Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಶನಿವಾರ ಮತ್ತೆ 241 ಮಂದಿಗೆ...

ಉಡುಪಿ : ಶನಿವಾರ ಮತ್ತೆ 241 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ15 Aug 2020 7:25 PM IST
share
ಉಡುಪಿ : ಶನಿವಾರ ಮತ್ತೆ 241 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಆ.15: ಶನಿವಾರ ಉಡುಪಿ ಜಿಲ್ಲೆಯಲ್ಲಿ 241 ಮಂದಿ ಕೋವಿಡ್- 19ಕ್ಕೆ ಪಾಸಿಟಿವ್ ಬಂದಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಕೊರೋನ ಸೋಂಕಿತರ ಒಟ್ಟು ಸಂಖ್ಯೆ 7738ಕ್ಕೇರಿದೆ. ಇಂದು ದಿನದಲ್ಲಿ 1556 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿಗಳು ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಕೊರೋನ ಸೋಂಕು ಪತ್ತೆಯಾದ 241 ಮಂದಿಯಲ್ಲಿ ಉಡುಪಿ ತಾಲೂಕಿನ 138 ಮಂದಿ, ಕುಂದಾಪುರ ತಾಲೂಕಿನ 70 ಹಾಗೂ ಕಾರ್ಕಳ ತಾಲೂಕಿನ 30 ಮಂದಿ ಸೇರಿದ್ದಾರೆ. ಉಳಿದಂತೆ ಹೊರಜಿಲ್ಲೆಯ ಮೂವರು ಜಿಲ್ಲೆಯಲ್ಲಿ ಚಿಕಿತ್ಸೆಗೆ ಬಂದು ಪಾಸಿಟಿವ್ ಆಗಿದ್ದಾರೆ. ಮಕ್ಕಳು ಸೇರಿದಂತೆ 127 ಮಂದಿ ಪುರುಷರು ಹಾಗೂ 114 ಮಂದಿ ಮಹಿಳೆಯರಲ್ಲಿ ಸೋಂಕು ಕಂಡು ಬಂದಿದೆ. ಇವರಲ್ಲಿ 32 ಪುರುಷರು ಹಾಗೂ 18 ಮಹಿಳೆಯರಲ್ಲಿ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಇಂದಿನ 241 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 7738ಕ್ಕೇರಿದೆ ಎಂದು ಡಾ.ಸೂಡ ತಿಳಿಸಿದರು.

ಇಂದು ಕೊರೋನ ಪಾಸಿಟಿವ್ ದೃಢಗೊಂಡ 241 ಮಂದಿಯಲ್ಲಿ 130 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 40 ಮಂದಿ ಶೀತಜ್ವರ ದಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ 71 ಮಂದಿಯ ಸೋಂಕಿನ ಸಂರ್ಕ ಇನ್ನೂ ತನಿಖೆಯಲ್ಲಿದೆ ಎಂದರು.

229 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಶನಿವಾರ 229 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 102 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 127 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 5101ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 2560 ಮಂದಿ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 1383 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1177 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆುುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

1632 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಶನಿವಾರ 1632 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 1035 ಮಂದಿ, ಕೋವಿಡ್ ಸಂಪರ್ಕಿತರು 296 ಮಂದಿ ಇದ್ದರೆ, ಉಸಿರಾಟ ತೊಂದರೆಯ ಏಳು ಮಂದಿ, ಶೀತಜ್ವರ ದಿಂದ ಬಳಲುವ 43 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 251 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪಡೆದ 1632 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 54,794ಕ್ಕೇರಿದೆ. ಇವುಗಳಲ್ಲಿ ಈವರೆಗೆ 45,581 ನೆಗೆಟಿವ್, 7738 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 77 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 1475 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಶುಕ್ರವಾರ 241 ಮಂದಿಯನ್ನು ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ.ಇವರಲ್ಲಿ ಒಟ್ಟು 186 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ 55 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಇದ್ದಾರೆ. ಜಿಲ್ಲೆಯಲ್ಲಿ ಈಗ ಒಟ್ಟು 2353 ಮಂದಿ ಹೋಮ್ ಐಸೋಲೇಷನ್ ಚಿಕಿತ್ಸೆಯಲ್ಲಿ ದ್ದಾರೆ ಎಂದು ಅವರು ಹೇಳಿದರು.

ದಿನದಲ್ಲಿ ಕೋವಿಡ್‌ಗೆ ಎರಡು ಬಲಿ

ದಿನದಲ್ಲಿ ಕೋವಿಡ್‌ಗೆ ಎರಡು ಬಲಿ ಆರೋಗ್ಯ ಇಲಾಖೆಯ ಮಾಹಿತಿಯಂತೆ ಉಡುಪಿ ಜಿಲ್ಲೆಯಲ್ಲಿ ಶನಿವಾರ ಇಬ್ಬರು ಕೋವಿಡ್-19ರ ಸೋಂಕಿನೊಂದಿಗೆ ಮೃತಪಟ್ಟಿದ್ದಾರೆ. ಇಬ್ಬರೂ ಉಡುಪಿ ತಾಲೂಕಿನವರಾಗಿದ್ದು, 65 ವರ್ಷದ ವೃದ್ಧರು ಅಧಿಕ ರಕ್ತದೊತ್ತಡ ಹಾಗೂ ಶ್ವಾಸ ಕೋಶಕ್ಕೆ ಸಂಬಂಧಿಸಿದ ಸಮಸ್ಯೆಯೊಂದಿಗೆ ಉಸಿರಾಟದ ತೊಂದರೆ ಹೊಂದಿದ್ದರು. 43 ವರ್ಷದ ಮತ್ತೊಬ್ಬರು ತೀವ್ರ ಮಧುಮೇಹದೊಂದಿಗೆ ಉಸಿರಾಟದ ತೊಂದರೆಯನ್ನು ಹೊಂದಿದ್ದು, ಅವರಲ್ಲೂ ಕೊರೋನ ಸೋಂಕು ಪತ್ತೆಯಾಗಿತ್ತು.

ಅಲ್ಲದೇ ಕ್ಯಾನ್ಸರ್ ಚಿಕಿತ್ಸೆಗೆಂದು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಾದ 78 ವರ್ಷ ಪ್ರಾಯದ ವೃದ್ಧರಲ್ಲೂ ಕೊರೋನ ಪಾಸಿಟಿವ್ ಕಂಡು ಬಂದಿದ್ದು, ಅವರು ಇಂದು ಅಪರಾಹ್ನದ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆಂದು ತಿಳಿದುಬಂದಿದೆ. ಇದರಿಂದ ಕೊರೋನ ದಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 79ಕ್ಕೇರಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X