Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಬಿಕ್ಕಟ್ಟು: ದೇಶದಲ್ಲಿ 41 ಲಕ್ಷ...

ಕೊರೋನ ಬಿಕ್ಕಟ್ಟು: ದೇಶದಲ್ಲಿ 41 ಲಕ್ಷ ಯುವಜನತೆಗೆ ಉದ್ಯೋಗ ನಷ್ಟ

ಐಎಲ್‌ಒ – ಎಡಿಬಿ ವರದಿ

ವಾರ್ತಾಭಾರತಿವಾರ್ತಾಭಾರತಿ18 Aug 2020 9:11 PM IST
share
ಕೊರೋನ ಬಿಕ್ಕಟ್ಟು: ದೇಶದಲ್ಲಿ 41 ಲಕ್ಷ ಯುವಜನತೆಗೆ ಉದ್ಯೋಗ ನಷ್ಟ

ಹೊಸದಿಲ್ಲಿ, ಆ.18: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ದೇಶದಲ್ಲಿ ಸುಮಾರು 41 ಲಕ್ಷ ಯುವಜನತೆ ಉದ್ಯೋಗ ಕಳೆದುಕೊಂಡಿದ್ದು ಇದರಲ್ಲಿ ನಿರ್ಮಾಣ ಕ್ಷೇತ್ರ ಮತ್ತು ಕೃಷಿ ಕ್ಷೇತ್ರದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಇಂಟರ್‌ನ್ಯಾಷನಲ್ ಲೇಬರ್ ಆರ್ಗನೈಸೇಷನ್ (ಐಎಲ್‌ಒ) -ಏಶ್ಯನ್ ಡೆವಲಪ್‌ಮೆಂಟ್ ಬ್ಯಾಂಕ್(ಐಡಿಬಿ)ನ ಜಂಟಿ ವರದಿ ತಿಳಿಸಿದೆ.

ಕೊರೋನ ಸೋಂಕಿನಿಂದಾಗಿ ಏಶ್ಯಾ ಮತ್ತು ಪೆಸಿಫಿಕ್ ವಲಯದಲ್ಲಿ ಯುವ ಜನತೆಯ ಉದ್ಯೋಗಾವಕಾಶದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ‘ಟ್ಯಾಕ್ಲಿಂಗ್ ದಿ ಕೋವಿಡ್-19 ಯೂತ್ ಎಂಪ್ಲಾಯ್‌ಮೆಂಟ್ ಕ್ರೈಸಿಸ್ ಇನ್ ಏಶ್ಯಾ ಆ್ಯಂಡ್ ದಿ ಪೆಸಿಫಿಕ್’ ಎಂಬ ಶೀರ್ಷಿಕೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್‌ಒ) ಮತ್ತು ಏಶ್ಯ ಅಭಿವೃದ್ಧಿ ಬ್ಯಾಂಕ್(ಎಡಿಬಿ)ಯ ಜಂಟಿ ವರದಿ ಮಂಗಳವಾರ ಪ್ರಕಟವಾಗಿದೆ. 25 ಮತ್ತು ಹೆಚ್ಚಿನ ವಯಸ್ಸಿನವರಿಗಿಂತ 15-24ರ ವಯೋಮಾನದವರು ಹೆಚ್ಚಿನ ಸಮಸ್ಯೆ ಅನುಭವಿಸಿದ್ದಾರೆ. ಕೊರೋನ ಸೋಂಕಿನಿಂದ ಭಾರತದಲ್ಲಿ ಮೂರನೇ ಎರಡರಷ್ಟು ಅಭ್ಯಾಸಾವಧಿ( ಅಪ್ರೆಂಟಿಸ್‌ಶಿಪ್) ಹಾಗೂ ಮುಕ್ಕಾಲು ಪಾಲು ಇಂಟರ್ನ್‌ಶಿಪ್‌ಗೆ ಅಡ್ಡಿಯಾಗಿದೆ. ಕೊರೋನ ಸೋಂಕಿಗಿಂತ ಮೊದಲು ಕೂಡಾ ಏಶ್ಯ ಮತ್ತು ಪೆಸಿಫಿಕ್ ವಲಯದ ಯುವಜನತೆ ಉದ್ಯೋಗ ರಂಗದಲ್ಲಿ ತೀವ್ರ ಸವಾಲು ಎದುರಿಸಿದ್ದು ಇದು ನಿರುದ್ಯೋಗ ಪ್ರಮಾಣ ಹೆಚ್ಚಳಕ್ಕೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಯುವಜನತೆ ಶಾಲೆಯಿಂದ ಮತ್ತು ಕೆಲಸದಿಂದ ಹೊರಗುಳಿಯಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

2020ರಲ್ಲಿ ಏಶ್ಯಾ ಮತ್ತು ಪೆಸಿಫಿಕ್ ದೇಶಗಳಲ್ಲಿ 1 ರಿಂದ 1.5 ಕೋಟಿಯಷ್ಟು ಯುವಜನತೆಯ ಕೆಲಸ ನಷ್ಟವಾಗಿದೆ. ವಯಸ್ಕರಿಗಿಂತ ಯುವಜನತೆ ಉದ್ಯೋಗ ನಷ್ಟದಿಂದ ಹೆಚ್ಚಿನ ಸಮಸ್ಯೆಗೆ ಒಳಗಾಗಲು ಪ್ರಮುಖ ಕಾರಣವೆಂದರೆ, ಯುವಜನರಲ್ಲಿ ಅರ್ಧಾಂಶಕ್ಕಿಂತ ಅಧಿಕ ಜನ ಸಗಟು(ಹೋಲ್‌ಸೇಲ್), ಚಿಲ್ಲರೆ ವ್ಯಾಪಾರ, ಉತ್ಪಾದನೆ ಕ್ಷೇತ್ರ, ಬಾಡಿಗೆ ವ್ಯವಹಾರ, ವಾಸ್ತವ್ಯ ಮತ್ತು ಆಹಾರ ಸೇವೆ ಒದಗಿಸುವ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು ಮತ್ತು ಈ ನಾಲ್ಕು ಕ್ಷೇತ್ರಗಳು ಕೊರೋನ ಸೋಂಕಿನಿಂದಾಗಿ ಅತ್ಯಂತ ಹೆಚ್ಚು ಸಮಸ್ಯೆಗೆ ಒಳಗಾಗಿವೆ . ಈ ನಾಲ್ಕು ಕ್ಷೇತ್ರಗಳಲ್ಲಿ ಮೂರರಲ್ಲಿ ಮಹಿಳಾ ಉದ್ಯೋಗಿಗಳ ಪ್ರಮಾಣ ಹೆಚ್ಚಿದೆ ಎಂದು ವರದಿ ತಿಳಿಸಿದೆ.

 ಈ ಹಿನ್ನೆಲೆಯಲ್ಲಿ ಯುವಜನತೆಗೆ ಉದ್ಯೋಗಾವಕಾಶ ಸೃಷ್ಟಿಸಲು ಈ ಪ್ರದೇಶದ ಸರಕಾರಗಳು ಶಿಕ್ಷಣ ಮತ್ತು ತರಬೇತಿಯ ಜೊತೆಗೆ ಕ್ಷಿಪ್ರ ಮತ್ತು ವ್ಯಾಪಕ ಮತ್ತು ಉದ್ದೇಶಿತ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X