ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣದ ಆರೋಪಿಯ ತಂದೆ ಹೃದಯಾಘಾತದಿಂದ ಸಾವು
ಬೆಂಗಳೂರು, ಆ.14: ನಗರದ ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ತನ್ನ ಮಗ ಬಂಧಿತನಾಗಿರುವ ಸುದ್ದಿ ತಿಳಿದು ಆತನ ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಡಿಜೆ ಹಳ್ಳಿಯ ಕುಬ್ಬ ಮಸೀದಿ ರಸ್ತೆಯಲ್ಲಿ ನಡೆದಿದೆ.
ಫರ್ಹಾನ್ ಹಿಂಸಾಚಾರ ಪ್ರಕರಣ ಸಂಬಂಧ ಪೊಲೀಸರ ವಶದಲ್ಲಿದ್ದು, ಘಟನೆ ಸಂಬಂಧ ಗುರುವಾರ ಮಧ್ಯಾಹ್ನ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆತನ ತಂದೆ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಿ ಮಾನವೀಯತೆ ಮೆರೆದಿದ್ದಾರೆ. ತಂದೆಯ ಅಂತ್ಯ ಸಂಸ್ಕಾರಕ್ಕೆ ತೆರಳಲು ಆರೋಪಿ ಫರ್ಹಾನ್ಗೆ ಅವಕಾಶ ಕಲ್ಪಿಸಿದ್ದಾರೆ.
Next Story