Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಬೂಲ್‌ನ ಗುರುದ್ವಾರದ ಮೇಲೆ ಆತ್ಮಾಹುತಿ...

ಕಾಬೂಲ್‌ನ ಗುರುದ್ವಾರದ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದು ಅಫ್ಘಾನ್ ಪ್ರಜೆ, ಕಾಸರಗೋಡಿನ ವ್ಯಕ್ತಿ ಅಲ್ಲ: ವರದಿ

ಡಿಎನ್‌ಎ ಪರೀಕ್ಷೆಯಿಂದ ಸತ್ಯ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ11 Aug 2020 10:33 PM IST
share
ಕಾಬೂಲ್‌ನ ಗುರುದ್ವಾರದ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದು ಅಫ್ಘಾನ್ ಪ್ರಜೆ, ಕಾಸರಗೋಡಿನ ವ್ಯಕ್ತಿ ಅಲ್ಲ: ವರದಿ

ಹೊಸದಿಲ್ಲಿ, ಆ. 10: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಗುರುದ್ವಾರದ ಮೇಲೆ ಮಾರ್ಚ್ 25ರಂದು ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಆತ್ಮಾಹುತಿ ಬಾಂಬರ್‌ಗಳಲ್ಲಿ ಓರ್ವ ಕೇರಳದ ಕಾಸರಗೋಡಿನ ವ್ಯಕ್ತಿ ಎಂದು ಶಂಕಿಸಲಾಗಿತ್ತು. ಆದರೆ, ಆತ ಕಾಸರಗೋಡಿನ ವ್ಯಕ್ತಿ ಅಲ್ಲ ಎಂದು ಈಗ ತಿಳಿದು ಬಂದಿದೆ ಎಂದು theprint.in ವರದಿ ಮಾಡಿದೆ.

ಕಾಸರಗೋಡಿನವನೆಂದು ಶಂಕಿಸಲಾದ 21 ವರ್ಷದ ಮುಹಮ್ಮದ್ ಮುಹ್ಸಿನ್ ಆಲಿಯಾಸ್ ಅಬು ಖಾಲಿದ್ ಅಲ್-ಹಿಂದಿಯ ಡಿಎನ್‌ಎ ಪರೀಕ್ಷೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಇದರಿಂದ ಆತ ಕಾಸರಗೋಡಿನ ವ್ಯಕ್ತಿ ಅಲ್ಲ. ಅಫ್ಘಾನಿಸ್ತಾನದ ಪ್ರಜೆ ಎಂಬುದು ದೃಢಪಟ್ಟಿದೆ ಎಂದು ಎಂದು theprint.in ಹೇಳಿದೆ.

ಭಾರತೀಯ ಬೇಹುಗಾರಿಕೆ ಸಂಸ್ಥೆ ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಆಗ ಕಳುಹಿಸಲಾದ ಮಾಹಿತಿಯಂತೆ ಆತ್ಮಾಹುತಿ ಬಾಂಬರ್ ಭಾರತೀಯ ಅಲ್ಲ ಎಂದು ವರದಿ ಹೇಳಿರುವುದಾಗಿ ಭದ್ರತಾ ಸಂಸ್ಥೆಯ ಮೂಲಗಳು theprint.inಗೆ ತಿಳಿಸಿದೆ. ಮಾರ್ಚ್ 25ರಂದು ಗುರುದ್ವಾರದಲ್ಲಿ ನೂರಾರು ಜನರು ಪ್ರಾರ್ಥನೆ ನಡೆಸುತ್ತಿದ್ದ ಸಂದರ್ಭ ಮೂವರು ಬಂದೂಕುಧಾರಿಗಳು ನುಗ್ಗಿ ಭಾರತೀಯ ಪ್ರಜೆಗಳು ಸೇರಿದಂತೆ 25 ಮಂದಿಯನ್ನು ಹತ್ಯೆಗೈದಿದ್ದರು. ಈ ದಾಳಿಯ ಹೊಣೆಯನ್ನು ಅಫಘಾನಿಸ್ಥಾನದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಐಸಿಸ್‌ನ ಘಟಕವಾದ ‘ದಿ ಐಸಿಸ್-ಖೋರಸಾನ್ ಪ್ರೊವಿನ್ಸ್’ (ಐಎಸ್‌ಕೆಪಿ) ಹೊತ್ತುಕೊಂಡಿತ್ತು.

ಇದಕ್ಕೆ ಸಂಬಂಧಿಸಿ ಐಸಿಸ್‌ಗೆ ಸಂಬಂಧಿಸಿದ ‘ಅಮಖ್’ ಸುದ್ದಿ ಸಂಸ್ಥೆ ‘56 ಅಸಾಲ್ಟ್ ರೈಫಲ್’ ಹಿಡಿದ ಯುವಕನೋರ್ವನ ಭಾವಚಿತ್ರವನ್ನು ಬಿಡುಗಡೆ ಮಾಡಿತ್ತು. ಈತ 2016ರಲ್ಲಿ ಇತರ 14 ಮಂದಿಯೊಂದಿಗೆ ಐಸಿಸ್‌ಗೆ ಸೇರಿದ್ದಾನೆಂದು ಹೇಳಲಾದ ಕಾಸರಗೋಡಿನ ನಿವಾಸಿ ಮುಹ್ಸಿನ್‌ನ ಭಾವಚಿತ್ರ ಎಂದು ತನಿಖಾ ಸಂಸ್ಥೆ ಸಂಶಯಿಸಿತ್ತು. ವಿದೇಶಿ ನೆಲದಲ್ಲಿ ಭಾರತೀಯರು ಮೃತಪಟ್ಟ ಹಾಗೂ ಓರ್ವ ಬಾಂಬರ್ ಭಾರತೀಯನೆಂದು ಶಂಕಿಸಿದ ಬಳಿಕ ಕಾಬೂಲ್ ದಾಳಿಯ ತನಿಖೆ ನಡೆಸಲು ಭಾರತದ ಎನ್‌ಐಎ ಗಡಿಯಾಚೆಗಿನ ಮೊದಲ ಪ್ರಕರಣ ದಾಖಲಿಸಿತ್ತು.

ಆದರೆ, ಈಗ ದಾಳಿ ನಡೆಸಿದ ಬಾಂಬರ್ ಭಾರತೀಯನಲ್ಲ, ಬದಲಾಗಿ ಅಫ್ಘಾನ್ ಪ್ರಜೆ ಎಂಬುದು ಡಿಎನ್‌ಎ ಪರೀಕ್ಷೆಯಿಂದ ದೃಢಪಟ್ಟಿದೆ. ಇದು ಎನ್‌ಐಎ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಈ ಬೆಳವಣಿಗೆ 29 ಮಂದಿಯ ಸಾವಿಗೆ ಕಾರಣವಾದ ಆಗಸ್ಟ್ 3ರಂದು ನಡೆದ ಜಲಾಲಾಬಾದ್ ಜೈಲಿನ ಮೇಲಿನ ದಾಳಿಯಲ್ಲಿ ಭಾಗಿಯಾದ ಬಾಂಬರ್‌ಗಳಲ್ಲಿ ಕೂಡ ಓರ್ವ ಕೇರಳದ ಕಾಸರಗೋಡಿನ ವ್ಯಕ್ತಿ ಇದ್ದಾನೆ ಎಂಬ ವದಂತಿ ಬಗ್ಗೆ ಪ್ರಶ್ನೆ ಹುಟ್ಟುವಂತೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X