Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲ್ಲಿ ಕೃಷಿ ಸ್ಟಾರ್ಟಪ್...

ರಾಜ್ಯದಲ್ಲ್ಲಿ ಕೃಷಿ ಸ್ಟಾರ್ಟಪ್ ಕಾರ್ಯಾಗಾರ: ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ19 Aug 2020 9:29 PM IST
share
ರಾಜ್ಯದಲ್ಲ್ಲಿ ಕೃಷಿ ಸ್ಟಾರ್ಟಪ್ ಕಾರ್ಯಾಗಾರ: ಬಿ.ಸಿ.ಪಾಟೀಲ್

ಬೆಂಗಳೂರು, ಆ.19: ಸ್ಟಾರ್ಟಪ್ ಹಬ್ ಆಗಿ ರೂಪುಗೊಳ್ಳುತ್ತಿರುವ ನಮ್ಮ ರಾಜ್ಯವು ದೇಶದ ಗಮನ ಸೆಳೆಯುತ್ತಿದ್ದು, ಹೊಸ ಸಾಧ್ಯತೆಗಳ ಸವಾಲುಗಳ ಬೆನ್ನತ್ತಿ ಕೃಷಿ ಕ್ಷೇತ್ರವೂ ಮುಂಚೂಣಿಯಲ್ಲಿದೆ. ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯ ಹೊಸ ತಲೆಮಾರಿನ ಚಿಂತನೆಗಳಿಗೆ ವೇದಿಕೆಯಾಗಲು ಬೆಂಗಳೂರಿನಲ್ಲಿ ಕೃಷಿ ಸ್ಟಾರ್ಟಪ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಆ.21 ರಂದು ವಿಕಾಸಸೌಧದ ಸಮ್ಮೇಳನ ಸಭಾಂಗಣ ಕೊಠಡಿ ಸಂಖ್ಯೆ 419ರಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ‘ವರ್ಚುವಲ್ ಮೋಡ್ ಆನ್‍ಲೈನ್’ ಮೂಲಕ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳು, ಆಹಾರ ಸಂಸ್ಕರಣಾ ಉದ್ದಿಮೆಗಳ ವ್ಯಾಪ್ತಿ ಹಾಗೂ ಅವಕಾಶಗಳು, ಆಧುನಿಕ ತಂತ್ರಜ್ಞಾನ ಆಧಾರಿತ ಕೃಷಿ ಕುರಿತು ಮಾಹಿತಿ ವಿನಿಯಮ, ಚರ್ಚೆ, ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟಪ್‍ನ ಮಹತ್ವ, ರೈತರಿಗಾಗುವ ಲಾಭ ಸೇರಿದಂತೆ ಮತ್ತಿತರ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಹಾಗೂ ದೇಶದ ವಿವಿಧ ಭಾಗಗಳ 100ಕ್ಕೂ ಹೆಚ್ಚು ಕೃಷಿ ಸ್ಟಾರ್ಟಪ್ ಉದ್ದಿಮೆಗಳು, ಹೂಡಿಕೆದಾರರು ಆನ್‍ಲೈನ್ ಮೂಲಕ ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ.

ದೇಶದಲ್ಲಿ ಹತ್ತು ವರ್ಷಗಳಿಂದ ವಾರ್ಷಿಕವಾಗಿ ಸುಮಾರು 6 ಬಿಲಿಯನ್ ಡಾಲರ್ ಮೊತ್ತದ ಬಂಡವಾಳವನ್ನು ನವೋದ್ಯಮದಲ್ಲಿ ಹೂಡಿಕೆ ಮಾಡಲಾಗಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಕೃಷಿ ಮಾರುಕಟ್ಟೆ ಕ್ರಾಂತಿಗೆ ಸ್ಟಾರ್ಟಪ್ ಬಹುಮುಖ್ಯ ವೇದಿಕೆಯಾಗಲಿದ್ದು, ಉತ್ಪಾದನೆ ವೆಚ್ಚಕ್ಕನುಗುಣವಾಗಿ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಅಧಿಕ ಉತ್ಪಾದನೆಯ ಸಮಸ್ಯೆ ನಿವಾರಣೆಗೆ ಮಾರುಕಟ್ಟೆ ಕ್ರಾಂತಿ ತರಲು ನವೋದ್ಯಮ(ಸ್ಟಾರ್ಟಪ್)ಗಳನ್ನು ಪ್ರೋತ್ಸಾಹಿಸಲು ಈ ಹೆಜ್ಜೆಯಿಡಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಉತ್ಪನ್ನಗಳನ್ನು ತಲುಪಿಸಲು, ಗ್ರಾಹಕರು ನೀಡುವ ಬೆಲೆ ರೈತರಿಗೆ ಸಿಗುವಂತೆ ಮಾಡಲು ಸ್ಟಾರ್ಟಪ್ ಉತ್ತಮ ಸೇತುವೆಯಾಗಲಿದೆ. ಜತೆಗೆ ಜನರೊಂದಿಗೆ ರೈತರಿಗೆ ಸಂಪರ್ಕ ಕಲ್ಪಿಸುವ ವೇದಿಕೆಯೂ ಆಗಲಿದೆ ಎಂದು ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಅಗ್ರಿಟೆಕ್ ಸ್ಟಾರ್ಟಪ್‍ಗಳಿಗೆ 2020ನೇ ಸಾಲಿನಲ್ಲಿ 4.5 ಬಿಲಿಯನ್ ಡಾಲರ್ ಮೊತ್ತದ ಮಾರುಕಟ್ಟೆ ಸೃಷ್ಟಿಯಾಗುವ ನಿರೀಕ್ಷೆಯಿದೆ. ಕಾರ್ಯಾಗಾರದಲ್ಲಿ ಸ್ಟಾರ್ಟಪ್ ಉದ್ದಿಮೆದಾರರ ಜೊತೆ ಚರ್ಚಿಸಿ ಅಭಿವ್ಯಕ್ತವಾಗುವ ಸಲಹೆ ಸೂಚನೆಗಳನ್ನು ಪರಿಶೀಲಿಸಿ ಕೃಷಿ ಮಾರುಕಟ್ಟೆ, ರೈತರಿಗೆ ಹಾಗೂ ಕೃಷಿ ಕ್ಷೇತ್ರದಲ್ಲಿ ಅನುಕೂಲ ಕಲ್ಪಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X