ಕೊಣಾಜೆ: ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಉಚಿತ ನೋಂದಾವಣೆ ಕಾರ್ಯಕ್ರಮ
ಕೊಣಾಜೆ: ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ, ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಕೋಡಿಜಾಲ್ ಹಾಗೂ ವೈಎಫ್ ಸಿ ಕೊಣಾಜೆ ಇದರ ಜಂಟಿ ಸಹಭಾಗಿತ್ವದಲ್ಲಿ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ಉಚಿತ ನೋಂದಾವಣಾ ಕಾರ್ಯಕ್ರಮವು ಆ. 23ರಂದು ಬೆಳಗ್ಗೆ 8 ರಿಂದ ಸಂಜೆ 5 ರ ತನಕ ಕೊಣಾಜೆಯ ಮಂಗಳ ಗ್ರಾಮೀಣ ಯುವಕ ಸಂಘದ ಕಚೇರಿಯಲ್ಲಿ ನಡೆಯಲಿದೆ.
ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಕೋವಿಡ್-19 ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿಕೊಂಡು ಬರಬೇಕು. ಕೊಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ 1 ಮತ್ತು 2 ನೇ ವಾರ್ಡ್ ನ 5 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ (ಪಡಿತರ ಚೀಟಿ) ದಾಖಲೆಗಳೊಂದಿಗೆ ಈ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ನ ಸೌಲಭ್ಯವನ್ನು ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ : 9845174265, 9743144601, 9036971844, 9964071504 ಸಂಪರ್ಕಿಸಬಹುದು.
Next Story