Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಯಿಘರ್ ಗ್ರಾಮದಲ್ಲಿ ಮಸೀದಿ ಕೆಡವಿ...

ಉಯಿಘರ್ ಗ್ರಾಮದಲ್ಲಿ ಮಸೀದಿ ಕೆಡವಿ ಶೌಚಾಲಯ ನಿರ್ಮಿಸಿದ ಚೀನಾ: ‘ರೇಡಿಯೊ ಫ್ರೀ ಏಶ್ಯ’ ವರದಿ

ಗರ್ಭಿಣಿಯರಿಗೆ ಬಲವಂತದ ಗರ್ಭಪಾತ

ವಾರ್ತಾಭಾರತಿವಾರ್ತಾಭಾರತಿ18 Aug 2020 9:42 PM IST
share
ಉಯಿಘರ್ ಗ್ರಾಮದಲ್ಲಿ ಮಸೀದಿ ಕೆಡವಿ ಶೌಚಾಲಯ ನಿರ್ಮಿಸಿದ ಚೀನಾ: ‘ರೇಡಿಯೊ ಫ್ರೀ ಏಶ್ಯ’ ವರದಿ

ಬೀಜಿಂಗ್, ಆ. 18: ಚೀನಾದ ಕ್ಸಿನ್‌ ಜಿಯಾಂಗ್ ಪ್ರಾಂತದಲ್ಲಿ ಚೈನೀಸ್ ಕಮ್ಯುನಿಸ್ಟ್ ಪಾರ್ಟಿಯ ಅಧಿಕಾರಿಗಳು ಮಸೀದಿಯೊಂದನ್ನು ಕೆಡವಿ ಅದರ ಸ್ಥಳದಲ್ಲಿ ಸಾರ್ವಜನಿಕ ಶೌಚಾಲಯವೊಂದನ್ನು ನಿರ್ಮಿಸಿದ್ದಾರೆ ಎಂದು ‘ರೇಡಿಯೊ ಫ್ರೀ ಏಶ್ಯ (ಆರ್‌ಎಫ್‌ಎ)’ದ ವರದಿಗಳು ತಿಳಿಸಿವೆ. ಅದೂ ಅಲ್ಲದೆ, ಈ ವಲಯದಲ್ಲಿ ವಾಸಿಸುತ್ತಿರುವ ಉಯಿಘರ್ ಮುಸ್ಲಿಮರ ವಿರುದ್ಧದ ದಮನ ಕಾರ್ಯಾಚರಣೆಯ ಭಾಗವಾಗಿ, ಗರ್ಭಪಾತ ಮಾಡಿಸಿಕೊಳ್ಳುವಂತೆ ಗರ್ಭಿಣಿ ಮಹಿಳೆಯರಿಗೆ ಆದೇಶ ನೀಡಿದ್ದಾರೆ ಎಂಬುದಾಗಿಯೂ ಅದು ಆರೋಪಿಸಿದೆ.

ಆತುಶ್ ನಗರದ ಸುನ್‌ಟಾಗ್ ಗ್ರಾಮದಲ್ಲಿರುವ ಟೊಕುಲ್ ಮಸೀದಿಯನ್ನು ಕೆಡವಿ ಅದರ ಸ್ಥಳದಲ್ಲಿ ಸಾರ್ವಜನಿಕ ಶೌಚಾಲಯವೊಂದನ್ನು ನಿರ್ಮಿಸಲಾಗಿದೆ ಎಂದು ರೇಡಿಯೊ ವರದಿ ಮಾಡಿದೆ. ಕುಟುಂಬ ಯೋಜನೆಯ ಮಿತಿಯನ್ನು ಮೀರಿ ಹುಟ್ಟಲಿರುವ ಹಾಗೂ ಹಿಂದಿನ ಹೆರಿಗೆಯ ಬಳಿಕ 3 ವರ್ಷಗಳಿಗೂ ಕಡಿಮೆ ಅವಧಿಯಲ್ಲಿ ಹುಟ್ಟಲಿರುವ ಶಿಶುಗಳನ್ನು ಸಾಯಿಸುವುದಕ್ಕಾಗಿ ಗರ್ಭಿಣಿ ಮಹಿಳೆಯರನ್ನು ಬಲವಂತವಾಗಿ ಗರ್ಭಪಾತಕ್ಕೊಳಪಡಿಸುವಂತೆ ಆಸ್ಪತ್ರೆಗಳನ್ನು ಬಲವಂತಪಡಿಸಲಾಗಿದೆ ಎಂದು ಅದು ತಿಳಿಸಿದೆ.

ಕ್ಸಿನ್‌ಜಿಯಾಂಗ್ ಸ್ವಾಯತ್ತ ವಲಯವನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) 1949ರಲ್ಲಿ ವಶಪಡಿಸಿಕೊಂಡಿತು ಹಾಗೂ 1955ರ ವೇಳೆಗೆ ಅದನ್ನು ಸಂಪೂರ್ಣವಾಗಿ ಚೀನಾದೊಂದಿಗೆ ವಿಲೀನಗೊಳಿಸಿತು.

ಅಂದಿನಿಂದ ಉಯಿಘರ್ ಜನಾಂಗೀಯರು ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದಾರೆ. ಚೀನಾದ ಸರ್ವಾಧಿಕಾರಿ ಆಡಳಿತದ ವಿರುದ್ಧ ಕ್ಸಿನ್‌ಜಿಯಾಂಗ್ ಜನರ ಪ್ರತಿರೋಧ ಹೆಚ್ಚುತ್ತಿರುವಂತೆಯೇ, ಚೀನಾವು ಅಲ್ಲಿ ಸೇನೆಯನ್ನು ನಿಯೋಜಿಸಿದೆ. ಟೋಕುಲ್ ಮಸೀದಿಯನ್ನು 2018ರಲ್ಲಿ ಕೆಡವಿ ಅಲ್ಲಿ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಲಾಯಿತು ಎಂದು ಗ್ರಾಮ ಸಮಿತಿಯ ಮುಖ್ಯಸ್ಥರನ್ನು ಉಲ್ಲೇಖಿಸಿ ರೇಡಿಯೊ ವರದಿ ಮಾಡಿದೆ. ಆದರೆ, ಆ ಗ್ರಾಮದ ಎಲ್ಲ ಮನೆಗಳಲ್ಲೂ ಶೌಚಾಲಯಗಳಿವೆ ಎಂದು ಅಲ್ಲಿನ ಜನರು ಹೇಳಿದ್ದಾರೆ.

ಕೆಡವಲಾಗಿರುವ ಮಸೀದಿಯ ಅವಶೇಷಗಳನ್ನು ಮುಚ್ಚಿಹಾಕುವುದಕ್ಕಾಗಿ ಹಾಗೂ ಅಲ್ಲಿಗೆ ಭೇಟಿ ನೀಡುವ ನಿಗಾ ತಂಡಗಳ ಸದಸ್ಯರಿಗಾಗಿ ಶೌಚಾಲಯವನ್ನು ನಿರ್ಮಿಸಿರುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

2019ರಲ್ಲಿ ಅಝ್ನ ಮಸೀದಿಯನ್ನು ಕೆಡವಿ ಅಂಗಡಿಯೊಂದನ್ನು ನಿರ್ಮಿಸಲಾಗಿದೆ ಹಾಗೂ ಈ ಅಂಗಡಿಯಲ್ಲಿ ಶರಾಬು ಮತ್ತು ಸಿಗರೇಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ರೇಡಿಯೊ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X