Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ಸನ್ನು ಟೀಕಿಸಿ ವಾಟ್ಸ್ಯಾಪ್...

ಆರೆಸ್ಸೆಸ್ಸನ್ನು ಟೀಕಿಸಿ ವಾಟ್ಸ್ಯಾಪ್ ಸ್ಟೇಟಸ್: ಪತ್ರಿಕೋದ್ಯಮ ವಿದ್ಯಾರ್ಥಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ19 Aug 2020 10:27 PM IST
share
ಆರೆಸ್ಸೆಸ್ಸನ್ನು ಟೀಕಿಸಿ ವಾಟ್ಸ್ಯಾಪ್ ಸ್ಟೇಟಸ್: ಪತ್ರಿಕೋದ್ಯಮ ವಿದ್ಯಾರ್ಥಿಯ ಬಂಧನ

ಹೊಸದಿಲ್ಲಿ,ಆ.19: ಆರೆಸ್ಸೆಸ್ಸನ್ನು ಟೀಕಿಸುವ ವಾಟ್ಸ್ಯಾಪ್ ಸ್ಟೇಟಸ್ ಪ್ರಸಾರ ಮಾಡಿದ ಪತ್ರಿಕೋದ್ಯಮದ ಯುವ ವಿದ್ಯಾರ್ಥಿಯೊಬ್ಬನನ್ನು ಉತ್ತರಪ್ರದೇಶ ಪೊಲೀಸರು 12 ತಾಸುಗಳ ಕಾಲ ಬಂಧನದಲ್ಲಿರಿಸಿದ ಘಟನೆ ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನದ ರಾತ್ರಿ ನಡೆದಿದೆ.

     ಹೈದರಾಬಾದ್‌ನ ಮೌಲಾನಾ ಆಝಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮದ ಮೊದಲ ವರ್ಷದ ವಿದ್ಯಾರ್ಥಿ ಮುಹಮ್ಮದ್ ಮಿಸ್‌ಬಾಹ್ ಝಫರ್ ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕ. ಆಗಸ್ಟ್ 15ರಂದು ಸಂಜೆ ‘ಸ್ವಾತಂತ್ರ್ಯೋತ್ಸವದ ಸಂದೇಶ’ ಎಂಬ ಫೇಸ್‌ಬುಕ್ ಲೈವ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಲೀಂ ತುಮಕೂರು ಅವರು ಭಾಷಣ ನೀಡುವವರಿದ್ದರು. ಈ ಕಾರ್ಯಕ್ರಮಕ್ಕಾಗಿ ‘ಆರೆಸ್ಸೆಸ್ ಸೆ ಆಝಾದಿ ಹಾಗೂ ಹಿಂದುತ್ವ ಗವರ್ನ್‌ಮೆಂಟ್ಸೆ ಆಝಾದಿ’ ಎಂಬ ಹ್ಯಾಶ್‌ಟ್ಯಾಗ್‌ನಡಿ ಟ್ವಿಟರ್ ಅಭಿಯಾನವನ್ನು ಝಫರ್ ವಾಟ್ಸ್ಯಾಪ್ ಸ್ಟೇಟಸ್‌ನಲ್ಲಿ ಪ್ರಸಾರ ಮಾಡಿದ್ದರು.

       ‘‘ಆಗಸ್ಟ್ 15ರ ಮಧ್ಯರಾತ್ರಿ ಮುಂಜಾನೆ 2:20ರ ವೇಳೆಗೆ ಝಫರ್ ನಿವಾಸಕ್ಕೆ ಪೊಲೀಸರು ಆಗಮಿಸಿದ್ದರು. “ಬಾಗಿಲು ತೆರೆದ ನನ್ನ ಸಹೋದರನನ್ನು ಪ್ರಶ್ನಿಸಿದ ಪೊಲೀಸರು ಝಫರ್‌ಗೆ ಆಜಾದಿ ಬೇಕಾದರೆ, ಜೈಲಿಗೆ ಹೋಗಬಹುದು. ಆತನಿಗೆ ನಾವು ಸ್ವಾತಂತ್ರ ಕೊಡುತ್ತೇವೆ” ಎಂದು ಹೇಳಿದರು. ಪೊಲೀಸ್ ಠಾಣೆಗೆ ಕರೆದೊಯ್ಯುವಾಗ,ದಾರಿಯಲ್ಲಿ ಅವರು ತನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿದರು ಹಾಗೂ ಹಲ್ಲೆ ನಡೆಸಿದರು. ‘ನಿನಗೆ ಭಾರತದಲ್ಲಿ ಇಮ್ರಾನ್ ಖಾನ್‌ನ ಕಾನೂನು ಜಾರಿಗೆ ತರಬೇಕೇ?, ನಿನ್ನ ಹಿಂದೆ ಯಾವ ಸಂಘಟನೆಯಿದೆ?’ ಎಂದು ಪ್ರಶ್ನಿಸಿದ್ದರು. “ನಾನು ಕೇವಲ ಸರಕಾರವನ್ನಷ್ಟೇ ಟೀಕಿಸಿದ್ದೇನೆ. ಅದು ದೇಶವಿರೋಧಿಯೆಂದು ನೀವು ಭಾವಿಸುವುದಾದರೆ ಅದು ನಿಮ್ಮ ಸಮಸ್ಯೆಯಷ್ಟೇ” ಎಂದು ತಾನು ಹೇಳಿದ್ದಾಗಿ ಝಫರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

  ಝಫರ್‌ರನ್ನು ಪೊಲೀಸ್ ಠಾಣೆಯಲ್ಲಿ 12 ತಾಸುಗಳ ಕಾಲ ಬಂಧನದಲ್ಲಿರಿಸಿದ್ದರು. ತನ್ನ ವಾಟ್ಸ್ಯಾಪ್ ಪೋಸ್ಟ್‌ಗಾಗಿ ಕ್ಷಮೆಯಾಚಿಸುವಂತೆ ತಿಳಿಸಿದರು. ಆದರೆ ತಾನು ಏನೂ ತಪ್ಪು ಮಾಡದಿರುವಾಗ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲವೆಂದು ಝಫರ್ ತಿಳಿಸಿದರು. ಇದರಿಂದ ಕೆರಳಿದ ಪೊಲೀಸರು, ತನ್ನ ವಿರುದ್ಧ ದೇಶದ್ರೋಹದ ಆರೋಪ ಹೊರಿಸುವುದಾಗಿ ಹಾಗೂ ತನ್ನ ತಂದೆಯ ಆಸ್ತಿ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ್ದರೆಂದು ತಿಳಿಸಿದರು.

ಮರುದಿನ ಕ್ರಿಮಿನಲ್ ದಂಡಸಂಹಿತೆಯ 151ನೆ ಸೆಕ್ಷನ್ ಅನ್ವಯ ಜಿಲ್ಲಾ ಮ್ಯಾಜಿಸ್ಟ್ರೇಟರ ಸಮಕ್ಷಮದಲ್ಲಿ ಹಾಜರುಪಡಿಸಿದ ಬಳಿಕವಷ್ಟೇ ತನಗೆ ಮನೆಗೆ ತೆರಳಲು ಅನುಮತಿ ನೀಡಲಾಯಿತೆಂದು ಝಫರ್ ತಿಳಿಸಿದ್ದಾರೆ. ತಾನು ಯಾವುದೇ ಅಪರಾಧವೆಸಗದಿದ್ದರೂ 12 ತಾಸುಗಳ ಕಾಲ ಬಂಧನದಲ್ಲಿಟ್ಟಿರುವುದು ಯಾವ ನ್ಯಾಯ ಎಂದು ಝಫರ್ ನೋವಿನಿಂದ ಪ್ರಶ್ನಿಸಿದ್ದಾರೆ.

ಆದರೆ ಝಫರ್ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲವೆಂದು ಜರ್ವಾಲ್ ರೋಡ್ ಪೊಲೀಸ್ ಠಾಣಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಆತನ್ನು ಸಾಮಾನ್ಯವಾಗಿ ಪೊಲೀಸ್ ಠಾಣೆಗೆ ಕರೆಯಿಸಿಕೊಳ್ಳಲಾಗಿದೆ ಹಾಗೂ ಭವಿಷ್ಯದಲ್ಲಿ ಜನರ ಭಾವನೆಗಳಿಗೆ ನೋವುಂಟು ಮಾಡಬಾರದೆಂದು ಕಿವಿಮಾತು ಹೇಳಿದ್ದಾಗಿ ಠಾಣಾಧಿಕಾರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X