Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸದೀಯ ಸಮಿತಿಯಿಂದ ಫೇಸ್‌ಬುಕ್ ವಿಚಾರಣೆ

ಸಂಸದೀಯ ಸಮಿತಿಯಿಂದ ಫೇಸ್‌ಬುಕ್ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ21 Aug 2020 11:14 PM IST
share
ಸಂಸದೀಯ ಸಮಿತಿಯಿಂದ ಫೇಸ್‌ಬುಕ್ ವಿಚಾರಣೆ

ಹೊಸದಿಲ್ಲಿ,ಆ.21: ಫೇಸ್‌ಬುಕ್‌ನಿಂದ ರಾಜಕೀಯ ವಿವಾದಾತ್ಮಕ ಸುದ್ದಿಗಳ ನಿರ್ವಹಣೆ ಕುರಿತು ಸೃಷ್ಟಿಯಾಗಿರುವ ವಿವಾದದ ಹಿನ್ನಲೆಯಲ್ಲಿ,ಅದು ಭಾರತದಲ್ಲಿ ರಾಜಕೀಯ ವಿಷಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎನ್ನುವುದರ ಬಗ್ಗೆ ಮಾಹಿತಿ ತಂತ್ರಜ್ಞಾನ ಕುರಿತ ಸಂಸದೀಯ ಸಮಿತಿಯು ಕಂಪನಿಯ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಲಿದೆ ಎಂದು ಸಮಿತಿಯ ಸದಸ್ಯರೋರ್ವರು ಶುಕ್ರವಾರ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಅಮೆರಿಕದ ವಾಲ್‌ಸ್ಟ್ರೀಟ್ ಜರ್ನಲ್ ಫೇಸ್‌ಬುಕ್ ಕುರಿತು ವರದಿಯೊಂದನ್ನು ಪ್ರಕಟಿಸಿದ ಬಳಿಕ ಕಂಪನಿ ಮತ್ತು ಅದರ ಭಾರತೀಯ ಮುಖ್ಯಸ್ಥೆ ಅಂಖಿ ದಾಸ್ ಅವರು ತೀವ್ರ ಟೀಕೆಗೊಳಗಾಗಿದ್ದಾರೆ. ಆಡಳಿತಾರೂಢ ಪಕ್ಷದ ರಾಜಕಾರಣಿಗಳಿಗೆ ದ್ವೇಷಭಾಷಣ ನಿಯಮಗಳನ್ನು ಅನ್ವಯಿಸುವುದನ್ನು ದಾಸ್ ವಿರೋಧಿಸಿದ್ದರು ಎಂದು ವರದಿಯು ತಿಳಿಸಿತ್ತು.

ಸೆ.2ರಂದು ಸಮಿತಿಯ ಎದುರು ಹಾಜರಾಗುವಂತೆ ಗುರುವಾರ ಫೇಸ್‌ಬುಕ್‌ಗೆ ನೋಟಿಸ್ ಹೊರಡಿಸಲಾಗಿದ್ದು,ವಿವಾದಾತ್ಮಕ ರಾಜಕೀಯ ವಿಷಯಗಳಿಗೆ ಸಂಬಂಧಿಸಿದಂತೆ 30 ನಿಮಿಷಗಳ ಕಾಲ ಪ್ರಶ್ನಿಸಲಾಗುವುದು ಎಂದು ತಿಳಿಸಲಾಗಿದೆ.

 ಭಾರತದಲ್ಲಿ ಫೇಸ್‌ಬುಕ್‌ನ ವ್ಯಾಪಕತೆಯ ಹಿನ್ನೆಲೆಯಲ್ಲಿ ಮತ್ತು ಹಿಂಸೆ ಹಾಗೂ ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರಚೋದಿಸುವ ದ್ವೇಷ ಭಾಷಣಗಳ ಸಾಮರ್ಥ್ಯದಿಂದಾಗಿ ಇದೊಂದು ಗಂಭೀರ ವಿಷಯವಾಗಿದೆ ಎಂದು ಹೆಸರು ಹೇಳಿಕೊಳ್ಳಲು ಬಯಸದ ಸಮಿತಿ ಸದಸ್ಯರು ತಿಳಿಸಿದರು.

ವಿಚಾರಣಾ ಪ್ರಕ್ರಿಯೆ ಮುಗಿದ ಬಳಿಕ ಈ ವಿಷಯವು ಎಷ್ಟು ಕಳವಳಕಾರಿಯಾಗಿದೆ ಎನ್ನುವುದನ್ನು ನಿರ್ಧರಿಸಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಷದ ರಾಜಕಾರಣಿಗಳಿಗೆ ದ್ವೇಷ ಭಾಷಣ ನಿಯಮಗಳನ್ನು ಅನ್ವಯಿಸುವುದರಿಂದ ಭಾರತದಲ್ಲಿ ಕಂಪನಿಯ ವ್ಯವಹಾರಕ್ಕೆ ಹಾನಿಯುಂಟಾಗುತ್ತದೆ ಎಂದು ದಾಸ್ ಸಿಬ್ಬಂದಿಗಳಿಗೆ ತಿಳಿಸಿದ್ದಾಗಿ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.

ಫೇಸ್‌ಬುಕ್‌ನ ನೀತಿಗಳಿಗಾಗಿ ಪ್ರತಿಪಕ್ಷ ಕಾಂಗ್ರೆಸ್ ಅದನ್ನು ಟೀಕಿಸಿದ್ದರೆ,ಅದು ರಾಷ್ಟ್ರವಾದಿ ಧ್ವನಿಗಳನ್ನು ಸೆನ್ಸಾರ್ ಮಾಡುತ್ತಿದೆ ಎಂದು ಆಡಳಿತ ಪಕ್ಷದ ಕೆಲವು ಸಂಸದರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X