ಸಾರಿದ್ದು, ದೇಶದ ನಾಗರಿಕರ ಸಹಕಾರಗಳಿಂದ, ವೈರಾಣು ನಿಯಂತ್ರಿಸಲು ನಿರ್ಣಾಯಕ ಹೋರಾಟ ನಡೆಸುತ್ತಿದೆ. ರಾಜ್ಯ ಸರಕಾರವೂ ಕೂಡ ಎಲ್ಲಾ ರೀತಿಯಲ್ಲಿ ಸಾಂಕ್ರಾಮಿಕ ನಿಯಂತ್ರಣಕ್ಕೆ ಪ್ರಯತ್ನ ನಡೆಸುತ್ತಲೇ ಇದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X