Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿಯಿಂದ...

ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿಯಿಂದ ಹೊಸ ಪಕ್ಷ: ಸಿಎಎ ಹೋರಾಟಗಾರ ಅಖಿಲ್ ಗೊಗೋಯಿ ಸಿಎಂ ಅಭ್ಯರ್ಥಿ

ಅಸ್ಸಾಂ ವಿಧಾನಸಭಾ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ23 Aug 2020 7:57 PM IST
share
ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿಯಿಂದ ಹೊಸ ಪಕ್ಷ: ಸಿಎಎ ಹೋರಾಟಗಾರ ಅಖಿಲ್ ಗೊಗೋಯಿ ಸಿಎಂ ಅಭ್ಯರ್ಥಿ

ಗುವಾಹಟಿ, ಆ. 23: ಮುಂಬರುವ ಅಸ್ಸಾಂ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜಕೀಯ ಪಕ್ಷ ರೂಪಿಸಲಾಗುವುದು ಹಾಗೂ ಕಾರಾಗೃಹದಲ್ಲಿರುವ ಸಂಘಟನೆಯ ನಾಯಕ ಅಖಿಲ್ ಗೊಗೋಯಿ ಅವರು ಮುಖ್ಯಮಂತ್ರಿ ಅಭ್ಯರ್ಥಿ ಆಗಿರಲಿದ್ದಾರೆ ಎಂದು ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್‌ಎಸ್) ಶನಿವಾರ ಪ್ರಕಟಿಸಿದೆ.

 ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೃಷಿಕ ಮುಕ್ತಿ ಸಂಗ್ರಾಮ ಸಮಿತಿ ಅಧ್ಯಕ್ಷ ಭಾಸ್ಕೊ ಡೆ ಸೈಕಿಯಾ ಅವರು, ಅಖಿಲ್ ಗೊಗೋಯಿ ಅವರು ಕಾರಾಗೃಹದಿಂದ ಬಿಡುಗಡೆಯಾದ ಬಳಿಕ ಪಕ್ಷದ ಹೆಸರು ಘೋಷಿಸಲಿದ್ದಾರೆ ಎಂದರು.

“ನಾವು ನೂತನ ರಾಜಕೀಯ ಪಕ್ಷ ರೂಪಿಸಲು ಸಿದ್ಧರಾಗುತ್ತಿದ್ದೇವೆ. ಇದು ಪ್ರಾದೇಶಿಕ ಪಕ್ಷ. ಎಲ್ಲ ಬುಡಕಟ್ಟು, ಜಾತಿ, ಸಮುದಾಯ, ಧರ್ಮ ಹಾಗೂ ಭಾಷೆಗಳ ಜನರು ಈ ಪಕ್ಷದ ಭಾಗವಾಗಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ನೂತನ ಪಕ್ಷ ಯಾವುದಕ್ಕೂ ರಾಜಿ ಮಾಡಿಕೊಳ್ಳದ ರಾಜಕೀಯ ಪಕ್ಷ. ಇದಕ್ಕೆ ಕೃಷಿಕ್ ಮುಕ್ತಿ ಸಂಗ್ರಾಮ ಸಮಿತಿಯ ಹಿಂದಿನ ಪ್ರಯತ್ನವಾದ ಗಣ ಮುಕ್ತಿ ಸಂಗ್ರಾಮ್-ಅಸ್ಸಾಂ ಎಂದು ಹೆಸರು ಇರಿಸುವುದಿಲ್ಲ. ಹೊಸ ಹೆಸರು ಇರಿಸಲಾಗುವುದು ಎಂದರು.

“ಅಕ್ಟೋಬರ್ ಒಳಗೆ ಅಖಿಲ್ ಗೊಗೋಯಿ ಅವರು ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ ಎಂಬುದು ನಮ್ಮ ನಿರೀಕ್ಷೆ. ನಮಗೆ ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಂಬಿಕೆ ಇದೆ. ಕಾರಾಗೃಹದಿಂದ ಬಿಡುಗಡೆಯಾದ ಬಳಿಕ ಅವರು ನೂತನ ಪಕ್ಷದ ಹೆಸರನ್ನು ಘೋಷಿಸಲಿದ್ದಾರೆ. ಪಕ್ಷದ ಹೆಸರನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ” ಎಂದು ಅವರು ತಿಳಿಸಿದರು.

ನೂತನ ಪಕ್ಷದ ಕೆಲಸದ ಕಾರ್ಯಸೂಚಿ ಹಾಗೂ ಸಂವಿಧಾನದಂತಹ ಎಲ್ಲ ಬೌದ್ಧಿಕ ಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿದೆ ಎಂದು ಅವರು ಹೇಳಿದರು.

“ಅಖಿಲ್ ಗೊಗೋಯಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ?” ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹೌದು, ಅಖಿಲ್ ಗೊಗೋಯಿ ಅವರು 2021ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಅವರು ಮುಖ್ಯಮಂತ್ರಿ ಅಭ್ಯರ್ಥಿ ಆಗಿರಲಿದ್ದಾರೆ ಎಂದು ಭಾಸ್ಕೊ ಡೆ ಸೈಕಿಯಾ ತಿಳಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜೊರ್ಹಾತ್ ಉಪ ಆಯುಕ್ತರ ಕಚೇರಿ ಹೊರಗೆ ಪ್ರತಿಭಟನೆ ಸಂದರ್ಭ ನಡೆದ ಹಿಂಸಾಚಾರದಲ್ಲಿ ಭಾಗಿಯಾದ ಆರೋಪದಲ್ಲಿ ಅಖಿಲ್ ಗೊಗೋಯಿ ಅವರನ್ನು ಡಿಸೆಂಬರ್‌ನಲ್ಲಿ ಬಂಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X