ಮಂಗಳೂರು, ಆ.12: ಬೆಂಗಳೂರಿನ ದೇವರ ಜೀವನ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೈದು ವಾಹನ ಜಖಂ ಮಾಡಿರುವ ಕೃತ್ಯ ಖಂಡನೀಯ. ಘಟನೆ ಸಂಬಂಧಿಸಿ ಹಲ್ಲೆಗೈದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.