Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ‘CAA, NRC ಪ್ರತಿಭಟನೆಯಲ್ಲಿ ಭಾಗಿಯಾದ...

‘CAA, NRC ಪ್ರತಿಭಟನೆಯಲ್ಲಿ ಭಾಗಿಯಾದ ಮುಸ್ಲಿಮರಿಗೆ ಎಚ್ಚರಿಕೆ ನೀಡಲು ತಬ್ಲೀಗಿಗಳ ವಿರುದ್ಧ ಅಪಪ್ರಚಾರ ನಡೆಸಲಾಯಿತು’

ಬಾಂಬೆ ಹೈಕೋರ್ಟ್ ತೀರ್ಪಿನ ಮುಖ್ಯಾಂಶಗಳು ಇಲ್ಲಿವೆ

ವಾರ್ತಾಭಾರತಿವಾರ್ತಾಭಾರತಿ23 Aug 2020 9:46 PM IST
share
‘CAA, NRC ಪ್ರತಿಭಟನೆಯಲ್ಲಿ ಭಾಗಿಯಾದ ಮುಸ್ಲಿಮರಿಗೆ ಎಚ್ಚರಿಕೆ ನೀಡಲು ತಬ್ಲೀಗಿಗಳ ವಿರುದ್ಧ ಅಪಪ್ರಚಾರ ನಡೆಸಲಾಯಿತು’

ಮುಂಬೈ, ಆ.23: ಸಾಂಕ್ರಾಮಿಕ ಪಿಡುಗು ಅಥವಾ ವಿಪತ್ತುಗಳು ಉಂಟಾದಾಗ ರಾಜಕೀಯ ಸರಕಾರವು ಬಲಿಪಶುವನ್ನು ಹುಡುಕಲು ಪ್ರಯತ್ನಿಸುತ್ತದೆ ಮತ್ತು ಈ ವಿದೇಶಿಯರನ್ನು ಬಲಿಪಶುಗಳನ್ನಾಗಿ ಮಾಡಲು ಆಯ್ಕೆ ಮಾಡಿಕೊಂಡಿರುವ ಸಂಭವವಿದೆ ಎನ್ನುವುದನ್ನು ಸಂದರ್ಭಗಳು ತೋರಿಸುತ್ತಿವೆ ಎಂದು ಹೇಳಿರುವ ಬಾಂಬೆ ಉಚ್ಚ ನ್ಯಾಯಾಲಯದ ಔರಂಗಾಬಾದ್ ಪೀಠವು, ಮಾರ್ಚ್ ತಿಂಗಳಲ್ಲಿ ದಿಲ್ಲಿಯ ನಿಝಾಮುದ್ದೀನ್‌ ನಲ್ಲಿ ನಡೆದಿದ್ದ ಮರ್ಕಝ್ ಸಮಾವೇಶದಲ್ಲಿ ಭಾಗವಹಿಸಿದ್ದ ಹಲವಾರು ವಿದೇಶಿ ತಬ್ಲೀಗಿ ಸದಸ್ಯರ ವಿರುದ್ಧ ಮಹಾರಾಷ್ಟ್ರದಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಗಳನ್ನು ರದ್ದುಗೊಳಿಸಿದೆ.

ಕೋರ್ಟ್ ತೀರ್ಪಿನ ಮುಖ್ಯಾಂಶಗಳು ಇಲ್ಲಿವೆ

►ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳಲ್ಲಿ ತೊಡಗಿದ್ದ ಭಾರತೀಯ ಮುಸ್ಲಿಮರಿಗೆ ಪರೋಕ್ಷ ಎಚ್ಚರಿಕೆ ನೀಡಲು ವಿದೇಶಿ ಪ್ರಜೆಗಳ ಸಾಮೂಹಿಕ ಅಪರಾಧೀಕರಣವನ್ನು ಮಾಡಲಾಯಿತು ಎಂದು ನ್ಯಾಯಮೂರ್ತಿಗಳಾದ ಟಿ.ವಿ.ನಲವಡೆ ಮತ್ತು ಎಂ.ಜಿ.ಸೆವ್ಲಿಕರ್‌ ಅವರ ವಿಭಾಗೀಯ ಪೀಠವು ಹೇಳಿತು.

►ದುರುದ್ದೇಶದಿಂದ ಈ ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು

► ಜನವರಿ 2020ಕ್ಕೂ ಮೊದಲಿನಿಂದಲೂ ದೇಶದ ಹಲವೆಡೆಗಳಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದವು. ದಿಲ್ಲಿಯಲ್ಲಿ ಮಾತ್ರವಲ್ಲ, ಹೆಚ್ಚಿನ ರಾಜ್ಯಗಳಲ್ಲಿಯೂ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳಾಗುತ್ತಿದ್ದವು. ಸರಕಾರದ ಕ್ರಮದಿಂದಾಗಿ ಮುಸ್ಲಿಮರ ಮನದಲ್ಲಿ ಭೀತಿಯು ಸೃಷ್ಟಿಯಾಗಿತ್ತು ಎಂದು ಹೇಳಬಹುದಾಗಿದೆ. ಈ ಅಪಪ್ರಚಾರವು ಮುಸ್ಲಿಮರ ವಿರುದ್ಧ ಯಾವುದೇ ರೂಪದಲ್ಲಿ ಮತ್ತು ಯಾವುದೇ ಕಾರಣಕ್ಕೆ ಕ್ರಮವನ್ನು ಕೈಗೊಳ್ಳಬಹುದು ಎಂಬ ಪರೋಕ್ಷ ಎಚ್ಚರಿಕೆಯನ್ನು ನೀಡುವ ಉದ್ದೇಶವನ್ನು ಹೊಂದಿತ್ತು.

►ಇತರ ದೇಶಗಳ ಮುಸ್ಲಿಮರ ವಿರುದ್ಧ ಸಂಬಂಧವನ್ನು ಇರಿಸಿಕೊಂಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎನ್ನುವ ಎಚ್ಚರಿಕೆಯನ್ನು ಈ ಮೂಲಕ ನೀಡಲಾಯಿತು.

►ಮಹಾರಾಷ್ಟ್ರ ಪೊಲೀಸರು ಯಾಂತ್ರಿಕವಾಗಿ ಕಾರ್ಯ ನಿರ್ವಹಿಸಿರುವುದು ಸ್ಪಷ್ಟವಾಗಿದೆ. ರಾಜ್ಯ ಸರಕಾರವು ರಾಜಕೀಯ ಅನಿವಾರ್ಯತೆಗಳಡಿ ಕ್ರಮವನ್ನು ಕೈಗೊಂಡಿದ್ದಂತೆ ಕಂಡುಬರುತ್ತಿದೆ ಮತ್ತು ಪೊಲೀಸರು ಕೂಡ ಕಾನೂನುಗಳು ತಮಗೆ ನೀಡಿರುವ ಅಧಿಕಾರವನ್ನು ಬಳಸಿಕೊಳ್ಳುವ ಧೈರ್ಯವನ್ನು ಮಾಡಿರಲಿಲ್ಲ. ಪೊಲೀಸರು ತಮ್ಮ ವಿವೇಚನೆಯನ್ನು ಬಳಸಿರಲಿಲ್ಲ ಎಂದು ದಾಖಲೆಗಳು ತೋರಿಸುತ್ತವೆ ಮತ್ತು ಇದೇ ಕಾರಣದಿಂದ ಮೇಲ್ನೋಟಕ್ಕೆ ಆರೋಪಗಳನ್ನು ಸಾಬೀತುಗೊಳಿಸಲು ಯಾವುದೇ ದಾಖಲೆಗಳಿಲ್ಲದಿದ್ದರೂ ಪೊಲೀಸರು ಆರೋಪ ಪಟ್ಟಿಗಳನ್ನು ಸಲ್ಲಿಸಿದ್ದಾರೆ.

►ಒಂದೇ ರೀತಿಯ ಅಪರಾಧಗಳ ಆರೋಪವಿದ್ದರೂ ವಿವಿಧ ರಾಜ್ಯಗಳ ಪೊಲೀಸರು ಪ್ರಕರಣಗಳನ್ನು ದಾಖಲಿಸುವಾಗ ವಿಭಿನ್ನ ನಿಲುವುಗಳನ್ನು ಅನುಸರಿಸಿದ್ದಾರೆ. ಕೆಲವು ಪ್ರಕರಣಗಳಲ್ಲಿ ಎಫ್‌ಐಆರ್‌ ಗಳು ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ಅಥವಾ ಐಪಿಸಿಯ ಕಲಮ್‌ ಗಳನ್ನಷ್ಟೇ ಉಲ್ಲೇಖಿಸಲಾಗಿದ್ದರೆ, ಇನ್ನು ಕೆಲವು ಪ್ರಕರಣಗಳಲ್ಲಿ ಪೊಲೀಸರು ವಿದೇಶಿಯರ ಕಾಯ್ದೆಯ ಕಲಮ್‌ಗಳನ್ನು ಹೇರಿದ್ದಾರೆ.

►ತನ್ನೆದುರು ಇರುವ ದಾಖಲೆಗಳಂತೆ ತಬ್ಲೀಗಿ ಜಮಾಅತ್ ಮುಸ್ಲಿಮರ ಪ್ರತ್ಯೇಕ ಪಂಥವಲ್ಲ, ಅದು ಧಾರ್ಮಿಕ ಸುಧಾರಣೆಗಳಿಗಾಗಿ ಒಂದು ಆಂದೋಲನ ಮಾತ್ರವಾಗಿದೆ. ಅದೇನೇ ಇದ್ದರೂ, ವಿದೇಶಿಯರು ಇತರ ಧರ್ಮಗಳ ಜನರನ್ನು ಇಸ್ಲಾಮ್‌ ಗೆ ಮತಾಂತರಿಸುವ ಮೂಲಕ ಆ ಧರ್ಮದ ಪ್ರಸಾರದಲ್ಲಿ ತೊಡಗಿದ್ದರು ಎನ್ನುವುದನ್ನು ದಾಖಲೆಗಳಿಂದಲೂ ನಿರ್ಧರಿಸಲು ಸಾಧ್ಯವಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X