Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಕ್ಷಿದಾರನೇ ಇನ್ನುಮುಂದೆ ನೇರವಾಗಿ ಅರ್ಜಿ...

ಕಕ್ಷಿದಾರನೇ ಇನ್ನುಮುಂದೆ ನೇರವಾಗಿ ಅರ್ಜಿ ಹಾಕುವಂತಿಲ್ಲ: ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ18 Aug 2020 11:29 PM IST
share
ಕಕ್ಷಿದಾರನೇ ಇನ್ನುಮುಂದೆ ನೇರವಾಗಿ ಅರ್ಜಿ ಹಾಕುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು, ಆ.18: ವಕೀಲರ ನೆರವಿಲ್ಲದೆ ನ್ಯಾಯಾಲಯದಲ್ಲಿ ಕಕ್ಷಿದಾರನೇ ನೇರವಾಗಿ ಪ್ರಕರಣ ದಾಖಲಿಸಿ, ಬಳಿಕ ಪ್ರಕರಣದ ಸಂಬಂಧ ತಾವೇ ಖುದ್ದಾಗಿ ವಾದ ಮಂಡಿಸುತ್ತಿದ್ದ ಪಾರ್ಟಿ-ಇನ್-ಪರ್ಸನ್ ಇನ್ಮುಂದೆ ವಕೀಲರ ಮೂಲಕವೇ ಪ್ರಕರಣ ದಾಖಲಿಸಬೇಕೆಂಬ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದೆ.

ಮೈಸೂರು ಉಚ್ಚ ನ್ಯಾಯಾಲಯ ಕಾಯ್ದೆ-1884ರ ಸೆಕ್ಷನ್ 19ರ ಅಡಿ ಅಧಿಕಾರ ಚಲಾಯಿಸಿ ರಾಜ್ಯ ಹೈಕೋರ್ಟ್ ಈ ನಿಯಮಗಳನ್ನು ರೂಪಿಸಿದ್ದು, ಇದಕ್ಕೆ ರಾಜ್ಯ ಸರಕಾರವೂ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ ಕರ್ನಾಟಕ ಹೈಕೋರ್ಟ್ (ಸ್ವತಃ ಪಕ್ಷಗಾರನ ವಿಚಾರಣಾ ನಡವಳಿಕೆ) ನಿಯಮಗಳು ಅನ್ನು ಜಾರಿ ಮಾಡಿ ಅಧಿಸೂಚನೆ ಹೊರಡಿಸಿದೆ.

ಯಾವುದೇ ಒಂದು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೋರಿ ನ್ಯಾಯಾಲಯಕ್ಕೆ ಖುದ್ದಾಗಿ ಅರ್ಜಿ ಸಲ್ಲಿಸಿ, ಬಳಿಕ ವಿಚಾರಣೆಗಳಲ್ಲಿ ಹಾಜರಾಗುವ ಮತ್ತು ಪ್ರಕರಣದಲ್ಲಿ ಪಕ್ಷಗಾರನಾಗಿದ್ದುಕೊಂಡೇ ವಾದಿಸುವ ವ್ಯಕ್ತಿಗೆ ಪಾರ್ಟಿ-ಇನ್-ಪರ್ಸನ್ ಅಥವಾ ಸ್ವತಃ ಪಕ್ಷಗಾರ ಎನ್ನುತ್ತಾರೆ. ಇಂತಹ ಪಕ್ಷಗಾರರು ತಮ್ಮ ಪ್ರಕರಣದಲ್ಲಿ ಮಾತ್ರ ವಕೀಲರ ಮಾದರಿಯಲ್ಲೇ ನ್ಯಾಯಾಲಯಗಳ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದರು. ಹೈಕೋರ್ಟ್ ಜಾರಿ ಮಾಡಿರುವ ಹೊಸ ನಿಯಮಗಳ ಪ್ರಕಾರ ಇವರೀಗ ಹಲವು ನಿಬಂಧನೆಗಳನ್ನು ಪೂರೈಸಬೇಕಿದೆ.

ಪಾರ್ಟಿ-ಇನ್-ಪರ್ಸನ್ ಆಗಿ ಪ್ರಕರಣ ದಾಖಲಿಸುವ ಮುನ್ನ ನೋಟರಿ ಅಥವಾ ಓತ್ ಕಮಿಷನರ್‍ಗಳಿಂದ ತಮ್ಮ ಅರ್ಜಿಯನ್ನು ದೃಢೀಕರಿಸಬೇಕು. ಈ ವೇಳೆ ತಾವೇಕೆ ಪಾರ್ಟಿ-ಇನ್-ಪರ್ಸನ್ ಆಗಿ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದೇವೆ, ವಕೀಲರನ್ನು ಯಾವ ಕಾರಣಕ್ಕಾಗಿ ನಿಯೋಜಿಸಿಕೊಳ್ಳುತ್ತಿಲ್ಲ ಎಂಬ ಬಗ್ಗೆ ಸೂಕ್ತ ಕಾರಣಗಳನ್ನು ವಿವರಿಸಬೇಕು. ಜತೆಗೆ ಇತ್ತೀಚಿನ ಭಾವಚಿತ್ರ ಹೊಂದಿರುವ, ಸಂಪೂರ್ಣ ವಿಳಾಸವುಳ್ಳ ಅಧಿಕೃತ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸಗಳನ್ನು ಲಗತ್ತಿಸಬೇಕು.

ದಾಖಲಿಸುತ್ತಿರುವ ಪ್ರಕರಣದ ವಿವರ ಹಾಗೂ ಪ್ರಸ್ತುತಪಡಿಸುತ್ತಿರುವ ಸಂಗತಿಗಳನ್ನು ವಕೀಲರಿಂದ ಪರಿಶೀಲಿಸಿ ಸಹಿ ಪಡೆದುಕೊಳ್ಳಬೇಕು. ನಂತರ ದೃಢೀಕರಣಗೊಳಿಸಿದ ಅರ್ಜಿಯನ್ನು ಪೂರ್ವಾನುಮತಿ ಪಡೆಯಲು ಅಗತ್ಯವಿರುವ ಅರ್ಜಿಗಳೊಂದಿಗೆ ಸಲ್ಲಿಸಬೇಕು. ಈ ಅರ್ಜಿಯನ್ನು ಪರಿಶೀಲನಾ ಶಾಖೆ (ಸ್ಕ್ರೂಟಿನಿ ಬ್ರಾಂಚ್) ಪರಿಶೀಲಿಸಿ ಪಾರ್ಟಿ-ಇನ್ ಪರ್ಸನ್ ಕಮಿಟಿಗೆ ಸಲ್ಲಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X