Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸೆಸೆಲ್ಸಿಯಲ್ಲಿ ಸಮಾನ ಅಂಕಗಳನ್ನು ಪಡೆದ...

ಎಸೆಸೆಲ್ಸಿಯಲ್ಲಿ ಸಮಾನ ಅಂಕಗಳನ್ನು ಪಡೆದ ಅವಳಿ ಸಹೋದರಿಯರು

ವೈದ್ಯರಾಗುವ ಕನಸಿನಲ್ಲಿ ಸಬಾ ಮತ್ತು ಝೆಬಾ ಮುಲ್ಲಾ

ವಾರ್ತಾಭಾರತಿವಾರ್ತಾಭಾರತಿ12 Aug 2020 8:43 PM IST
share
ಎಸೆಸೆಲ್ಸಿಯಲ್ಲಿ ಸಮಾನ ಅಂಕಗಳನ್ನು ಪಡೆದ ಅವಳಿ ಸಹೋದರಿಯರು

ವಿಜಯಪುರ, ಆ.12: ಎಸೆಸೆಲ್ಸಿ ಪರೀಕ್ಷೆಗೆ ಅವಳಿ ಸಹೋದರಿಯರು ಹಾಜರಾಗುವುದು ಅಸಾಮಾನ್ಯವೇನಲ್ಲ, ಆದರೆ ಅವಳಿ ಸಹೋದರಿಯರು ಪರೀಕ್ಷೆಯಲ್ಲಿ ಒಂದೇ ರೀತಿಯ ಅಂಕಗಳನ್ನು ಪಡೆಯುವುದು ಅಪರೂಪ.

ಈ ಅಪರೂಪದ ಸಾಧನೆಯನ್ನು ಸಬಾ ಮತ್ತು ಝೆಬಾ ಮುಲ್ಲಾ ಸಾಧಿಸಿದ್ದಾರೆ. 625ರಲ್ಲಿ 620 ಅಂಕಗಳನ್ನು ಗಳಿಸುವ ಮೂಲಕ 99.2% ಫಲಿತಾಂಶವನ್ನು ಈ ಅವಳಿ ಸಹೋದರಿಯರು ಪಡೆದಿದ್ದಾರೆ.

ಜಿಲ್ಲೆಯ ಸರ್ಕಾರಿ ಶಾಲೆಯ ಬಾಬಾನಗರದಲ್ಲಿ ಹೆಡ್ ಮಾಸ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಲಿಯಾಖತ್ ಮುಲ್ಲಾ ಅವರ ಪುತ್ರಿಯರಾದ ಸಬಾ ಮತ್ತು ಝೆಬಾ ಮುಲ್ಲಾ ನಗರದ ಎಸ್‌ಇಸಿಎಬಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು. ಪ್ರತಿದಿನ ಸುಮಾರು 7-8 ಗಂಟೆಗಳ ಕಾಲ ಅಧ್ಯಯನ ಮತ್ತು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದೆವು ಎಂದು ಅವಳಿ ಸಹೋದರಿಯರು ತಿಳಿಸಿದ್ದಾರೆ.

"ನಾವು ಉತ್ತಮ ಅಂಕಗಳನ್ನು ಪಡೆಯುವ ವಿಶ್ವಾಸ ಇತ್ತು. ಆದರೆ ಪರೀಕ್ಷೆಯಲ್ಲಿ ನಾವು ಒಂದೇ ರೀತಿಯ ಅಂಕಗಳನ್ನು ಪಡೆಯುತ್ತೇವೆ ಎಂದು ಎಂದಿಗೂ ಯೋಚಿಸಿರಲಿಲ್ಲ. ಇದು ನಮಗೆ ತುಂಬಾ ಆಶ್ಚರ್ಯ ಉಂಟುಮಾಡಿದೆ” ಎಂದು ಸಬಾ ಹೇಳಿದರು. ಕುಟುಂಬಸ್ಥರು ಮತ್ತು ಶಿಕ್ಷಕರ ನಿರಂತರ ಬೆಂಬಲವು ಉತ್ತಮ ಅಂಕಗಳನ್ನು ಗಳಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದರು.

'ಲಾಕ್‌ಡೌನ್ ಕಾರಣ, ಬೇರೆ ಏನೂ ಮಾಡದ ಕಾರಣ ನಮಗೆ ಅಧ್ಯಯನ ಮಾಡಲು ಸಾಕಷ್ಟು ಸಮಯ ಸಿಕ್ಕಿತು. ನಾವು ನಮ್ಮ ಹೆಚ್ಚಿನ ಸಮಯವನ್ನು ಪರೀಕ್ಷೆಯ ತಯಾರಿಗಾಗಿ ಕಳೆದಿದ್ದೇವೆ. ಆದರೆ ಪಾಠದ ಬಗೆಗಿನ ನಮ್ಮ ಸಂಶಯಗಳನ್ನು ನಿವಾರಿಸಲು ಶಾಲೆಗೆ ಹೋಗಲು ಸಾಧ್ಯವಾಗದ ಕಾರಣ ನಾವು ತೊಂದರೆಗಳನ್ನು ಎದುರಿಸಿದೆವು. ಆದಾಗ್ಯೂ, ಪರೀಕ್ಷೆಗಳಿಗೆ ತಯಾರಿ ಮಾಡಲು ಶಿಕ್ಷಕರು ಆನ್‌ಲೈನ್ ತರಗತಿಗಳ ಮೂಲಕ ನಮಗೆ ಸಹಾಯ ಮಾಡಿದರು ಎಂದು ಸಬಾ ತಿಳಿಸಿದ್ದಾರೆ.

ಅವಳಿ ಸಹೋದರಿಯರು ಪಿಯುಸಿಯಲ್ಲಿ ವಿಜ್ಞಾನವನ್ನು ತೆಗೆದುಕೊಳ್ಳಲು ಮತ್ತು ಭವಿಷ್ಯದಲ್ಲಿ ವೈದ್ಯರಾಗಲು ಬಯಸಿದ್ದಾರೆ.

ಪುತ್ರಿಯರ ಸಾಧನೆ ಬಗ್ಗೆ ಅವರ ತಂದೆ ಲಿಯಾಖತ್ ಮುಲ್ಲಾ ಮಾತನಾಡಿದ್ದು, "ನನಗೆ ನಾಲ್ಕು ಮಕ್ಕಳಿದ್ದಾರೆ. ಅವರು ಉತ್ತಮ ಶಿಕ್ಷಣಕ್ಕಾಗಿ ನನ್ನ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದೇನೆ. ನನ್ನ ಅವಳಿ ಹೆಣ್ಣು ಮಕ್ಕಳು ಅವರ ಫಲಿತಾಂಶಗಳೊಂದಿಗೆ ನನಗೆ ಹೆಮ್ಮೆ ತಂದಿದ್ದಾರೆ. ಅವರ ಮುಂದಿನ ಅಧ್ಯಯನಗಳಲ್ಲಿ ಅವರು ಇದೇ ರೀತಿಯ ಸಾಧನೆ ಮಾಡುತ್ತಾರೆ ಎಂದು ನಾನು ಖಚಿತವಾಗಿ ಹೇಳುತ್ತೇನೆ. ಮಗ ಅಥವಾ ಮಗಳೇ ಆಗಿರಲಿ ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ತಮ್ಮ ಅಧ್ಯಯನದಲ್ಲಿ ಬೆಂಬಲಿಸಬೇಕೆಂದು ನಾನು ಬಯಸುತ್ತೇನೆ ”ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X