Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.70ನ್ನು ದಾಟಿದ ಭಾರತದ ಕೋವಿಡ್...

ಶೇ.70ನ್ನು ದಾಟಿದ ಭಾರತದ ಕೋವಿಡ್ ಚೇತರಿಕೆ ದರ

ಬುಧವಾರ ಒಂದೇ ದಿನ ದಾಖಲೆಯ 56,110 ರೋಗಿಗಳು ಗುಣಮುಖ

ವಾರ್ತಾಭಾರತಿವಾರ್ತಾಭಾರತಿ12 Aug 2020 10:55 PM IST
share
ಶೇ.70ನ್ನು ದಾಟಿದ ಭಾರತದ ಕೋವಿಡ್ ಚೇತರಿಕೆ ದರ

ಹೊಸದಿಲ್ಲಿ,ಆ.12: ದೇಶದಲ್ಲಿ ಕೋವಿಡ್-19 ಚೇತರಿಕೆ ದರವು ಬುಧವಾರ ಶೇ.70ನ್ನು ದಾಟಿದ್ದು,ಈವರೆಗೆ ಒಟ್ಟು 16,39,599 ರೋಗಿಗಳು ಗುಣಮುಖರಾಗಿದ್ದಾರೆ. ಒಟ್ಟು ಪ್ರಕರಣಗಳ ಪೈಕಿ ಕೇವಲ ಶೇ.27.64ರಷ್ಟು ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಇಂದು ತಿಳಿಸಿದೆ. ಕೋವಿಡ್ ಸಾವುಗಳ ಪ್ರಮಾಣ ಇನ್ನಷ್ಟು ಕಡಿಮೆಯಾಗಿದ್ದು,ದರವು ಶೇ.1.98ಕ್ಕೆ ಇಳಿದಿದೆ ಎಂದೂ ಅದು ಹೇಳಿದೆ.

ಪರಿಣಾಮಕಾರಿ ನಿಯಂತ್ರಣ ಕಾರ್ಯತಂತ್ರ ಮತ್ತು ಆಕ್ರಮಣಕಾರಿ ಮತ್ತು ಸಮಗ್ರ ಪರೀಕ್ಷಾ ವ್ಯವಸ್ಥೆಯ ಯಶಸ್ವಿ ಅನುಷ್ಠಾನದ ಜೊತೆಗೆ ಗಂಭೀರ ರೋಗಿಗಳ ಪ್ರಮಾಣಿತ ಕ್ಲಿನಿಕಲ್ ನಿರ್ವಹಣೆಯಿಂದಾಗಿ ಒಂದು ದಿನದಲ್ಲಿ ದಾಖಲೆಯ 56,110 ರೋಗಿಗಳ ಚೇತರಿಕೆಯು ಸಾಧ್ಯವಾಗಿದೆ ಎಂದು ಸಚಿವಾಲಯವು ತಿಳಿಸಿದೆ.

ಕೇಂದ್ರ,ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರಕಾರಗಳ ಸಂಘಟಿತ ಪ್ರಯತ್ನಗಳಿಂದಾಗಿ ದೈನಂದಿನ ಚೇತರಿಕೆ ಪ್ರಮಾಣವನ್ನು ನಿರಂತರವಾಗಿ ಹೆಚ್ಚಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿರುವ ಅದು,ಜುಲೈ ಮೊದಲ ವಾರದಲ್ಲಿ ಪ್ರತಿದಿನ ಸರಾಸರಿ 15,000 ರೋಗಿಗಳು ಗುಣಮುಖರಾಗುತ್ತಿದ್ದು,ಆಗಸ್ಟ್ ಮೊದಲ ವಾರದ ವೇಳೆಗೆ ಇದು 50,000 ದಾಟಿತ್ತು. ಈವರೆಗೆ ಗುಣಮುಖರಾಗಿರುವ ರೋಗಿಗಳ ಸಂಖ್ಯೆ 16 ಲ. ದಾಟಿದ್ದು,ಚೇತರಿಕೆ ದರವು ಶೇ.70.38ರ ಹೊಸ ಎತ್ತರಕ್ಕೇರಿದೆ. ಸದ್ಯ ದೇಶದಲ್ಲಿ 6,43,948 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದೆ.

ಮಂಗಳವಾರ 24 ಗಂಟೆಗಳಲ್ಲಿ 7,33,449 ಪರೀಕ್ಷೆಗಳನ್ನು ನಡೆಸುವುದರೊಂದಿಗೆ ಭಾರತದ ‘ಪರೀಕ್ಷೆ,ಅನುಸರಣೆ,ಚಿಕಿತ್ಸೆ ’ಕಾರ್ಯತಂತ್ರವು ಹೊಸ ಎತ್ತರವನ್ನು ಸಾಧಿಸಿದ್ದು,ಕೊರೋನ ವೈರಸ್ ಪರೀಕ್ಷೆಗಳ ಒಟ್ಟು ಸಂಖ್ಯೆ 2.5 ಕೋ.ದಾಟಿದೆ. ಪ್ರತಿ ಹತ್ತು ಲಕ್ಷ ಜನರಲ್ಲಿ ಪರೀಕ್ಷಾ ಪ್ರಮಾಣವು 18,852ಕ್ಕೇರಿದೆ ಎಂದೂ ಸಚಿವಾಲಯವು ಹೇಳಿದೆ.

 ಭಾರತದಲ್ಲಿ ಕೊರೋನ ವೈರಸ್ ಪ್ರಕರಣಗಳ ಸಂಖ್ಯೆ 23 ಲ.ದಾಟಿದ್ದು,ಬುಧವಾರ ಬೆಳಿಗ್ಗೆ ಎಂಟು ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ 60,963 ಹೊಸ ಪ್ರಕರಣಗಳು ವರದಿಯಾಗಿವೆ. ಈ ಅವಧಿಯಲ್ಲಿ 834 ಜನರು ಸಾವನ್ನಪ್ಪಿದ್ದು,ಒಟ್ಟು ಸಾವುಗಳ ಸಂಖ್ಯೆ 46,091ಕ್ಕೇರಿದೆ.

                            

share
ವಾರ್ತಾಭಾರತಿ
ವಾರ್ತಾಭಾರತಿ
Next Story
X