Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಹಿಂಸಾಚಾರದ ಕುರಿತ ಪುಸ್ತಕ...

ದಿಲ್ಲಿ ಹಿಂಸಾಚಾರದ ಕುರಿತ ಪುಸ್ತಕ ಹಿಂದಕ್ಕೆ: ಬ್ಲೂಮ್ಸ್‌ಬರಿ ಇಂಡಿಯಾವನ್ನು ಬಹಿಷ್ಕರಿಸಿದ ಲೇಖಕರು

ವಾರ್ತಾಭಾರತಿವಾರ್ತಾಭಾರತಿ23 Aug 2020 11:18 PM IST
share
ದಿಲ್ಲಿ ಹಿಂಸಾಚಾರದ ಕುರಿತ ಪುಸ್ತಕ ಹಿಂದಕ್ಕೆ: ಬ್ಲೂಮ್ಸ್‌ಬರಿ ಇಂಡಿಯಾವನ್ನು ಬಹಿಷ್ಕರಿಸಿದ ಲೇಖಕರು

ಹೊಸದಿಲ್ಲಿ, ಆ. 23: ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಅತಿಥಿಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟೀಕಿಗಳು ವ್ಯಕ್ತವಾದ ಬಳಿಕ ದಿಲ್ಲಿ ಹಿಂಸಾಚಾರದ ಕುರಿತ ಪುಸ್ತಕವನ್ನು ಬ್ಲೂಮ್ಸ್‌ಬರಿ ಇಂಡಿಯಾ ಹಿಂದೆಗೆದುಕೊಂಡಿದೆ. ಇದರಿಂದ ಅಸಮಾಧಾನಗೊಂಡಿರುವ ಮೂವರು ಲೇಖಕರು ಬ್ಲೂಮ್ಸ್‌ಬರಿ ಇಂಡಿಯಾ ಪ್ರಕಟಿಸಬೇಕಿದ್ದ ತಮ್ಮ ಪುಸ್ತಕಗಳನ್ನು ಹಿಂದೆ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ.

ಮೋನಿಕಾ ಅರೋರಾ, ಸೋನಾಲಿ ಚಿಟಾಲ್ಕರ್ ಹಾಗೂ ಪ್ರೇರಣಾ ಮಲ್ಹೋತ್ರ ರಚಿಸಿದ ‘ದಿಲ್ಲಿ ರಯಟ್ಸ್ 2020: ದಿ ಅನ್‌ಟೋಲ್ಡ್ ಸ್ಟೋರಿ’ ಸೆಪ್ಟಂಬರ್‌ನಲ್ಲಿ ಬಿಡುಗಡೆಯಾಗಬೇಕಿತ್ತು. ದಿಲ್ಲಿಯಲ್ಲಿ ಫೆಬ್ರವರಿಯಲ್ಲಿ ನಡೆದ ಹಿಂಸಾಚಾರದದ ಮುನ್ನ ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು.

ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಪ್ರತಿಪಾದನೆಯನ್ನು ಬ್ಲೂಮ್ಸ್‌ಬರಿ ಇಂಡಿಯಾ ಶುಕ್ರವಾರ ನಿರಾಕರಿಸಿದೆ. ಈ ಕಾರ್ಯಕ್ರಮಕ್ಕೆ ಆಹ್ವಾನಿತರಲ್ಲಿ ಚಿತ್ರ ನಿರ್ಮಾಣಕಾರ ವಿವೇಕ್ ಅಗ್ನಿಹೋತ್ರಿ ಹಾಗೂ ಒಪಿ ಇಂಡಿಯಾ ಸಂಪಾದಕ ನೂಪುರ್ ಶರ್ಮಾ ಕೂಡ ಸೇರಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದು ಜಾಹೀರಾತು ಹೇಳಿತ್ತು. ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು. ಅನಂತರ ಬ್ಲೂಮ್ಸ್‌ಬರಿ ಇಂಡಿಯಾ, ತಾನು ಪುಸ್ತಕ ಪ್ರಕಟಿಸಿರುವುದಾಗಿ ತಿಳಿಸಿತ್ತು. ಆದರೆ, ಈ ಪುಸ್ತಕದ ಬಿಡುಗಡೆಯ ಯಾವುದೇ ಕಾರ್ಯಕ್ರಮವನ್ನು ಆಯೋಜಿಸುತ್ತಿಲ್ಲ ಎಂದು ಹೇಳಿತ್ತು.

ಹಲವು ಪುಸ್ತಕಗಳನ್ನು ಪ್ರಕಟಿಸಿರುವ ಹಾಗೂ ಭಾರತದ ಪ್ರಾಥಮಿಕ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್ ಪ್ರತಿಕ್ರಿಯಿಸಿ, “ನಾನು ಮತ್ತೊಮ್ಮೆ ಬ್ಲೂಮ್ಸ್‌ಬರಿ ಇಂಡಿಯಾದೊಂದಿಗೆ ಎಂದಿಗೂ ಕೆಲಸ ಮಾಡಲಾರೆ” ಎಂದಿದ್ದಾರೆ.

 ಒಂದು ಸಣ್ಣ ಒಳಸಂಚು ಭಾರತೀಯ ಪ್ರಕಾಶನವನ್ನು ನಿಯಂತ್ರಿಸುತ್ತದೆ ಹಾಗೂ ಸೈದ್ಧಾಂತಿಕ ಸೆನ್ಸಾರ್‌ಶಿಪ್ ಅನ್ನು ಹೇರುತ್ತಿರುವ ಬಗ್ಗೆ ನಾನು ಕೆಲವು ದಿನಗಳ ಹಿಂದೆ ಪ್ರಶ್ನಿಸಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

“ಹೇಗೆ ಈ ತಂತ್ರವನ್ನು ಬಳಸಲಾಗಿದೆ ಎಂಬುದಕ್ಕೆ ಒಂದು ಉದಾಹರಣೆಗೆ ನಾವು ಸಾಕ್ಷಿಯಾಗಿದ್ದೇವೆ. ನಾನು ಈ ಪುಸ್ತಕವನ್ನು ಓದಿಲ್ಲ. ಅದು ಚೆನ್ನಾಗಿದೆಯೋ ಕೆಟ್ಟದಾಗಿದೆಯೋ ಎಂಬ ಬಗ್ಗೆ ತಿಳಿದಿಲ್ಲ. ಇದು ಗುಣಮಟ್ಟ ನಿಯಂತ್ರಣ ಅಲ್ಲ. ಬದಲಾಗಿ ಸೆನ್ಸಾರ್‌ಶಿಪ್. ನಾನು ಇನ್ನೆಂದಿಗೂ ಬ್ಲೂಮ್ಸ್‌ಬರಿ ಇಂಡಿಯಾದಲ್ಲಿ ಪುಸ್ತಕ ಪ್ರಕಟಿಸಲಾರೆ” ಎಂದು ಅವರು ಹೇಳಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಲೇಖಕ ಸಂಜಯ್ ದೀಕ್ಷಿತ್, ಸೆನ್ಸಾರ್‌ಶಿಪ್ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. “ನಾನು ಬ್ಲೂಮ್ಸ್‌ಬರಿ ಇಂಡಿಯಾದೊಂದಿಗಿನ ಸಂಬಂಧವನ್ನು ಕೊನೆಗೊಳಿಸುತ್ತೇನೆ ಎಂದು ಘೋಷಿಸುತ್ತೇನೆ. ಅಲ್ಲದೆ, 2020 ಸೆಪ್ಟಂಬರ್‌ನಲ್ಲಿ ಬಿಡುಗಡೆಯಾಗಲಿರುವ ನನ್ನ ‘ನಲ್ಲಿಫೈಯಿಂಗ್ ಆರ್ಟಿಕಲ್ 370 ಆ್ಯಂಡ್ ಎನೇಕ್ಟಿಂಗ್ ಸಿಎಎ’ ಪುಸ್ತಕವನ್ನು ಪ್ರಕಟನೆಯಿಂದ ಹಿಂದೆ ತೆಗೆಯುವಂತೆ ಪ್ರಕಾಶನ ಸಂಸ್ಥೆಗೆ ನೋಟಿಸು ಕಳುಹಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

 ಜೆಎನ್‌ಯು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಹಾಗೂ ಲೇಖಕ ಆನಂದ ರಂಗನಾಥನ್, ತನ್ನ ಮುಂದಿನ ಪುಸ್ತಕ ‘ಫಾರ್ಗಾಟನ್ ಹಿರೋಸ್ ಆಫ್ ಇಂಡಿಯನ್ ಸಯನ್ಸ್’ಗೆ ನೀಡಿದ ಮುಂಗಡವನ್ನು ಬೂಮ್ಸ್‌ಬರಿಗೆ ಹಿಂದಿರುಗಿಸುತ್ತೇನೆ. ‘‘ಒಂದು ಪುಸ್ತಕ ಅಂದರೆ ಒಂದು ಚಿಂತನೆ. ಒಬ್ಬರು ಅದನ್ನು ದೃಢವಾಗಿ ಒಪ್ಪಬಹುದು ಅಥವಾ ಒಪ್ಪದೇ ಇರಬಹುದು. ಆದರೆ, ಆ ಚಿಂತನೆಯನ್ನು ನಾಶ ಮಾಡಬಾರದು. ಬ್ಲೂಮ್ಸ್‌ಬರಿಯ ನಿರ್ಧಾರವನ್ನು ಎಲ್ಲ ಲೇಖಕರು ಹಾಗೂ ಓದುಗರು ಖಂಡಿಸಬೇಕು’ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X