Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದು ಗಾಂಧೀಜಿಯವರ ಭಾರತವಲ್ಲ:...

ಇದು ಗಾಂಧೀಜಿಯವರ ಭಾರತವಲ್ಲ: ಸಂದರ್ಶನದಲ್ಲಿ ಫಾರೂಕ್ ಅಬ್ದುಲ್ಲಾ

ವಾರ್ತಾಭಾರತಿವಾರ್ತಾಭಾರತಿ21 Aug 2020 9:16 PM IST
share
ಇದು ಗಾಂಧೀಜಿಯವರ ಭಾರತವಲ್ಲ: ಸಂದರ್ಶನದಲ್ಲಿ ಫಾರೂಕ್ ಅಬ್ದುಲ್ಲಾ

 ಹೊಸದಿಲ್ಲಿ, ಆ.22: ಕಳೆದ ವರ್ಷದ ಆಗಸ್ಟ್‌ನಲ್ಲಿ ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೆಲವೇ ದಿನಗಳ ಮುನ್ನ ತಾನು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನಾದರೂ, ಆ ಸಂದರ್ಭದಲ್ಲಿ ಅವರು ಕೇಂದ್ರ ಸರಕಾರದ ನಡೆಯ ಬಗ್ಗೆ ಯಾವುದೇ ಸುಳಿವನ್ನು ನೀಡಿರಲಿಲ್ಲವೆಂದು ನ್ಯಾಶನಲ್ ಕಾನ್ಫರೆನ್ಸ್ ನಾಯಕ, ಮಾಜಿ ಕೇಂದ್ರ ಸಚಿವ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.

ಬಂಧನದಿಂದ ಬಿಡುಗಡೆಗೊಂಡ ಬಳಿಕ ಮೊದಲ ಬಾರಿಗೆ NDTVಗೆ ಸಂದರ್ಶನ ನೀಡಿದ ಅವರು, ‘‘ ಯಾರಿಗೂ ಇನ್ನು ಮುಂದೆ ಭಾರತ ಸರಕಾರದ ಮೇಲೆ ನಂಬಿಕೆಯಿಡಲು ಸಾಧ್ಯವಿಲ್ಲ. ಅವರು ಸುಳ್ಳು ಹೇಳದ ಒಂದೇ ದಿನವೂ ಇರಲಾರದು. ಈಗ ಇದು ಗಾಂಧೀಜಿಯವರ ಭಾರತವಲ್ಲ ’’ಎಂದು ಹೇಳಿದ್ದಾರೆ.

‘‘ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಮುನ್ನ ಭಾರೀ ಸಂಖ್ಯೆಯಲ್ಲಿ ಸೇನಾಪಡೆಗಳು ಅಲ್ಲಿ ನಿಯೋಜನೆಗೊಳ್ಳುವುದಕ್ಕೆ ಒಂದು ದಿನ ಮೊದಲು ತಾನು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದೆ. ಆದರೆ ಪ್ರಧಾನಿ ನನಗೆ ಯಾವುದೇ ಸುಳಿವನ್ನು ನೀಡಲಿಲ್ಲ. ಭಾರೀ ಸಂಖ್ಯೆಯ ಸೈನಿಕರನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ. ಪ್ರವಾಸಿಗರನ್ನು ಹೊರಕಳುಹಿಸಲಾಗುತ್ತಿದೆ, ಅಮರನಾಥ ಯಾತ್ರೆಯನ್ನು ರದ್ದುಪಡಿಸಲಾಗಿದೆ. ಇವೆಲ್ಲದರ ಅಗತ್ಯವಿತ್ತೇ. ಪಾಕಿಸ್ತಾನದ ಜೊತೆ ಯುದ್ಧ ಅಥವಾ ಇನ್ನೇನೂ ನಡೆಯಲಿರುವ ಹಾಗೆ ಭಾಸವಾಗುತ್ತಿದೆ ’’ಎಂದು ತಾನು ಅವರಿಗೆ ತಿಳಿಸಿದ್ದಾಗಿ ಫಾರೂಕ್ ಸಂದರ್ಶನದಲ್ಲಿ ಹೇಳಿದ್ದಾರೆ.

  “ಆದರೆ ಪ್ರಧಾನಿ ಈ ಬಗ್ಗೆ ಏನೂ ಹೇಳಲಿಲ್ಲ. ಆದರೆ ಅವರು ನನ್ನ ಚಿಂತನೆಗೆ ಬಾರದ ಇತರ ವಿಷಯಗಳ ಬಗ್ಗೆ ಮಾತನಾಡಿದರು” ಎಂದರು. ಈಗ ತಾವು ಪ್ರಧಾನಿಯವರಿಗೆ ಏನನ್ನು ಹೇಳಲು ಬಯಸುವಿರಿ ಎಂಬ ಸಂದರ್ಶಕರ ಪ್ರಶ್ನೆಗೆ ಉತ್ತರಿಸಿದ ಅವರು, ‘‘ ಪ್ರಧಾನಿಯವರು ಇನ್ನೂ ಹೆಚ್ಚು ಪ್ರಾಮಾಣಿಕರಾಗಬೇಕು ಹಾಗೂ ವಾಸ್ತವಾಂಶಗಳನ್ನು ಎದುರಿಸಬೇಕು. ತಾನು ಮಾಡಿರುವುದು ಸರಿಯಲ್ಲವೆಂದು ಅವರಿಗೆ ಗೊತ್ತಿದೆ’’ ಎಂದರು.

  ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಬೆನ್ನಲ್ಲೇ ಕೇಂದ್ರ ಸರಕಾರವು 83 ವರ್ಷ ವಯಸ್ಸಿನ ಫಾರೂಕ್ ಅಬ್ದುಲ್ಲಾ, ಅವರ ಪುತ್ರಿ ಉಮರ್ ಅಬ್ದುಲ್ಲಾ ಹಾಗೂ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಸೇರಿದಂತೆ ಹಲವಾರು ಕಾಶ್ಮೀರಿ ನಾಯಕರನ್ನು ಸಾರ್ವಜನಿಕ ಸುರಕ್ಷಿತ ಕಾಯ್ದೆಯಡಿ ಗೃಹಬಂಧನದಲ್ಲಿರಿಸಿತ್ತು. ಸುಮಾರು ಏಳು ತಿಂಗಳುಗಳ ಬಂಧನದ ಬಳಿಕ ಫಾರೂಕ್ ಅವರನ್ನು ಬಿಡುಗಡೆಗೊಳಿಸಿತ್ತು.

 ‘‘ ನಾವು ಯಾವತ್ತೂ ದೇಶದ ಪರವಾಗಿಯೇ ನಿಂತಿದ್ದೇವೆ. ಆದರೂ, ನಮಗೆ ಹೀಗಾಗುವುದೆಂದು ನಾವು ಯಾವತ್ತೂ ಯೋಚಿಸಿರಲಿಲ್ಲ. ಪ್ರತ್ಯೇಕವಾದಿಗಳಿಗಿಂತ ಭಿನ್ನವಾಗಿ ನಮ್ಮನ್ನು ಸರಕಾರವು ಕಾಣಲಿಲ್ಲವೆಂದು” ಅವರು ವಿಷಾದಿಸಿದರು.

ತನ್ನ ಬಂಧನದ ಬಗ್ಗೆ ಸಾರ್ವಜನಿಕರಲ್ಲಿ ಅನುಕಂಪದ ಕೊರತೆಯಿತ್ತು ಎಂಬ ಅನಿಸಿಕೆ ಉತ್ತರಿಸಿದ ಫಾರೂಕ್ ಅಬ್ದುಲ್ಲಾ, ‘‘ ಇಲ್ಲಿನ ಹಲವಾರು ಮಂದಿ ಭಾರತದ ಮೇಲೆ ವಿಶ್ವಾಸವಿರಿಸಿದ್ದಕ್ಕಾಗಿ ನಿಮಗೆ ದೊರೆತ ಪ್ರತಿಫಲ ಇದಾಗಿದೆ ಎಂಬುದಾಗಿ ಭಾವಿಸಿದ್ದಾರೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X