ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬಿಗಿ ಪೊಲೀಸ್ ಭದ್ರತೆ: ಬಸವರಾಜ ಬೊಮ್ಮಾಯಿ
![ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬಿಗಿ ಪೊಲೀಸ್ ಭದ್ರತೆ: ಬಸವರಾಜ ಬೊಮ್ಮಾಯಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬಿಗಿ ಪೊಲೀಸ್ ಭದ್ರತೆ: ಬಸವರಾಜ ಬೊಮ್ಮಾಯಿ](https://www.varthabharati.in/sites/default/files/images/articles/2020/08/16/255241-1597582006.jpg)
ಬೆಂಗಳೂರು, ಆ.16: ಕಾವಲ್ ಭೈರಸಂದ್ರ ಗಲಭೆ ಪ್ರಕರಣ ಸಂಬಂಧ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ರವಿವಾರ ಆರ್ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ನಂತರ ತಮಗೆ ಭದ್ರತೆ ಇಲ್ಲವೆಂದು ಶಾಸಕ ಅಖಂಡ ಶ್ರೀನಿವಾಸ್ಮೂರ್ತಿ ಹೇಳಿದ್ದಾರೆ. ಅವರಿಗೆ ಮತ್ತು ಅವರ ಮನೆ ವ್ಯಾಪ್ತಿಯ ಪ್ರದೇಶದಲ್ಲಿಯೂ ಎಲ್ಲ ರೀತಿಯ ಭದ್ರತೆ ನೀಡುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಗಲಭೆಗೊಳಗಾಗಿದ್ದ ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಈಗ ಪರಿಸ್ಥಿತಿ ಶಾಂತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಈ ತಿಂಗಳ 18ರವರೆಗೂ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ ಎಂದು ಅವರು ನುಡಿದರು.
Next Story