Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನಾಗೆ ಪರಿಣಾಮಕಾರಿ ಔಷಧಿ ಪತ್ತೆ:...

ಕೊರೋನಾಗೆ ಪರಿಣಾಮಕಾರಿ ಔಷಧಿ ಪತ್ತೆ: ಅಮೆರಿಕದ ವಿಜ್ಞಾನಿಗಳ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ15 Aug 2020 9:53 PM IST
share
ಕೊರೋನಾಗೆ ಪರಿಣಾಮಕಾರಿ ಔಷಧಿ ಪತ್ತೆ: ಅಮೆರಿಕದ ವಿಜ್ಞಾನಿಗಳ ಘೋಷಣೆ

ವಾಶಿಂಗ್ಟನ್,ಆ.15:ಮಾನಸಿಕ ಖಿನ್ನತೆ, ಕಿವುಡುತನ ಸೇರಿದಂತೆ ವಿವಿಧ ಕಾಯಿಲೆಗಳ ಚಿಕಿತ್ಸೆಗೆ ಬಳಸಲಾಗುತ್ತಿರುವ ಔಷಧಿಯೊಂದು ಮಾರಣಾಂತಿಕ ಕೊರೋನ ವೈರಸ್, ಮಾನವರ ಜೀವಕೋಶಗಳಲ್ಲಿ ವೃದ್ಧಿಯಾಗುವುದನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿದೆಯೆಂದು ಅಮೆರಿಕದ ವಿಜ್ಞಾನಿಗಳ ತಂಡವೊಂದು ಶನಿವಾರ ಘೋಷಿಸಿದೆ.

 ಅತ್ಯಾಧುನಿಕ ಕಂಪ್ಯೂಟರ್‌ಗಳನ್ನು ತಮ್ಮ ಸಂಶೋಧನೆಗೆ ಬಳಸಿಕೊಂಡಿರುವ ವಿಜ್ಞಾನಿಗಳು ಈ ಔಷಧಿಯು ಕೊರೋನ ಚಿಕಿತ್ಸೆಗೆ ಅತ್ಯಂತ ಪರಿಣಾಮಕಾರಿಯೆಂಬುದನ್ನು ಪತ್ತೆ ಹಚ್ಚಿದ್ದಾರೆ.

    ಈ ಕುರಿತ ಸಂಶೋಧನಾ ವರದಿಯೊಂದು ‘ಸಯನ್ಸ್ ಅಡ್ವಾನ್ಸಸ್’ ನಿಯತ ಕಾಲಿಕದಲ್ಲಿ ಪ್ರಕಟವಾಗಿದೆ. ಕೊರೋನ ವೈರಸ್‌ನ ಜೀವನಚಕ್ರದಲ್ಲಿ ಪ್ರಮುಖ ಪಾತ್ರವಹಿಸುವ ಮಾಲೆಕ್ಯೂಲ್ ಮೈನ್ ಪ್ರೊಟ್ಯೂಸ್ (ಎಂಪ್ರೊ ) ಎಂಬ ಕಿಣ್ವ (ಎನ್‌ಝೈಮ್)ದ ಕುರಿತು ವಿಸ್ತೃತ ಅಧ್ಯಯನ ನಡೆಸಿದ ಬಳಿಕ ವಿಜ್ಞಾನಿಗಳು ಈ ಅಭಿಪ್ರಾಯಕ್ಕೆ ಬಂದಿದ್ದಾರೆ.

 ಎಬ್‌ಸೆಲೆನಾ ಎಂಬ ಹೆಸರಿನ ಈ ಔಷಧಿಯು ಕೊರೋನ ವೈರಸ್‌ನ ಎಂಪ್ರೊ ಕಿಣ್ವದ ವಿರುದ್ಧ ಪರಿಣಾಮಕಾರಿಯಾದ ಅಸ್ತ್ರವಾಗುವ ಆಶಾವಾದವನ್ನು ಮೂಡಿಸಿದೆ. ಈ ಔಷಧಿಯು ವೈರಾಣು ನಿರೋಧಕ, ಉರಿಯೂತ ನಾಶಕ, ಬ್ಯಾಕ್ಟ್ರೀರಿಯ ನಾಶಕ, ಹಾಗೂ ಜೀವಕೋಶ ರಕ್ಷಣೆಗೆ ಪೂರಕವಾದ ಅಂಶಗಳನ್ನು ಹೊಂದಿರುವುದಾಗಿ ಸಂಶೋಧನೆಯ ನೇತೃತ್ವ ವಹಿಸಿರುವ ಚಿಕಾಗೋ ವಿಶ್ವವಿದ್ಯಾನಿಲಯದ ಜುವಾನ್ ದ ಪ್ಯಾಬ್ಲೊ ತಿಳಿಸಿದ್ದಾರೆ.

          ಈ ಸಂಶೋಧನೆಯಲ್ಲಿ ದ ಪ್ಯಾಬ್ಲೊ ಮತ್ತವರ ತಂಡವು ಎಂಪ್ರೊ ಕಿಣ್ವ ಹಾಗೂ ಎಬ್‌ಸೆಲೆನ್ ಔಷಧಿಯ ವಿಸ್ತೃತ ಮಾದರಿಗಳನ್ನು ಅಭಿವೃದ್ಧಿಪಡಿಸಿ, ಅವುಗಳನ್ನು ಸೂಪರ್‌ಕಂಪ್ಯೂಟರ್‌ನಲ್ಲಿ ವಿಶ್ಲೇಷಿಸಿದ್ದರು. ಎಂಪ್ರೊ ಕಿಣ್ವದ ಚಟುವಟಿಕೆಗಳನ್ನು ಕುಗ್ಗಿಸುವ ಸಾಮರ್ಥ್ಯವನ್ನು ಎಬ್‌ಸೆಲೆನ್ ಹೊಂದಿರುವುದು ಕಂಪ್ಯೂಟರ್ ವಿಶ್ಲೇಷಣೆಯಿಂದ ತಿಳಿದುಬಂದಿರುವುದಾಗಿ ಅವರು ಹೇಳಿದ್ದಾರೆ.

ಆದಾಗ್ಯೂ ಕೋವಿಡ್-19 ವಿರುದ್ಧ ಈ ಔಷಧಿಯನ್ನು ಬಳಸಲು ಇನ್ನೂ ಹೆಚ್ಚಿನ ಅಧ್ಯಯನದ ಅಗತ್ಯವಿದೆಯೆಂದು ಸಂಶೋಧಕ ತಂಡವು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X