ಆ.27ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಆ. 23: ರಾಜ್ಯದ ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಆ.23ರಿಂದ ಆ.27ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಸಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಈ ವಾರ ಮೋಡ ಕವಿದ ವಾತಾವರಣ ಇರಲಿದ್ದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಏನಾದರೂ ಸಮಸ್ಯೆಯಾದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
ವಲಯವಾರು ಬಿಬಿಎಂಪಿ ಸಹಾಯವಾಣಿ ಸಂಖ್ಯೆ: ಆರ್.ಆರ್ ನಗರ-080-2860 0954, ಬೊಮ್ಮನಹಳ್ಳಿ-080 -2573 5643, ದಾಸರಹಳ್ಳಿ-080-2839 3688, ಯಲಹಂಕ-080- 2363 6671, ಮಹದೇವಪುರ-080 -2851 2301, ದಕ್ಷಿಣ ವಲಯ-080 - 2656 6362, ಪಶ್ಚಿಮ ವಲಯ-080- 2346 3366, ಪೂರ್ವ ವಲಯ-080 2297 580. ಸಂಪರ್ಕಿಸಬಹುದಾಗಿದೆ.







