Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಂ ಕೇರ್ಸ್: ಗುಜರಾತ್ ಸಂಸ್ಥೆಯಿಂದ...

ಪಿಎಂ ಕೇರ್ಸ್: ಗುಜರಾತ್ ಸಂಸ್ಥೆಯಿಂದ ವೆಂಟಿಲೇಟರ್‌ಗಳ ಖರೀದಿಗೆ ಆರೋಗ್ಯ ಸಚಿವಾಲಯದ ಒಪ್ಪಿಗೆ ಇರಲಿಲ್ಲ

ಆರ್‌ಟಿಐ ಉತ್ತರದಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ23 Aug 2020 11:17 PM IST
share
ಪಿಎಂ ಕೇರ್ಸ್: ಗುಜರಾತ್ ಸಂಸ್ಥೆಯಿಂದ ವೆಂಟಿಲೇಟರ್‌ಗಳ ಖರೀದಿಗೆ ಆರೋಗ್ಯ ಸಚಿವಾಲಯದ ಒಪ್ಪಿಗೆ ಇರಲಿಲ್ಲ

ಮುಂಬೈ,ಆ.23: ಕೇಂದ್ರ ಸರಕಾರವು ಕೋವಿಡ್-19 ರೋಗಿಗಳ ಚಿಕಿತ್ಸೆಗಾಗಿ ಗುಜರಾತಿನ ಜ್ಯೋತಿ ಸಿಎನ್‌ಸಿ ಆಟೋಮೇಷನ್ ಲಿ.ಸಂಸ್ಥೆಯಿಂದ ಖರೀದಿಗೆ ಬೇಡಿಕೆ ಸಲ್ಲಿಸಿದ್ದ ವೆಂಟಿಲೇಟರ್‌ಗಳಿಗೆ ಜುಲೈ 20ಕ್ಕೆ ಇದ್ದಂತೆ ಆರೋಗ್ಯ ಸಚಿವಾಲಯದ ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯ (ಡಿಜಿಎಸ್‌ಎಸ್)ದ ತಾಂತ್ರಿಕ ಸಮಿತಿಯ ಶಿಫಾರಸು ದೊರಕಿರಲಿಲ್ಲ ಎನ್ನುವುದನ್ನು ಆರ್‌ಟಿಐ ಕಾಯ್ದೆಯಡಿ ಪಡೆದುಕೊಂಡ ದಾಖಲೆಗಳು ಬಹಿರಂಗಗೊಳಿಸಿವೆ ಎಂದು Thewire.in ವರದಿ ಮಾಡಿದೆ.

ಜ್ಯೋತಿ ಸಿಎನ್‌ಸಿ ವೆಂಟಿಲೇಟರ್‌ಗಳ ಪೂರೈಕೆಗಾಗಿ ಮೇ ತಿಂಗಳಿನಲ್ಲಿ ಆರೋಗ್ಯ ಸಚಿವಾಲಯದಿಂದ ಮುಂಗಡ ಹಣವನ್ನು ಪಡೆದುಕೊಂಡಿತ್ತಾದರೂ ಕಳೆದ ತಿಂಗಳವರೆಗೂ ದೇಶಾದ್ಯಂತ ಯಾವುದೇ ಆಸ್ಪತ್ರೆಯಲ್ಲಿ ಅದರ ವೆಂಟಿಲೇಟರ್‌ಗಳನ್ನು ಸ್ಥಾಪಿಸಲಾಗಿಲ್ಲ.

ಬಿಇಎಲ್ ಸೇರಿದಂತೆ ಇತರ ಮೂರು ಕಂಪನಿಗಳಿಂದ ವೆಂಟಿಲೇಟರ್‌ಗಳ ಖರೀದಿಗೆ ತಾಂತ್ರಿಕ ಸಮಿತಿಯು ಕಳೆದ ತಿಂಗಳು ಅನುಮತಿ ನೀಡಿದೆ. ಆ ಬಳಿಕ ಈ ಸಮಿತಿಯು ಯಾವುದೇ ಹೊಸ ಪರೀಕ್ಷೆಗಳನ್ನು ನಡೆಸಿದೆಯೇ ಅಥವಾ ಯಾವುದೇ ಮರುಮಾಹಿತಿಯನ್ನು ಒದಗಿಸಿದೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

ಜ್ಯೋತಿ ಸಿಎನ್‌ಸಿಯ ವೆಂಟಿಲೇಟರ್‌ಗಳು ನಿರೀಕ್ಷಿತ ಫಲಿತಾಂಶಗಳನ್ನು ನೀಡಲು ವಿಫಲವಾಗಿವೆ ಎಂದು ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಯ ಅಧೀಕ್ಷಕರು ರಾಜ್ಯ ಸರಕಾರಕ್ಕೆ ಪತ್ರ ಬರೆದ ಬಳಿಕ ಕಳೆದ ಮೇ ತಿಂಗಳಿನಲ್ಲಿ ಕಂಪನಿಯ ‘ಧಾಮನ್-1’ವೆಂಟಿಲೇಟರ್‌ಗಳು ವಿವಾದದ ಕೇಂದ್ರಬಿಂದುವಾಗಿದ್ದವು.

ಜ್ಯೋತಿ ಸಿಎನ್‌ಸಿಯ ಮಾಜಿ ಮತ್ತು ಹಾಲಿ ಪ್ರವರ್ತಕರು ಬಿಜೆಪಿಯ ಹಿರಿಯ ನಾಯಕರೊಂದಿಗೆ ನಂಟು ಹೊಂದಿದ್ದಾರೆ ಎಂದು ಸುದ್ದಿ ಜಾಲತಾಣ ‘ದಿ ವೈರ್’ ಆಗ ವರದಿ ಮಾಡಿತ್ತು. ಕಂಪನಿಯ ಕೆಲವು ಮಾಜಿ ಪ್ರವರ್ತಕರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದುಬಾರಿ ಬೆಲೆಯ ಸೂಟ್‌ನ್ನು ಕಾಣಿಕೆಯಾಗಿ ನೀಡಿದ್ದ ವಿವಾದದೊಂದಿಗೆ ಗುರುತಿಸಿಕೊಂಡಿದ್ದ ಉದ್ಯಮ ಕುಟುಂಬವೂ ಸೇರಿದೆ. ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾಗವತ್ ಅವರು ಆರೋಗ್ಯ ಸಚಿವಾಲಯದಿಂದ ಪಡೆದುಕೊಂಡಿರುವ ಉತ್ತರವು,ಹಿಂದೆ ಪ್ರಸ್ತಾಪಿಸಲಾಗಿದ್ದ ಐದು ಕಂಪನಿಗಳ ಬದಲು ಮೂರು ಕಂಪನಿಗಳಿಂದ ಈ ಮೊದಲು ಬೇಡಿಕೆ ಸಲ್ಲಿಸಿದ್ದ 58,850 ವೆಂಟಿಲೇಟರ್‌ಗಳ ಬದಲು 40,350 ವೆಂಟಿಲೇಟರ್‌ಗಳ ಖರೀದಿಗೆ ತಾಂತ್ರಿಕ ಸಮಿತಿಯು ಒಪ್ಪಿಗೆ ನೀಡಿದೆ ಎಂದು ತಿಳಿಸಿದೆ.

ಮೇ ತಿಂಗಳಿನಲ್ಲಿ ಒಟ್ಟು 22.5 ಕೋ.ರೂ.ಗಳ ಮುಂಗಡವನ್ನು ಸ್ವೀಕರಿಸಿದ್ದ ಜ್ಯೋತಿ ಸಿಎನ್‌ಸಿ ಮತ್ತು ಆಂಧ್ರಪ್ರದೇಶ ಮೆಡ್‌ಟೆಕ್ ರೆನ್ ಕಂಪನಿಗಳಿಗೆ ಜುಲೈ 20ಕ್ಕೆ ಇದ್ದಂತೆ ತಾಂತ್ರಿಕ ಸಮಿತಿಯ ಶಿಫಾರಸು ದೊರಕಿರಲಿಲ್ಲ ಎಂದೂ ಉತ್ತರದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X