Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಎಸ್‌ಎಫ್‌ಸಿಗೆ 44.92 ಕೋಟಿ ರೂ. ಲಾಭ...

ಕೆಎಸ್‌ಎಫ್‌ಸಿಗೆ 44.92 ಕೋಟಿ ರೂ. ಲಾಭ ದಾಖಲು

ವಾರ್ತಾಭಾರತಿವಾರ್ತಾಭಾರತಿ19 Aug 2020 8:45 PM IST
share

ಉಡುಪಿ, ಆ.19: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು 2019-20ರ ಆರ್ಥಿಕ ವರ್ಷದಲ್ಲಿ ವಿವಿಧ ಸಾಲ ಯೋಜನೆಗಳ ಮೂಲಕ 667.81 ಕೋಟಿ ರೂ.ಗಳ ಸಾಲವನ್ನು ಮಂಜೂರು ಮಾಡಿದೆ. 727.90ಕೋಟಿ ರೂ.ಗಳನ್ನು ವಿತರಣೆ ಮಾಡಲಾಗಿದ್ದು, ಪ್ರಸ್ತುತ ಸಾಲಿನಲ್ಲಿ ಒಟ್ಟು 720.85 ಕೋಟಿ ರೂ. ಗಳನ್ನು ವಸೂಲಾತಿ ಮಾಡಲಾಗಿದೆ. ಈ ಮೂಲಕ ಪ್ರಸ್ತುತ ವರ್ಷದಲ್ಲಿ ಸಂಸ್ಥೆಯು 44.92 ಕೋಟಿ ರೂ.ಗಳಷ್ಟು ಲಾಭ ಗಳಿಸಿದೆ ಎಂದು ಕೆಎಸ್‌ಎಫ್‌ಸಿ ಪ್ರಕಟಣೆ ತಿಳಿಸಿದೆ.

ಅಲ್ಲದೇ ಶೇಕಡವಾರು ಅನುತ್ಪಾದಕ ನಿವ್ವಳ ಆಸ್ತಿಯು ಕಳೆದ ವರ್ಷದ ಶೇ. 6.09ರಿಂದ ಪ್ರಸ್ತುತ ವರ್ಷದಲ್ಲಿ ಶೇ.5.12ಕ್ಕೆ ಇಳಿದಿದೆ. ಮಾರ್ಚ್ ತಿಂಗಳ 31ರವರೆಗೆ ಸಂಸ್ಥೆಯ ಸಂಚಿತ ಮಂಜೂರಾತಿ 1,74,217 ಕೈಗಾರಿಕಾ ಘಟಕ ಗಳಿಗೆ 17,884.72 ಕೋಟಿ ರೂ.ಗಳಾಗಿವೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಏಕರೂಪ್ ಕೌರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ 61ನೇ ವಾರ್ಷಿಕ ಮಹಾಸಭೆ ಯಲ್ಲಿ ವೀಡಿಯೋ ಕಾನ್ಪರೆನ್ಸ್ ಮುಖಾಂತರ ಸಂಸ್ಥೆಯ ಷೇರುದಾರರನ್ನು ಉದ್ದೇಶಿಸಿ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಸಂಸ್ಥೆಯು ಈಗಾಗಲೇ 21,700 ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿ ಗಳಿಗೆ 2000 ಕೋಟಿ ರೂ.ಗಳಿಗೂ ಅಧಿಕ ಸಾಲದ ನೆರವನ್ನು ನೀಡಿದೆ. ಅಲ್ಲದೇ ಈವರೆಗೆ 30,000ಕ್ಕೂ ಅಧಿಕ ಮಹಿಳಾ ಉದ್ಯಮದಾರರಿಗೆ 4243.67 ಕೋಟಿ ರೂ.ಗಳ ಅವಧಿ ಸಾಲ ಮಂಜೂರು ಮಾಡಿದೆ. 41,000 ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಉದ್ಯಮಿಗಳಿಗೆ ಇದುವರೆಗೂ 1748.40 ಕೋಟಿ ರೂ.ಗಳ ಸಾಲ ಮಂಜೂರಾತಿ ಮಾಡಿದೆ. ಮೊದಲ ಪೀಳಿಗೆ ಉದ್ಯಮದಾರರಿಗೆ 164.70 ಕೋಟಿ ರೂ.ಗ ಸಾಲ ಮಂಜೂರು ಮಾಡಿದೆ ಎಂದರು.

ಸಂಸ್ಥೆ ಕೈಗೊಂಡಿರುವ ಹಲವಾರು ಉಪಕ್ರಮಗಳು ಹಾಗೂ ಪ್ರಮುಖ ಯೋಜನೆಗಳಾದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಉದ್ಯಮಿಗಳಿಗೆ, ಮಹಿಳಾ ಉದ್ಯಮಿಗಳಿಗೆ ಹಾಗೂ ಎಲ್ಲಾ ವರ್ಗದ ಉದ್ಯಮಿಗಳಿಗೆ ಲಭ್ಯವಿರುವ ಶೇ.4ರ ನಿವ್ವಳ ಬಡ್ಡಿದರದಲ್ಲಿ ಆರ್ಥಿಕ ಸಹಾಯ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಸಂಸ್ಥೆ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.

ಪ್ರಸ್ತುತ ಹಣಕಾಸು ವರ್ಷದಲ್ಲಿ ಕರ್ನಾಟಕ ಸರಕಾರವು ಸಂಸ್ಥೆಗೆ 100 ಕೋಟಿ ರೂ.ಗಳ ಈಕ್ವಿಟಿ ಬಂಡವಾಳವನ್ನು ಹಾಗೂ 71.50 ಕೋಟಿ ರೂ.ಗಳ ಬಡ್ಡಿ ಸಹಾಯಧನದ ನೆರವನ್ನು ಒದಗಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉದ್ಯಮಿಗಳು ಸ್ಥಾಪಿಸುವ ಜವಳಿ ಮತ್ತು ಕೈಮಗ್ಗ ಘಟಕಗಳಿಗೆ ವಿಶೇಷ ಹಣಕಾಸು ಯೋಜನೆಯಡಿಯಲ್ಲಿ ಕರ್ನಾಟಕ ಸರಕಾರ 20.12 ಕೋಟಿ ರೂ. ಗಳ ಅನುದಾನ ಬಿಡುಗಡೆ ಮಾಡಿದೆ ಎಂದವರು ವಿವರಿಸಿದರು.

2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯು 600 ಕೋಟಿ ರೂ. ಗಳ ಮಂಜೂರಾತಿ ಗುರಿಯನ್ನು ಹೊಂದಿದೆ. ರಾಜ್ಯ ಸರಕಾರ ಬಡ್ಡಿ ಸಹಾಯಧನ ಯೋಜನೆಗಳ ಯಶಸ್ವಿ ಅನುಷ್ಠಾನದೊಂದಿಗೆ ಸಮಾಜದ ವಿವಿಧ ವರ್ಗಗಳಿಂದ ಸ್ಥಾಪಿಸಲ್ಪಡುವ ಎಂಎಸ್‌ಎಂಇಗಳಿಗೆ ಪರಿಷ್ಕೃತ ನಿರೂಪಣೆ ಜು.1ರಿಂದ ಜಾರಿಗೊಂಡಿದೆ. ಅನುತ್ಪಾದಕ ಆಸ್ತಿಗಳನ್ನು ಮತ್ತಷ್ಟು ಕಡಿಮೆಗೊಳಿಸಲು ಸಂಸ್ಥೆಯು ಹೆಚ್ಚಿನ ಒತ್ತು ನೀಡಲಿದೆ ಎಂದು ಕೆಎಸ್‌ಎಫ್‌ಸಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X