Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್-ಯುಎಇ ಒಪ್ಪಂದ ಫೆಲೆಸ್ತೀನ್...

ಇಸ್ರೇಲ್-ಯುಎಇ ಒಪ್ಪಂದ ಫೆಲೆಸ್ತೀನ್ ಜನರಿಗೆ ಮಾಡಿದ ‘ವಿಶ್ವಾಸದ್ರೋಹ’

ಫೆಲೆಸ್ತೀನ್ ನಾಯಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ14 Aug 2020 9:19 PM IST
share
ಇಸ್ರೇಲ್-ಯುಎಇ ಒಪ್ಪಂದ ಫೆಲೆಸ್ತೀನ್ ಜನರಿಗೆ ಮಾಡಿದ ‘ವಿಶ್ವಾಸದ್ರೋಹ’

ರಮಲ್ಲಾ (ಫೆಲೆಸ್ತೀನ್), ಆ. 14: ಅಮೆರಿಕದ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಯುಎಇ ನಡುವೆ ಗುರುವಾರ ಏರ್ಪಟ್ಟಿರುವ ಶಾಂತಿ ಒಪ್ಪಂದಕ್ಕೆ ಫೆಲೆಸ್ತೀನ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಹಾಗೂ ಒಪ್ಪಂದವನ್ನು ತಕ್ಷಣ ರದ್ದುಗೊಳಿಸುವಂತೆ ಅವರು ಒತ್ತಾಯಿಸಿದ್ದಾರೆ.

ಗುರುವಾರ ತಡರಾತ್ರಿ ಸಚಿವ ಸಂಪುಟದ ಸದಸ್ಯರ ತುರ್ತು ಸಭೆ ನಡೆಸಿದ ಬಳಿಕ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಫೆಲೆಸ್ತೀನ್ ಅಧ್ಯಕ್ಷ ಮಹ್ಮೂದ್ ಅಬ್ಬಾಸ್, ಯುಎಇಯು ಫೆಲೆಸ್ತೀನ್ ಜನರಿಗೆ ವಿಶ್ವಾಸದ್ರೋಹ ಮಾಡಿದೆ ಎಂದು ಹೇಳಿದ್ದಾರೆ.

ಫೆಲೆಸ್ತೀನ್ ಭೂಭಾಗಗಳ ಮೇಲಿನ ಆಕ್ರಮಣವನ್ನು ಇಸ್ರೇಲ್ ಕೊನೆಗೊಳಿಸಿದ ಬಳಿಕ ಹಾಗೂ ಸ್ವತಂತ್ರ ಫೆಲೆಸ್ತೀನ್ ದೇಶ ಸ್ಥಾಪನೆಯಾದ ಬಳಿಕ ಇಸ್ರೇಲ್ ಜೊತೆಗಿನ ಅರಬ್ ಜಗತ್ತಿನ ಸಂಬಂಧ ಸಾಮಾನ್ಯ ಸ್ಥಿತಿಗೆ ಮರಳಬಹುದು ಎಂಬ ಶರತ್ತನ್ನು ಅರಬ್ ದೇಶಗಳು ಇಸ್ರೇಲ್‌ಗೆ ಒಡ್ಡುವಂತೆ ಮಾಡುವಲ್ಲಿ ಫೆಲೆಸ್ತೀನೀಯರು ದಶಕಗಳಿಂದ ಯಶಸ್ವಿಯಾಗಿದ್ದರು.

ಆದರೆ, ಈಗ ಯುಎಇಯ ಮಾದರಿಯನ್ನು ಇತರ ಅರಬ್ ದೇಶಗಳೂ ಅನುಸರಿಸಿದರೆ, ಇಸ್ರೇಲ್ ಮೇಲೆ ತಾವು ಹೊಂದಿದ್ದ ರಾಜತಾಂತ್ರಿಕ ಮೇಲುಗೈ ಕಳೆದುಹೋಗಬಹುದು ಎಂಬ ಆತಂಕವನ್ನು ಫೆಲೆಸ್ತೀನೀಯರು ಹೊಂದಿದ್ದಾರೆ.

ಯುಎಇ ಜೊತೆಗೆ ಏರ್ಪಟ್ಟ ಒಪ್ಪಂದದ ಭಾಗವಾಗಿ, ಫೆಲೆಸ್ತೀನ್‌ಗೆ ಸೇರಿದ ಪಶ್ಚಿಮ ದಂಡೆಯನ್ನು ಇಸ್ರೇಲ್‌ಗೆ ಸೇರಿಸಿಕೊಳ್ಳುವ ತನ್ನ ಯೋಜನೆಯನ್ನು ಕೈಬಿಡಲು ಇಸ್ರೇಲ್ ಒಪ್ಪಿಕೊಂಡಿದೆ.

ಈ ಪ್ರದೇಶವನ್ನು ತನ್ನೊಳಗೆ ಸೇರಿಸಿಕೊಳ್ಳುವ ಪ್ರಯತ್ನಗಳನ್ನು ಇಸ್ರೇಲ್ ನಿಲ್ಲಿಸಬೇಕು ಎನ್ನುವುದು ಫೆಲೆಸ್ತೀನ್‌ನ ಬೇಡಿಕೆಯಾಗಿದ್ದರೂ, ಇದಕ್ಕಾಗಿ ಯುಎಇ ಇಸ್ರೇಲ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕಾದ ಅಗತ್ಯವಿರಲಿಲ್ಲ ಎಂದು ಫೆಲೆಸ್ತೀನೀಯರು ವಾದಿಸುತ್ತಾರೆ. ಯಾಕೆಂದರೆ, ಮೊದಲಿಗೆ, ಫೆಲೆಸ್ತೀನ್‌ಗೆ ಸೇರಿದ ಭೂಭಾಗಗಳನ್ನು ಇಸ್ರೇಲ್ ಆಕ್ರಮಿಸಿಕೊಂಡಿದ್ದೇ ತಪ್ಪು ಹಾಗೂ ಅದಕ್ಕಾಗಿ ಇಸ್ರೇಲ್‌ಗೆ ಯುಎಇ ‘ತಪ್ಪು ಕಾಣಿಕೆ’ ನೀಡುವ ಅಗತ್ಯವಿರಲಿಲ್ಲ ಎಂದು ಅವರು ಹೇಳುತ್ತಾರೆ.

ಯುಎಇ ಮತ್ತು ಫೆಲೆಸ್ತೀನ್ ನಾಯಕರ ನಡುವಿನ ಸಂಬಂಧವು ಹಲವಾರು ವರ್ಷಗಳಿಂದ ಹಳಸಿತ್ತು. ಫೆಲೆಸ್ತೀನ್ ಅಧ್ಯಕ್ಷ ಅಬ್ಬಾಸ್‌ರ ಪ್ರಧಾನ ರಾಜಕೀಯ ಎದುರಾಳಿ ಹಾಗೂ ಫೆಲೆಸ್ತೀನ್‌ನ ಮಾಜಿ ಸಚಿವ ಮುಹಮ್ಮದ್ ದಹ್ಲಾನ್‌ರಿಗೆ ಯುಎಇ ಬೆಂಬಲ ನೀಡುತ್ತಿದೆ. ಅವರು ಈಗ ಯುಎಇ ರಾಜಧಾನಿ ಅಬುಧಾಬಿಯಲ್ಲಿ ಯುಎಇ ಯುವರಾಜ ಮುಹಮ್ಮದ್ ಬಿನ್ ಝಯೀದ್‌ರ ಹಿರಿಯ ಸಹಾಯಕರಾಗಿದ್ದಾರೆ.

ಈಜಿಪ್ಟ್ ಮತ್ತು ಜೋರ್ಡಾನ್ ಬಳಿಕ, ಇಸ್ರೇಲ್‌ನೊಂದಿಗೆ ಸಂಪೂರ್ಣ ರಾಜತಾಂತ್ರಿಕ ಸಂಬಂಧಗಳನ್ನು ಹೊಂದಿದ ಮೂರನೇ ಅರಬ್ ದೇಶ ಯುಎಇ ಆಗಿದೆ.

ಇರಾನ್, ಟರ್ಕಿ ಖಂಡನೆ

ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಡುವಿನ ಶಾಂತಿ ಒಪ್ಪಂದವನ್ನು ಇರಾನ್ ಮತ್ತು ಟರ್ಕಿ ಶುಕ್ರವಾರ ತೀವ್ರವಾಗಿ ಖಂಡಿಸಿವೆ.

ಈ ಒಪ್ಪಂದವು ಎಲ್ಲ ಮುಸ್ಲಿಮರ ಬೆನ್ನಿಗೆ ಹಾಕಿದ ಚೂರಿಯಾಗಿದೆ ಎಂದು ಇರಾನ್ ಬಣ್ಣಿಸಿದೆ. ಈ ಒಪ್ಪಂದವು ಯುಎಇಯ ‘ರಕ್ಷಣಾ ತಂತ್ರಗಾರಿಕೆಯಲ್ಲಿನ ಮೂರ್ಖತನ’ವನ್ನು ಬಹಿರಂಗಪಡಿಸಿದೆ ಎಂದು ಅದು ಹೇಳಿದೆ. ಇದು ವಲಯದ ಪ್ರತಿರೋಧವನ್ನು ನಿಸ್ಸಂಶಯವಾಗಿ ಮತ್ತಷ್ಟು ಬಲಪಡಿಸುತ್ತದೆ ಎಂದಿದೆ.

ಫೆಲೆಸ್ತೀನ್ ಆಡಳಿತಕ್ಕೆ ಬೆಂಬಲ ನೀಡಿ ಟರ್ಕಿ ವಿದೇಶ ಸಚಿವಾಲಯವು ಹೇಳಿಕೆಯೊಂದನ್ನು ಹೊರಡಿಸಿದೆ. ವಲಯದ ಜನರ ಇತಿಹಾಸ ಮತ್ತು ಆತ್ಮಸಾಕ್ಷಿಯು, ಯುನೈಟೆಡ್ ಅರಬ್ ಎಮಿರೇಟ್ಸ್‌ನ ‘ಆಷಾಢಭೂತಿತನದ ವರ್ತನೆ’ಯನ್ನು ಎಂದೂ ಮರೆಯುವುದಿಲ್ಲ ಮತ್ತು ಕ್ಷಮಿಸುವುದಿಲ್ಲ ಎಂದು ಅದು ಹೇಳಿದೆ.

‘‘ತನ್ನ ಕ್ಷುಲ್ಲಕ ಹಿತಾಸಕ್ತಿಗಳನ್ನು ಈಡೇರಿಸಿಕೊಳ್ಳುವುದಕ್ಕಾಗಿ ಫೆಲೆಸ್ತೀನ್ ಹೋರಾಟಕ್ಕೆ ಹೊಡೆತ ನೀಡಿರುವ ಯುಎಇ, ಇದನ್ನು ಫೆಲೆಸ್ತೀನೀಯರಿಗಾಗಿ ತಾನು ಮಾಡಿರುವ ತ್ಯಾಗ ಎಂಬುದಾಗಿ ಬಿಂಬಿಸಿಕೊಳ್ಳುತ್ತಿದೆ’’ ಎಂದು ಟರ್ಕಿ ವಿದೇಶ ಸಚಿವಾಲಯವು ಹೇಳಿಕೆಯೊಂದರಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X