Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಚ್ಚಿನ ಚೇತರಿಕೆ ಪ್ರಮಾಣವಿದ್ದರೂ,...

ಹೆಚ್ಚಿನ ಚೇತರಿಕೆ ಪ್ರಮಾಣವಿದ್ದರೂ, ಅನಾರೋಗ್ಯ ಪೀಡಿತರ ಸಂಖ್ಯೆಯಲ್ಲೂ ಹೆಚ್ಚಳ: ವರದಿ

ಕೊರೋನ ವೈರಸ್

ವಾರ್ತಾಭಾರತಿವಾರ್ತಾಭಾರತಿ12 Aug 2020 10:48 PM IST
share
ಹೆಚ್ಚಿನ ಚೇತರಿಕೆ ಪ್ರಮಾಣವಿದ್ದರೂ, ಅನಾರೋಗ್ಯ ಪೀಡಿತರ ಸಂಖ್ಯೆಯಲ್ಲೂ ಹೆಚ್ಚಳ: ವರದಿ

ಹೊಸದಿಲ್ಲಿ, ಆ.12: ದೇಶದಲ್ಲಿ ಕೊರೋನ ವೈರಸ್ ಸೋಂಕಿತರ ಚೇತರಿಕೆ ಪ್ರಮಾಣ ಈಗ 70% ದಾಟಿದ್ದರೂ, ಪ್ರತೀ ದಿನದ ಸರಾಸರಿ ಗಮನಿಸಿದರೆ ಚೇತರಿಸಿಕೊಳ್ಳುವುದಕ್ಕಿಂತ ಹೆಚ್ಚಿನ ಜನ ಅನಾರೋಗ್ಯಕ್ಕೊಳಗಾಗುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶ ತಿಳಿಸಿದೆ.

ಮಂಗಳವಾರದವರೆಗಿನ ಅಂಕಿಅಂಶದ ಪ್ರಕಾರ, ದೇಶದಲ್ಲಿ ಇದುವರೆಗೆ ಕೊರೋನ ಸೋಂಕಿಗೆ ಒಳಗಾದ 23.29 ಲಕ್ಷ ಜನರಲ್ಲಿ 70.38% ಜನ ಚೇತರಿಸಿಕೊಂಡಿದ್ದಾರೆ. ಸುಮಾರು 27.64% ಜನ ಇನ್ನೂ ಅನಾರೋಗ್ಯಪೀಡಿತರಾಗಿದ್ದರೆ ಉಳಿದ 1.98% ಜನ ಮೃತಪಟ್ಟಿದ್ದಾರೆ. ಚೇತರಿಕೆ ಪ್ರಮಾಣದಲ್ಲಿ ನಿಯಮಿತ ಹೆಚ್ಚಳವಾಗುವುದರಲ್ಲಿ ವಿಶೇಷ ಏನಿಲ್ಲ. ಈ ಸೋಂಕು ರೋಗದ ಪ್ರಭಾವ ಅಂತ್ಯವಾಗುವ ವೇಳೆಗೆ ಸಾವಿನ ಪ್ರಮಾಣ 1%ಕ್ಕಿಂತಲೂ ಕಡಿಮೆಯಾಗುವುದರಿಂದ ಚೇತರಿಕೆ ಪ್ರಮಾಣ 99%ಕ್ಕಿಂತಲೂ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಂತವನ್ನು ಯಾವಾಗ ತಲುಪಬಹುದು ಎಂಬುದು ಸೋಂಕಿತರ ಮತ್ತು ಚೇತರಿಸಿಕೊಂಡವರ ಕುರಿತ ದೈನಂದಿನ ಅಂಕಿಅಂಶಗಳಿಂದ ತಿಳಿದು ಬರುತ್ತದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

 ದೈನಂದಿನ ಚೇತರಿಕೆ ಪ್ರಮಾಣ ದೈನಂದಿನ ಸೋಂಕಿನ ಪ್ರಮಾಣವನ್ನು ಮೀರಿದರೆ ಮತ್ತು ಈ ಪ್ರಕ್ರಿಯೆ ಕನಿಷ್ಟ ಎರಡು ವಾರ ಮುಂದುವರಿದರೆ, ಅದು ಸೋಂಕು ಹರಡುವಿಕೆ ಪ್ರಮಾಣ ಶೀಘ್ರದಲ್ಲೇ ಇಳಿಮುಖವಾಗುವ ಲಕ್ಷಣವಾಗಿದೆ. ಯಾಕೆಂದರೆ, ಹೀಗಾದರೆ ಪ್ರತೀ ದಿನದ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತದೆ. ಪ್ರಸ್ತುತ ದಿಲ್ಲಿಯಲ್ಲಿ ಮಾತ್ರ ಈ ಹಂತವನ್ನು ತಲುಪಲಾಗಿದೆ. ಆದರೆ ಇಲ್ಲಿಯೂ ಸೋಂಕು ಪ್ರಮಾಣ ನಿರಂತರ ಇಳಿಕೆಯಾಗುತ್ತಿಲ್ಲ. ಜುಲೈ ತಿಂಗಳಲ್ಲಿ ಕೆಲವು ದಿನ ದೈನಂದಿನ ಚೇತರಿಕೆ ಪ್ರಮಾಣವು ಸೋಂಕಿನ ಪ್ರಮಾಣವನ್ನು ಮೀರಿದರೆ, ಕೆಲವು ದಿನ ಸೋಂಕಿನ ಪ್ರಮಾಣ ಹೆಚ್ಚಿದೆ. ದಿಲ್ಲಿಯಲ್ಲಿ ಚೇತರಿಕೆ ಪ್ರಮಾಣ ಸುಮಾರು 90% ಆಗಿದ್ದು, ಇದು ದೇಶದಲ್ಲೇ ಅತ್ಯಧಿಕ ಪ್ರಮಾಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X