Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಪೆಕ್ಟ್ರಂ ಬಳಸುವ ನೀವು ಎಜಿಆರ್ ಬಾಕಿ...

ಸ್ಪೆಕ್ಟ್ರಂ ಬಳಸುವ ನೀವು ಎಜಿಆರ್ ಬಾಕಿ ಉಳಿಸಿಕೊಂಡದ್ದೇಕೆ: ಜಿಯೋಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ15 Aug 2020 3:25 PM IST
share
ಸ್ಪೆಕ್ಟ್ರಂ ಬಳಸುವ ನೀವು ಎಜಿಆರ್ ಬಾಕಿ ಉಳಿಸಿಕೊಂಡದ್ದೇಕೆ: ಜಿಯೋಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ:  ರಿಲಯನ್ಸ್ ಕಮ್ಯುನಿಕೇಶನ್ಸ್‍ನ ಸ್ಪೆಕ್ಟ್ರಂ ಅನ್ನು  ರಿಲಯನ್ಸ್ ಜಿಯೋ 2016ರಿಂದ ಬಳಸುತ್ತಿದೆಯೆಂದಾದಲ್ಲಿ ಆ ಸಂಸ್ಥೆಯ ಎಜಿಆರ್ ಬಾಕಿಯನ್ನು ರಿಲಯನ್ಸ್ ಜಿಯೋ ಪಾವತಿಸಬೇಕೆಂದು  ಜಸ್ಟಿಸ್ ಅರುಣ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್‍ನ ತ್ರಿಸದಸ್ಯ ಪೀಠ ಶುಕ್ರವಾರ ಹೇಳಿದೆ.

"ರಿಲಯನ್ಸ್ ಕಮ್ಯುನಿಕೇಶನ್ಸ್‍ನ ಸ್ಪೆಕ್ಟ್ರಂ ಅನ್ನು ರಿಲಯನ್ಸ್ ಜಿಯೋ ಬಳಸುತ್ತಿದೆಯೇ? ಹಾಗಾದರೆ ಯಾವಾಗಿನಿಂದ?'' ಎಂದು ಪೀಠ ರಿಲಯನ್ಸ್ ಕಮ್ಯುನಿಕೇಶನ್ಸ್‍ನ ವಕೀಲ ಶ್ಯಾಮ್ ದಿವಾನ್ ಅವರನ್ನು ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿದ ಅವರು ಸ್ಪೆಕ್ಟ್ರಂನ ಒಂದು ಭಾಗ ಬಳಕೆಯಾಗದೆ ಬಾಕಿಯಾಗಿದ್ದರೆ ಇನ್ನೊಂದು ಭಾಗವನ್ನು 2016ರ ಒಪ್ಪಂದದಂತೆ ರಿಲಯನ್ಸ್ ಜಿಯೋ ಜತೆಗೆ  ಶೇರ್ ಮಾಡಲಾಗಿದೆ ಎಂದು ಹೇಳಿದರು.

"ಹೀಗಿರುವಾಗ ಎಜಿಆರ್ ಬಾಕಿಗಳನ್ನು ಪಾವತಿಸುವ ಬಾಧ್ಯತೆಯನ್ನು ಹೇಗೆ ತಪ್ಪಿಸಿಕೊಳ್ಳುತ್ತೀರಿ. ನಿಮ್ಮನ್ನು ಹಿಡಿದು ಪಾವತಿಸುವಂತೆ ಮಾಡುತ್ತೇವೆ. ಸ್ಪೆಕ್ಟ್ರಂ ಬಳಸುವವರು ಹಣ ಪಾವತಿಸಬೇಕು,'' ಎಂದು ನ್ಯಾಯಾಲಯ ಹೇಳಿದೆ.

ಈ ಸಂದರ್ಭ ಹಾಜರಿದ್ದ ರಿಲಯನ್ಸ್ ಜಿಯೋ ವಕೀಲರಾದ ಕೆ ವಿ ವಿಶ್ವನಾಥನ್ ತಮ್ಮ ವಾದ ಮಂಡಿಸುತ್ತಾ "ಸ್ಪೆಕ್ಟ್ರಂ ಟ್ರೇಡಿಂಗ್ ಮತ್ತು ಶೇರಿಂಗ್ ಎರಡೂ ಭಿನ್ನವಾಗಿದ್ದು ಶೇರಿಂಗ್ ಮಾಡಿದಾಗ ಸ್ಪೆಕ್ಟ್ರಂ ಬಳಕೆ ಶುಲ್ಕ ಮಾತ್ರ ಪಾವತಿಸಬೇಕಿದೆ,'' ಎಂದರು.

ರಿಲಯನ್ಸ್ ಜಿಯೋ ತನ್ನ ಎಜಿಆರ್ ಬಾಕಿ ಮೊತ್ತ ರೂ. 195 ಕೋಟಿ ಪಾವತಿಸಿದ್ದರೆ ರಿಲಯನ್ಸ್ ಕಮ್ಯುನಿಕೇಶನ್ಸ್ ಸರಕಾರಕ್ಕೆ ರೂ. 31,000 ಕೋಟಿ ಬಾಕಿಯಿರಿಸಿದೆ.

ದಿವಾಳಿತನ ಕಾನೂನು (ಐಬಿಸಿ) ಕೋಡ್ ಅನ್ವಯ ಕೆಲ ಟೆಲಿಕಾಂ ಕಂಪೆನಿಗಳು  ನೀಡಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಪರಾಮರ್ಶಿಸುತ್ತಿದೆ.

ಆರ್ಥಿಕ ಸಂಕಷ್ಟದಲ್ಲಿರುವ ಏರ್ ಸೆಲ್ ಹಾಗೂ ವೀಡಿಯೋಕಾನ್ ಕಂಪೆನಿಗಳ ಸ್ಪೆಕ್ಟ್ರಂ ಅನ್ನು ಯಾರು ಬಳಸುತ್ತಿದ್ದರೆಂಬ ಕುರಿತಾದ ಮಾಹಿತಿಯನ್ನೂ  ಸುಪ್ರೀಂ ಕೋರ್ಟ್ ಕೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X