Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೃಷ್ಟಿಹೀನ, ಮಾನಸಿಕ ಅಸ್ವಸ್ಥ ಮಗನನ್ನು...

ದೃಷ್ಟಿಹೀನ, ಮಾನಸಿಕ ಅಸ್ವಸ್ಥ ಮಗನನ್ನು ಎಳೆದೊಯ್ದರು: ಠಾಣೆಯ ಬಳಿ ತಾಯಂದಿರ ಆಕ್ರಂದನ

ಬೆಂಗಳೂರು ಹಿಂಸಾಚಾರ ಪ್ರಕರಣ

ಸಮೀರ್ ದಳಸನೂರುಸಮೀರ್ ದಳಸನೂರು16 Aug 2020 5:33 PM IST
share
ದೃಷ್ಟಿಹೀನ, ಮಾನಸಿಕ ಅಸ್ವಸ್ಥ ಮಗನನ್ನು ಎಳೆದೊಯ್ದರು: ಠಾಣೆಯ ಬಳಿ ತಾಯಂದಿರ ಆಕ್ರಂದನ

ಬೆಂಗಳೂರು, ಆ.16: ‘ಕಾವಲ್ ಭೈರಸಂದ್ರ ಹಿಂಸಾಚಾರ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಯುವಕರ ಗುಂಪಿನಲ್ಲಿ ನನ್ನ ಮಗನೂ ಇದ್ದು, ಆತ ಅಮಾಯಕ’ ಎಂದು ತಾಯಿಯೊಬ್ಬಾಕೆ ಕಣ್ಣೀರು ಹಾಕಿದರೆ, ಮತ್ತೋರ್ವ ಮಹಿಳೆ ‘ನನ್ನ ಮಗ ದಿನಗೂಲಿಗಾರ. ಆತ ಯಾವುದೇ ತಪ್ಪು ಮಾಡಲು ಸಾಧ್ಯವಿಲ್ಲ’ ಎನ್ನುವ ಕೂಗು. ಹೀಗೆ, ಹತ್ತಾರು ಮಹಿಳೆಯರು ತಮ್ಮ ಮಕ್ಕಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಬಿಟ್ಟುಬಿಡಿ ಎಂದು ಅಳಲು ತೋಡಿಕೊಂಡ ದೃಶ್ಯಗಳು ಇಲ್ಲಿನ ಡಿಜೆ ಮತ್ತು ಕೆಜಿ ಹಳ್ಳಿ ಠಾಣೆ ಮುಂಭಾಗ ಕಾಣಿಸಿದವು.

ರವಿವಾರ ಮುಂಜಾನೆಯಿಂದಲೇ ಜಮಾಯಿಸಿದ ಹತ್ತಾರು ಮಹಿಳೆಯರು, ಗಲಾಟೆ ಸಂದರ್ಭದಲ್ಲಿ ತಮ್ಮ ಮಕ್ಕಳು ಹೋಗಿಲ್ಲ. ಆದರೂ, ಉದ್ದೇಶಪೂರ್ವಕವಾಗಿ ಎಳೆದೊಯ್ದರು. ಈ ಬಗ್ಗೆ ಪ್ರಶ್ನಿಸಿದರೆ, ಠಾಣೆಗೆ ಬಂದು ಮಾತನಾಡಿ ಎಂದು ಉತ್ತರಿಸಿದರು. ಇಲ್ಲಿಗೆ ಬಂದರೆ, ನಿಮ್ಮ ಮಗನನ್ನು ಬಳ್ಳಾರಿಗೆ ಕಳುಹಿಸಿದ್ದೇವೆ. ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿಟ್ಟಿದ್ದೇವೆ ಎನ್ನುತ್ತಿದ್ದಾರೆ. ಯಾರು ಸಹ ಸರಿಯಾದ ಉತ್ತರವನ್ನೇ ನೀಡುತ್ತಿಲ್ಲ ಎಂದು ಕಣ್ಣೀರು ಹಾಕಿದರು.

ದೃಷ್ಟಿಹೀನ, ಮಾನಸಿಕ ಅಸ್ವಸ್ಥ: ನಮ್ಮ ಮನೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಹಿಂಭಾಗವೇ ಇದೆ. ನಾವು ಘಟನೆಯಿಂದ ಹೆದರಿ ಮಂಗಳವಾರ ರಾತ್ರಿ ಮನೆ ಬಿಟ್ಟು ಹೋಗಿದ್ದೆವು. ಬುಧವಾರ ಸಂಜೆ ವಾಪಸ್ಸು ಬಂದಿದ್ದು, ರಾತ್ರಿ 9 ಗಂಟೆಗೆ ಬಂದ ಪೊಲೀಸರು, 19 ವರ್ಷದ ನನ್ನ ಮಗ ಸುಹನ್ ನನ್ನು ಎಳೆದೊಯ್ದರು. ಈ ಬಗ್ಗೆ ಪ್ರಶ್ನಿಸಿದಾಗ, ಠಾಣೆಗೆ ಬನ್ನಿ ಎಲ್ಲವೂ ಗೊತ್ತಾಗುತ್ತದೆ ಎಂದರು.

ಗುರುವಾರವೇ ನಾವು ಠಾಣೆಗೆ ಹೋದಾಗ, ಇಲ್ಲಿ ಯಾರೂ ಇಲ್ಲ, ಶುಕ್ರವಾರ ಬನ್ನಿ ಎಂದರು. ಬಳಿಕ, ಮರುದಿನ ತೆರಳಿದಾಗ ಠಾಣೆಯಲ್ಲಿ ನಿಮ್ಮ ಮಗನಿಲ್ಲ. ಆತನನ್ನು ಬಂಧಿಸಿದ್ದೇವೆ, ನೀವು ಯಾರಾದರೂ ವಕೀಲರನ್ನು ಸಂಪರ್ಕಿಸಿ ಎಂದು ಉತ್ತರಿಸಿದರು ಎಂದು 49 ವರ್ಷದ ಅಮೀನಾ ವಿವರಿಸಿದರು.

ನನ್ನ ಮಗನಿಗೆ ದೃಷ್ಟಿ ಸಮಸ್ಯೆ ಇದ್ದು, ಮಾನಸಿಕ ಅಸ್ವಸ್ಥನಾಗಿದ್ದಾನೆ. ಇಲ್ಲಿಯೇ ಸ್ಥಳೀಯ ಅಂಗಡಿಯೊಂದರಲ್ಲಿ ಸಹಾಯಕನಾಗಿ ಕೆಲಸಕ್ಕೆ ಹೋಗುತ್ತಿದ್ದ. ಆತ ನಿರಾಪರಾಧಿ ಎನ್ನುವುದು ನಮ್ಮ ಅಕ್ಕಪಕ್ಕದ ಮನೆಯವರಿಗೂ ಗೊತ್ತು ಎಂದು ಅವರು ಕಣ್ಣೀರು ಹಾಕಿದರು.

ದಿನಕೂಲಿಗಾರ: ನನ್ನ ತಂದೆ ಕಳೆದ ಒಂದು ವರ್ಷದ ಹಿಂದೆ ಅಪಘಾತದಲ್ಲಿ ಸಾವನ್ನಪ್ಪಿದರು. ಬಳಿಕ, ಸಹೋದರನೇ ಕುಟುಂಬದ ಜವಾಬ್ದಾರಿ ಹೊತ್ತು, ಕಲಾಸಿಪಾಳ್ಯದಲ್ಲಿ ಮರಗೆಲಸಕ್ಕೆ ಹೋಗುತ್ತಿದ್ದ. ಘಟನೆ ನಡೆದ ದಿನದಂದು ಕೆಲಸಕ್ಕೆ ಹೋಗಿ, ರಾತ್ರಿ ಮನೆಗೆ ಬಂದಿದ್ದ. ಆದರೆ, ಮರುದಿನ ಆತನನ್ನು ಪೊಲೀಸರು ಕರೆದುಕೊಂಡು ಹೋಗಿದ್ದು, ಈವರೆಗೂ ಬಂದಿಲ್ಲ. ಆತನೇ ನಮ್ಮ ಕುಟುಂಬಕ್ಕೆ ಆಸರೆಯಾಗಿದ್ದು, ಆತನನ್ನು ಬಿಟ್ಟುಬಿಡಿ ಎಂದು 23 ವರ್ಷದ ಬಂಧಿತ ಆರೋಪಿ ಎನ್ನಲಾದ ಸಾದಿಕ್ ಸಹೋದರಿ ಸಮೀನಾ(ಹೆಸರು ಬದಲಾಯಿಸಲಾಗಿದೆ) ಮನವಿ ಮಾಡಿಕೊಂಡರು.

"ಅಮಾಯಕರನ್ನು ವಿಚಾರಣೆ ನಡೆಸಿ, ಮನೆಗೆ ಕಳುಹಿಸಲಿ"

ನಾನು ಆರ್‍ಟಿ ನಗರದ ಸರಕಾರಿ ಉರ್ದು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹಸೀನಾ(ಹೆಸರು ಬದಲಾಯಿಸಲಾಗಿದೆ). ನನ್ನ ಪುತ್ರ 19 ವರ್ಷದ ಯುಸೂಫ್ ಖಾನ್ ಅನ್ನು ಗುರುವಾರ ತಡರಾತ್ರಿ ಬಂದ ಪೊಲೀಸರ ತಂಡ ಇಲ್ಲಿನ ಡಿಜೆಹಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಡಿಜೆಹಳ್ಳಿ ಸಮೀಪದ ಶಾಂಪುರ ಮುಖ್ಯರಸ್ತೆಯಲ್ಲಿಯೇ ನೆಲೆಸಿದ್ದೇ ತಪ್ಪಾಯಿತು. ಇದೇ ಕಾರಣಕ್ಕೆ ನನ್ನ ಮಗನನ್ನು ವಶಕ್ಕೆ ಪಡೆದು, ಪೊಲೀಸರು ದಂಡಿಸಿದ್ದಾರೆ. ಅಲ್ಲದೆ, ನಮಗೆ ಈ ಘಟನೆಯ ಬಗ್ಗೆ ಗೊತ್ತೇ ಇರಲಿಲ್ಲ. ನನ್ನ ಮಗ ಬಿಬಿಎ ವ್ಯಾಸಂಗ ಮಾಡುತ್ತಿದ್ದು, ಹೊರಗಡೆ ಸುತ್ತುವ ಹವ್ಯಾಸವೇ ಇಲ್ಲ. ಆದರೂ, ಸ್ಥಳೀಯರನ್ನೇ ಗುರಿಯಾಗಿಸಿಕೊಂಡು ವಶಕ್ಕೆ ಪಡೆದಿರುವುದು ಸರಿಯಲ್ಲ. ಪೊಲೀಸರು, ಅಮಾಯಕ ಮಕ್ಕಳನ್ನು ವಿಚಾರಣೆ ನಡೆಸಿ, ಮನೆಗೆ ಕಳುಹಿಸಲಿ ಎಂದು ಶಿಕ್ಷಕಿ ಠಾಣೆ ಮುಂಭಾಗ ಕಣ್ಣೀರು ಹಾಕಿದರು.

share
ಸಮೀರ್ ದಳಸನೂರು
ಸಮೀರ್ ದಳಸನೂರು
Next Story
X