Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಹತ್ ಇಂದೋರಿ ಕೆಲವು ಝಲಕ್‌ಗಳು

ರಾಹತ್ ಇಂದೋರಿ ಕೆಲವು ಝಲಕ್‌ಗಳು

ಹಾಜಿರಾಹಾಜಿರಾ13 Aug 2020 12:10 AM IST
share
ರಾಹತ್ ಇಂದೋರಿ ಕೆಲವು ಝಲಕ್‌ಗಳು

ಖ್ಯಾತ ಉರ್ದು ಕವಿ ರಾಹತ್ ಇಂದೋರಿ ಮಂಗಳವಾರ(ಆ.11) ನಿಧನರಾಗಿದ್ದಾರೆ. ಅವರ ಪದ್ಯಗಳ ಕೆಲವು ಝಲಕ್ ಇಲ್ಲಿವೆ.

ಇಂದು ಗದ್ದುಗೆಯಲ್ಲಿರುವವರು ನಾಳೆ ಇರಲಾರರು,
ಬಾಡಿಗೆದಾರರೇ ಎಲ್ಲರೂ, ಯಾರೂ ಮನೆ ಮಾಲಕರಲ್ಲವಲ್ಲ !
****

ಎಲ್ಲರ ರಕ್ತ ಬೆರೆತಿದೆ ಇಲ್ಲಿನ ಮಣ್ಣಿನಲಿ ಭಾರತವೆಂಬುದು ಯಾರಪ್ಪನ ಸೊತ್ತೂ ಅಲ್ಲವಲ್ಲ

****

ಬಿರುಗಾಳಿಗಳ ಮುಂದೆ ಸೆಟೆದು ನಿಲ್ಲಿರಿ, ಪ್ರವಾಹಗಳ ಮೇಲೆ ಪ್ರಹಾರ ಮಾಡಿರಿ,
ಅಂಬಿಗರನ್ನು ಓಲೈಸುವ ಉಸಾಬರಿ ಬೇಡ,
ಈಜಾಡಿಯೇ ನದಿ ದಾಟಿ ದಡ ಸೇರಿರಿ.

****

ಹೂವುಗಳಂಗಡಿ ತೆರೆಯಿರಿ, ಸುಗಂಧದ ವ್ಯಾಪಾರ ನಡೆಸಿರಿ
ಪ್ರೀತಿಸುವುದು ತಪ್ಪಾದರೆ ನೂರುಬಾರಿ ಅದೇ ತಪ್ಪು ಮಾಡಿರಿ

****

ತುರ್ತು ಪರಿಸ್ಥಿತಿಯ ಕಾಲದಲ್ಲಿ ನಾನು ಸರಕಾರ ಭ್ರಷ್ಟವಾಗಿದೆ ಎಂದೆ. ಮರುದಿನ ಪೊಲೀಸ್ ಠಾಣೆಯಿಂದ ಬುಲಾವ್ ಬಂತು. ಅಲ್ಲಿ ಠಾಣಾಧಿಕಾರಿಯ ಮುಂದೆ ಹಾಜರಾಗಿ ನಾನು ಸರಕಾರ ಭ್ರಷ್ಟ ಎಂದು ಮಾತ್ರ ಹೇಳಿದ್ದೇನೆ. ಯಾವ ಸರಕಾರ ಎಂದು ಹೇಳಿಲ್ಲ. ಅದು ಪಾಕಿಸ್ತಾನ ಅಥವಾ ಅಮೆರಿಕ ಸರಕಾರವೂ ಆಗಿರಬಹುದು ಎಂದೆ. ಅದಕ್ಕೆ ನಕ್ಕ ಆ ಠಾಣಾಧಿಕಾರಿ ಹೇಳಿದ. ನೀವು ನಮ್ಮನ್ನು ಮೂರ್ಖರೆಂದು ತಿಳಿದಿದ್ದೀರಾ? ಎಲ್ಲಿಯ ಸರಕಾರ ಭ್ರಷ್ಟವಾಗಿದೆ ಎಂದು ನಮಗೆ ಗೊತ್ತಿಲ್ಲವೇ?

****

ವಿರೋಧ ಇದ್ದರೆ ಇರಲಿ ಬಿಡಿ, ಅದೇನು ಜೀವ ಅಲ್ಲ
ಇದೆಲ್ಲ ಹೊಗೆ ಮಾತ್ರ, ಆಕಾಶವೇನೂ ಅಲ್ಲ
ಇಲ್ಲಿ ಬೆಂಕಿ ಬಿದ್ದರೆ ಎಲ್ಲರ ಮನೆಗಳೂ ಸುಡಲಿವೆ
ಇಲ್ಲಿ ನಮ್ಮ ಮನೆ ಮಾತ್ರ ಇರುವುದಲ್ಲ
ನನಗೆ ಗೊತ್ತು, ಶತ್ರುಗಳೇನು ಕಮ್ಮಿ ಇಲ್ಲ
ಆದರೆ ನಮ್ಮ ಹಾಗೆ ಅವರು ಅಂಗೈಯಲ್ಲಿ
ಜೀವ ಇಟ್ಟುಕೊಂಡಿಲ್ಲ

****

ನಮ್ಮ ಬಾಯಿಂದ ಹೊರಟಿದ್ದೇ ಸತ್ಯ
ನಮ್ಮ ಬಾಯಲ್ಲಿ ನಿಮ್ಮ ನಾಲಗೆ ಇಲ್ಲ

****

ಈ ನಕ್ಷತ್ರಗಳಿಗೆ ಹಾಗೇ ಸ್ವಲ್ಪ ನಿದ್ರೆ ಬರಲಿ ಎಂದು ಕಾಯುತ್ತಿದ್ದೇನೆ

ಸುಮ್ಮನೆ ಸನ್ನೆಯಲ್ಲೇ ಚಂದ್ರನನ್ನು ಮಾಳಿಗೆಗೆ ಕರೆಸಿಕೊಳ್ಳುತ್ತೇನೆ

****

ನನ್ನ ಆರೋಗ್ಯ ಕೆಟ್ಟಿದೆ ಎಂಬ ವದಂತಿ ಹಬ್ಬಿತ್ತು ಎಲ್ಲೆಡೆ ಹೇಗಿದ್ದೀರಿ? ಎಂದು ಕೇಳಿ ಕೇಳಿ ಜನರು ನನ್ನನ್ನು ರೋಗಿಯಾಗಿಸಿಬಿಟ್ಟರು ಕೇವಲ ಎರಡು ಗಜವಾದರೇನಂತೆ, ಓ ಮರಣವೇ! ನನ್ನ ಗೋರಿಗೆ ನಾನು ಮಾಲಕನಲ್ಲವೇ? ನೀನು ಬಂದು ನನ್ನನ್ನು ಜಮೀನುದಾರನಾಗಿಸಿ ಬಿಟ್ಟೆಯಲ್ಲವೇ?

****

ಕಳ್ಳ ಕಾಕರನ್ನು ಗೌರವಿಸಲು ಕಲಿಯಿರಿ ಯಾರು ಯಾವಾಗ ಸಚಿವರಾಗುವರೋ, ಯಾರು ಬಲ್ಲರು?

****

ಒಂದಿಲ್ಲೊಂದು ದಿನ ಮನದ ಲೋಕವನ್ನು ಸರ್ವನಾಶ ಮಾಡುವೆನು ನಾನು ಸುಟ್ಟುಬಿಡಲಾಗದೆನ್ನಲು ಇದೇನು ನಿನ್ನ ಪ್ರೇಮ ಪತ್ರವಲ್ಲ ತಾನೇ? 

share
ಹಾಜಿರಾ
ಹಾಜಿರಾ
Next Story
X