ಉಡುಪಿ: ಗಾಂಜಾ ಮಾರಾಟ; ನಾಲ್ವರ ಬಂಧನ
ಉಡುಪಿ, ಆ.20: ಬ್ರಹ್ಮಾವರ ಧರ್ಮಾವರಂ ಆಡಿಟೋರಿಯಂನ ಬಳಿ ಆ.20ರಂದು ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರಿದ್ರಾವತಿಯ ಆಸೀಫ್ ಬಾಷಾ(38) ಹಾಗೂ ರಿಯಾಜ್(29) ಬಂಧಿತ ಆರೋಪಿಗಳು. ಇವರಿಂದ 60,000ರೂ. ಮೌಲ್ಯದ 2ಕಿಲೋ 038 ಗ್ರಾಂ ತೂಕದ ಗಾಂಜಾ, 3,500ರೂ. ಮೌಲ್ಯದ 2 ಮೊಬೈಲ್ ಮತ್ತು 2,50,000ರೂ. ಮೌಲ್ಯದ ಮಾರುತಿ ಡಿಝಾಯರ್ ಕಾರು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಜಪ್ತಿ ಗ್ರಾಮದ ಇಂಬಾಳಿಯ ಕೃಷ್ಣಯ್ಯ ಶೆಟ್ಟಿ ಎಂಬವರಿಗೆ ಸೇರಿದ ಶೆಡ್ಡಿನಲ್ಲಿ ಆ.20ರಂದು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕಂಡ್ಲೂರು ಜೆಎಂ ರಸ್ತೆಯ ಕರಾಣಿ ಮಹಮ್ಮದ್ ನದೀಮ್(25) ಹಾಗೂ ಬೆಟ್ಟಿ ಮಹಮ್ಮದ್ ಅಫ್ಜಲ್(28) ಬಂಧಿತ ಆರೋಪಿಗಳು. ದಾಳಿ ವೇಳೆ ರಯಾನ್ ಎಂಬಾತ ಪರಾರಿಯಾಗಿದ್ದಾನೆ. ಬಂಧಿತರಿಂದ 8ಸಾವಿರ ರೂ. ಮೌಲ್ಯದ 360ಗ್ರಾಂ ಗಾಂಜಾ ಹಾಗೂ ಎರಡು ಬೈಕ್, ಎರಡು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.