ಆ. 19 ರಿಂದ ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನ ಅಭಿಯಾನ
ಮಂಗಳೂರು : ದ.ಕ ಜಿಲ್ಲಾ ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿ ಬಳಗದ ವತಿಯಿಂದ ಜಿಲ್ಲೆಯಾದ್ಯಂತ ರಕ್ತದಾನ ಅಭಿಯಾನ ಆ. 19 ರಿಂದ ಅ. 2 ರವರೆಗೆ ನಡೆಯಲಿದೆ. ಸುಮಾರು 12 ವಲಯಗಳಲ್ಲಿ 20 ಕ್ಕಿಂತ ಅಧಿಕ ರಕ್ತದಾನ ಕ್ಯಾಂಪ್ ಗಳು ನಡೆಯಲಿದ್ದು ತುರ್ತು ಸಂಧರ್ಭಗಳಲ್ಲಿ ಜಿಲ್ಲೆಯ ಎಲ್ಲಾ ಬ್ಲಡ್ ಬ್ಯಾಂಕುಗಳಲ್ಲಿ ಕೂಡ ವಿಖಾಯ ಕಾರ್ಯಕರ್ತರು ರಕ್ತದಾನ ಮಾಡಲಿದ್ದಾರೆ.
ಆ. 19 ರಂದು ಬೆಳಿಗ್ಗೆ 9 ಗಂಟೆಯಿಂದ ರಕ್ತದಾನ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವು ಮಂಗಳೂರು ವಲಯ ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿ ಬಳಗದ ನೇತೃತ್ವದಲ್ಲಿ ವಲಚ್ಚಿಲ್ ದರ್ಗಾ ಷರೀಫ್ ಸಭಾಂಗಣದಲ್ಲಿ ನಡೆಯಲಿದೆ.
ಎಸ್ಕೆಎಸ್ಸೆಸ್ಸೆಫ್ ದ.ಕ ಜಿಲ್ಲಾದ್ಯಕ್ಷ ಅಮೀರ್ ತಂಙಳ್ ಕಿನ್ಯಾ ಕಾರ್ಯಕ್ರಮದಲ್ಲಿ ದುಆ ನೆರವೇರಿಸಲಿದ್ದು ವಳಚ್ಚಿಲ್ ಕೇಂದ್ರ ಜುಮಾ ಮಸೀದಿಯ ಖತೀಬ್ ಕೆ.ಐ ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ ಉಸ್ತಾದ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸಮಿತಿಯ ಅದ್ಯಕ್ಷರಾದ ಅನೀಸ್ ಕೌಸರಿ ಪ್ರಾಸ್ತಾವಿಕ ಭಾಷಣ ಮಾಡಲಿದ್ದು ಜಿಲ್ಲಾ ವಿಖಾಯ ಚೇರ್ಮೆನ್ ಇಸ್ಮಾಯಿಲ್ ತಂಙಳ್ ಉಪ್ಪಿನಂಗಡಿ, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಮುಹಮ್ಮದ್ ಮೋನು, ಮಂಗಳೂರು ತಾಲೂಕಿನ ತಹಸೀಲ್ದಾರ್ ಗುರುಪ್ರಸಾದ್, ಮಂಗಳೂರು ಗ್ರಾಮಾಂತರ ಸಬ್ ಇನ್ಸ್ಪೆಕ್ಟರ್ ಜಾನ್ಸನ್ ಡಿ. ಸೋಜಾ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ವಳಚ್ಚಿಲ್ ಕೇಂದ್ರ ಜುಮಾ ಮಸೀದಿಯ ಗೌರವಾಧ್ಯಕ್ಷ ಹಾಜಿ ಝಫರುಲ್ಲಾ ಒಡೆಯರ್ ಅಧ್ಯಕ್ಷರಾದ ಹಾಜಿ ಅಬ್ದುಲ್ ಹಮೀದ್ ಜೀಲಾನಿ, ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಈ ರಕ್ತದಾನ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಖಾಯ ರಕ್ತದಾನಿ ಬಳಗದ ಉಸ್ತುವಾರಿ ತಾಜುದ್ದೀನ್ ಟರ್ಲಿ ಹಾಗೂ ಮಂಗಳೂರು ವಲಯ ಉಸ್ತುವಾರಿ ನಝೀರ್ ವಲಚ್ಚಿಲ್ ತಿಳಿಸಿರುತ್ತಾರೆ.